ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ‘ಅವಕಾಶ ಸಿಕ್ಕಿದೆ ಎಂಬ ಕಾರಣಕ್ಕೆ ಪ್ರತಿರೋಧ ತೋರದ ಚಿಕ್ಕ ಸಮಾಜದ ಮೇಲೆ ಟೀಕೆಗಳನ್ನು ಮಾಡುವುದು ಸರಿಯಲ್ಲ. ಬುದ್ಧಿಜೀವಿಗಳು ಎಂದು ಹೇಳಿಕೊಳ್ಳುವ ವ್ಯಕ್ತಿಗಳು, ನೀಡುವ ಹೇಳಿಕೆಗಳಿಂದ ಸಮಾಜದ ಮೇಲೆ ಬೀರಬಹುದಾದ ಗಂಭೀರ ಪರಿಣಾಮಗಳ ಬಗ್ಗೆ ಅರಿತು ಮಾತನಾಡಬೇಕು’ ಎಂದು ಸ್ವಾಮೀಜಿ ಹೇಳಿದರು.