ದೊಡ್ಡಣ್ಣ ಮಾತನಾಡಿ, ಸೂರ್ಯ ಚಂದ್ರ ಯಾವತ್ತು ಸ್ಥಾಪಿತರಾದರೋ ಆವತ್ತಿನಿಂದಲೇ ಸನಾತನ ಧರ್ಮ ಉಳಿದುಕೊಂಡಿದೆ. ಅದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ನಮ್ಮ ಹಿರಿಯರಿಗೆ 90 ವರ್ಷ ವಯಸ್ಸಾದರೂ ಆರೋಗ್ಯ ಸಮಸ್ಯೆ ಇರುತ್ತಿರಲಿಲ್ಲ. ಅವರು ಇನ್ನೊಬ್ಬರ ಖುಷಿಗೋಸ್ಕರ ಜೀವಿಸಿ ತೃಪ್ತಿ
ಕಾಣುತ್ತಿದ್ದರು. ದೇಸಿ ಆಹಾರ ತಿನ್ನುತ್ತಿದ್ದರು. ಮೊಬೈಲ್ ಬಳಕೆ ಕಡಿಮೆ ಮಾಡಿ ನಮ್ಮಲ್ಲಿರುವ ಗ್ರಂಥ ಭಂಡಾರ ಓದಿ, ದೇವರ ಸ್ಮರಣೆ ಮಾಡಿ ಎಂದರು.