<p><strong>ಉಡುಪಿ</strong>: ಅದಮಾರು ಮಠದ ಪರ್ಯಾಯ ಮಹೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಉತ್ಸವ ಅದ್ಧೂರಿಯಾಗಿ ನಡೆಯಲಿದೆ ಎಂದು ಕೃಷ್ಣ ಸೇವಾ ಬಳಗದ ಗೌರವಾಧ್ಯಕ್ಷ ಹಾಗೂ ಶಾಸಕರೂ ಆದ ರಘುಪತಿ ಭಟ್ ಹೇಳಿದರು.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರ್ಯಾಯದ ದಿನಜೋಡುಕಟ್ಟೆಯಿಂದ ಆರಂಭವಾಗುವ ಮೆರವಣಿಗೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 15 ಜಾನಪದ ತಂಡಗಳು ಭಾಗವಹಿಸಲಿವೆ ಎಂದರು.</p>.<p>ಪರ್ಯಾಯ ಮೆರವಣಿಗೆಯಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದ್ದು,ಬಿರುದಾವಳಿ, ಜಾನಪದ ತಂಡಗಳು, ವೇದಘೋಷ ತಂಡ, ಲಕ್ಷ್ಮೀ ಶೋಭಾನೆ ತಂಡಗಳ ನಂತರ ಪರ್ಯಾಯ ಪೀಠ ಅಲಂಕರಿಸುವ ಸ್ವಾಮೀಜಿ ಹಾಗೂ ಇತರ ಯತಿಗಳು ಶಿಷ್ಟಾಚಾರದ ಪ್ರಕಾರಮೇನೆಯಲ್ಲಿ ಆಗಮಿಸಲಿದ್ದಾರೆ.</p>.<p>ಯತಿಗಳ ಹಿಂದೆ, ಸ್ತಬ್ಧಚಿತ್ರಗಳು,ವಾಹನಗಳು ಸಾಗಿ ಬರಲಿವೆ. ಶ್ರೀಗಳ ಮೇನೆ ಹೊರುವ ಜವಾಬ್ದಾರಿಯನ್ನು ಜಿಲ್ಲಾ ಬ್ರಾಹ್ಮಣ ಸಂಘಕ್ಕೆ ವಹಿಸಲಾಗಿದೆ ಎಂದರು.</p>.<p>ನಗರಸಭೆಯಿಂದ ಸ್ವಚ್ಛತೆಯ ಕುರಿತು ಜಾಗೃತಿ, ಕೃಷಿ ಇಲಾಖೆಯಿಂದ ಕೃಷಿಯ ಮಾಹಿತಿ, ಪ್ರವಾಸೋದ್ಯಮ<br />ಇಲಾಖೆಯಿಂದ ತುಳುನಾಡಿನ ವಿಶೇಷ, ಜಿಲ್ಲಾ ಪಂಚಾಯಿತಿಯಿಂದ ವಿಶೇಷ ಭಜನಾ ತಂಡಗಳ ಟ್ಯಾಬ್ಲೋಗಳು ಭಾಗವಹಿಸಲಿವೆ.</p>.<p>ಇದರ ಜತೆಗೆ,ಪೂರ್ಣಕುಂಭ ಸ್ವಾಗತ ಕೋರುವ ತಂಡ, 4 ಗೊಂಬೆ ತಂಡಗಳು, 7 ಚೆಂಡೆಬಳಗ, 1 ಪಂಚವಾದ್ಯ ತಂಡ, 20 ಜನರ ಕೊಂಬುವಾದನ ತಂಡ, ನಾಗಸ್ವರ, ಸ್ಯಾಕ್ಸೋಫೋನ್, ಚೆಂಡೆ ಮತ್ತು ಕೋಲಾಟ,ತಮಟೆ ಮತ್ತು ನಗಾರಿ, ಮರಕಾಲು ಕಿಣಿತ, ಸೇವಾದಳ, ಹರೇರಾಮ ಹರೇಕೃಷ್ಣ,<br />ಬಣ್ಣದ ಕೊಡೆ, ಮಲ್ಲಕಂಬ ತಂಡಗಳು ಮೆರವಣಿಗೆಯಲ್ಲಿ ಸೊಬಗನ್ನು ಹೆಚ್ಚಿಸಲಿವೆ ಎಂದರು.</p>.<p>ನಗರದ ರಸ್ತೆಗಳನ್ನು ಡಾಂಬರೀಕರಣಗೊಳಿಸಲಾಗಿದ್ದು, ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. 400 ಕಂಬಗಳಲ್ಲಿ 800 ಗೂಡು ದೀಪಗಳನ್ನು ಹಾಕಲಾಗಿದೆ. ಸ್ವಚ್ಛತೆಗೆ ಹೆಚ್ಚುವರಿ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ. ನಗರದ ವಿವಿಧೆಡೆ ಇ-ಶೌಚಾಲಯಗಳವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಸೇವಾ ಬಳಗದ ಗೋವಿಂದರಾಜ್, ಪ್ರದೀಪ್ ರಾವ್, ಸುಬ್ರಹ್ಮಣ್ಯ ಮಾರ್ಪಳ್ಳಿ, ಸಂತೋಷ್,<br />ಚೈತನ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಅದಮಾರು ಮಠದ ಪರ್ಯಾಯ ಮಹೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಉತ್ಸವ ಅದ್ಧೂರಿಯಾಗಿ ನಡೆಯಲಿದೆ ಎಂದು ಕೃಷ್ಣ ಸೇವಾ ಬಳಗದ ಗೌರವಾಧ್ಯಕ್ಷ ಹಾಗೂ ಶಾಸಕರೂ ಆದ ರಘುಪತಿ ಭಟ್ ಹೇಳಿದರು.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರ್ಯಾಯದ ದಿನಜೋಡುಕಟ್ಟೆಯಿಂದ ಆರಂಭವಾಗುವ ಮೆರವಣಿಗೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 15 ಜಾನಪದ ತಂಡಗಳು ಭಾಗವಹಿಸಲಿವೆ ಎಂದರು.</p>.<p>ಪರ್ಯಾಯ ಮೆರವಣಿಗೆಯಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದ್ದು,ಬಿರುದಾವಳಿ, ಜಾನಪದ ತಂಡಗಳು, ವೇದಘೋಷ ತಂಡ, ಲಕ್ಷ್ಮೀ ಶೋಭಾನೆ ತಂಡಗಳ ನಂತರ ಪರ್ಯಾಯ ಪೀಠ ಅಲಂಕರಿಸುವ ಸ್ವಾಮೀಜಿ ಹಾಗೂ ಇತರ ಯತಿಗಳು ಶಿಷ್ಟಾಚಾರದ ಪ್ರಕಾರಮೇನೆಯಲ್ಲಿ ಆಗಮಿಸಲಿದ್ದಾರೆ.</p>.<p>ಯತಿಗಳ ಹಿಂದೆ, ಸ್ತಬ್ಧಚಿತ್ರಗಳು,ವಾಹನಗಳು ಸಾಗಿ ಬರಲಿವೆ. ಶ್ರೀಗಳ ಮೇನೆ ಹೊರುವ ಜವಾಬ್ದಾರಿಯನ್ನು ಜಿಲ್ಲಾ ಬ್ರಾಹ್ಮಣ ಸಂಘಕ್ಕೆ ವಹಿಸಲಾಗಿದೆ ಎಂದರು.</p>.<p>ನಗರಸಭೆಯಿಂದ ಸ್ವಚ್ಛತೆಯ ಕುರಿತು ಜಾಗೃತಿ, ಕೃಷಿ ಇಲಾಖೆಯಿಂದ ಕೃಷಿಯ ಮಾಹಿತಿ, ಪ್ರವಾಸೋದ್ಯಮ<br />ಇಲಾಖೆಯಿಂದ ತುಳುನಾಡಿನ ವಿಶೇಷ, ಜಿಲ್ಲಾ ಪಂಚಾಯಿತಿಯಿಂದ ವಿಶೇಷ ಭಜನಾ ತಂಡಗಳ ಟ್ಯಾಬ್ಲೋಗಳು ಭಾಗವಹಿಸಲಿವೆ.</p>.<p>ಇದರ ಜತೆಗೆ,ಪೂರ್ಣಕುಂಭ ಸ್ವಾಗತ ಕೋರುವ ತಂಡ, 4 ಗೊಂಬೆ ತಂಡಗಳು, 7 ಚೆಂಡೆಬಳಗ, 1 ಪಂಚವಾದ್ಯ ತಂಡ, 20 ಜನರ ಕೊಂಬುವಾದನ ತಂಡ, ನಾಗಸ್ವರ, ಸ್ಯಾಕ್ಸೋಫೋನ್, ಚೆಂಡೆ ಮತ್ತು ಕೋಲಾಟ,ತಮಟೆ ಮತ್ತು ನಗಾರಿ, ಮರಕಾಲು ಕಿಣಿತ, ಸೇವಾದಳ, ಹರೇರಾಮ ಹರೇಕೃಷ್ಣ,<br />ಬಣ್ಣದ ಕೊಡೆ, ಮಲ್ಲಕಂಬ ತಂಡಗಳು ಮೆರವಣಿಗೆಯಲ್ಲಿ ಸೊಬಗನ್ನು ಹೆಚ್ಚಿಸಲಿವೆ ಎಂದರು.</p>.<p>ನಗರದ ರಸ್ತೆಗಳನ್ನು ಡಾಂಬರೀಕರಣಗೊಳಿಸಲಾಗಿದ್ದು, ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. 400 ಕಂಬಗಳಲ್ಲಿ 800 ಗೂಡು ದೀಪಗಳನ್ನು ಹಾಕಲಾಗಿದೆ. ಸ್ವಚ್ಛತೆಗೆ ಹೆಚ್ಚುವರಿ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ. ನಗರದ ವಿವಿಧೆಡೆ ಇ-ಶೌಚಾಲಯಗಳವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಸೇವಾ ಬಳಗದ ಗೋವಿಂದರಾಜ್, ಪ್ರದೀಪ್ ರಾವ್, ಸುಬ್ರಹ್ಮಣ್ಯ ಮಾರ್ಪಳ್ಳಿ, ಸಂತೋಷ್,<br />ಚೈತನ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>