ಉಡುಪಿ: ಜನಸಾಮಾನ್ಯರಿಗೆ ಆಧಾರ್ ಕಾರ್ಡ್ಗಳು ಸಮರ್ಪಕವಾಗಿ ಸಿಗುತ್ತಿಲ್ಲ ಎಂಬ ದೂರುಗಳಿವೆ. ಆಧಾರ್ ಕಾರ್ಡ್ ವಿತರಣಾ ಕೇಂದ್ರಗಳನ್ನು ಹೆಚ್ಚಿಸಿ, ಮೂಲಸೌಕರ್ಯಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಇದಕ್ಕೆ ವಿಶೇಷ ಅನುದಾನ ಅಗತ್ಯವಿರುವುದರಿಂದ ಪೈಲಟ್ ಪ್ರಾಜೆಕ್ಟ್ ಸಿದ್ಧಪಡಿಸಿ ಸಂಪುಟದಲ್ಲಿ ಒಪ್ಪಿಗೆ ಪಡೆಯಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.