ಆದರೆ, ನೇಜಾರಿನಲ್ಲಿ ನಡೆದಿರುವ ಭೀಕರ ಕೊಲೆ ಪ್ರಕರಣವನ್ನು ಪೊಲೀಸರು ಅಪರೂಪದ ಪ್ರಕರಣ ಎಂದು ಪರಿಗಣಿಸಿ ತನಿಖೆಯ ಮೂಲಕ ಆರೋಪಿಯ ಬರ್ಬರ ಕೃತ್ಯವನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕು. ಆರೋಪಿಗೆ ಮರಣದಂಡನೆಯಾಗುವಂತೆ ನೋಡಿಕೊಳ್ಳಬೇಕು. ಪ್ರಕರಣದ ಮೇಲ್ವಿಚಾರಣೆಯನ್ನು ಪಶ್ಚಿಮ ವಲಯ ಐಜಿಪಿ ವಹಿಸಿಕೊಳ್ಳಬೇಕು. ವರ್ಷದೊಳಗೆ ತನಿಖೆ ಪೂರ್ಣಗೊಂಡು ವಿಶೇಷ ನ್ಯಾಯಾಲಯದ ಮುಂದೆ ದೋಷಾರೋಪಣೆ ವರದಿ ಸಲ್ಲಿಕೆಯಾಗಬೇಕು ಎಂದು ಒತ್ತಾಯಿಸಿದರು.