<p><strong>ಪಡುಬಿದ್ರಿ</strong>: ಅದಾನಿ ಪವರ್ ಲಿಮಿಟೆಡ್ - ಉಡುಪಿ ಟಿಪಿಪಿಯ ಸಿಎಸ್ಆರ್ ಅಂಗವಾದ ಅದಾನಿ ಫೌಂಡೇಷನ್ ಮೂಲಕ ಬೆಳಪು ಗ್ರಾಮದ ಪಣಿಯೂರಿನಿಂದ ಪಡುಬಿದ್ರಿ ರೈಲು ನಿಲ್ದಾಣದವರೆಗೆ ನಿರ್ಮಿಸಿರುವ ಕಾಂಕ್ರೀಟ್ ರಸ್ತೆಯ ಉದ್ಘಾಟನೆ, ಎರಡನೇ ಹಂತದ ಕಾಮಗಾರಿಯ ಶಿಲಾನ್ಯಾಸ ಶನಿವಾರ ನೆರವೇರಿತು.</p>.<p>ರೈಲು ನಿಲ್ದಾಣದವರೆಗೆ ಪ್ರಥಮ ಹಂತದ ₹ 20 ಲಕ್ಷ ವೆಚ್ಚದ, 416 ಮೀ. ಉದ್ದದ ಕಾಂಕ್ರೀಟ್ ರಸ್ತೆಯ ಉದ್ಘಾಟನೆ, ಎರಡನೇ ಹಂತದ ಸುಮಾರು ₹ 20 ಲಕ್ಷ ವೆಚ್ಚದಲ್ಲಿ 580 ಮೀ ಉದ್ದದ ರಸ್ತೆಯ ವಿಸ್ತರಣಾ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.</p>.<p>ಅದಾನಿ ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಬೆಳಪು ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಉದ್ಘಾಟಿಸಿದರು.</p>.<p>ಬೆಳಪು ಗ್ರಾಮವು ಈಗ ಮಾದರಿ ಗ್ರಾಮವಾಗಿ ಪರಿವರ್ತನೆಗೊಂಡಿದೆ. ಬೆಳಪು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇದುವರೆಗೂ ಸುಮಾರು ₹ 2 ಕೋಟಿ ಮೌಲ್ಯದ ಮೂಲಸೌಕರ್ಯ ಕಾಮಗಾರಿಗಳನ್ನು ಪೂರೈಸಲಾಗಿದೆ ಎಂದು ಕಿಶೋರ್ ಆಳ್ವ ಹೇಳಿದರು.</p>.<p>ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ರೈಲು ನಿಲ್ದಾಣ ಸಂಪರ್ಕಿಸುವ ರಸ್ತೆ ಹದಗೆಟ್ಟಿದ್ದು, ದುರಸ್ತಿ ಮಾಡುವಂತೆ ರೈಲ್ವೆ ಇಲಾಖೆಗೆ ಹಲವು ಬಾರಿ ಮನವಿ ಮಾಡಲಾಗಿತ್ತು. ಅವರು ಸ್ಪಂದಿಸಿರಲಿಲ್ಲ. ಅದಾನಿ ಸಿಎಸ್ಆರ್ನ ವಾರ್ಷಿಕ ಕ್ರಿಯಾಯೋಜನೆಗೆ ಸೇರಿಸಿ ಅದಾನಿ ಫೌಂಡೇಷನ್ ಮೂಲಕ ಕಾಮಗಾರಿ ನಡೆಸಲಾಗಿದೆ ಎಂದರು.</p>.<p>ಉಪಾಧ್ಯಕ್ಷೆ ಶೋಭಾ ಭಟ್, ಸದಸ್ಯರಾದ ಶರತ್ ಕುಮಾರ್, ಸುಲೈಮಾನ್, ನಫೀಸಾ, ಪ್ರಮುಖರಾದ ಕರುಣಾಕರ ಶೆಟ್ಟಿ, ಯು.ಸಿ.ಶೇಖಬ್ಬ, ಅದಾನಿ ಪವರ್ ಲಿಮಿಟೆಡ್ನ ಅಸೋಸಿಯೇಟ್ ಜನರಲ್ ಮ್ಯಾನೇಜರ್ ರವಿ ಆರ್.ಜೇರೆ, ಫೌಂಡೇಷನ್ನ ಅನುದೀಪ್, ಸ್ಥಳೀಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಡುಬಿದ್ರಿ</strong>: ಅದಾನಿ ಪವರ್ ಲಿಮಿಟೆಡ್ - ಉಡುಪಿ ಟಿಪಿಪಿಯ ಸಿಎಸ್ಆರ್ ಅಂಗವಾದ ಅದಾನಿ ಫೌಂಡೇಷನ್ ಮೂಲಕ ಬೆಳಪು ಗ್ರಾಮದ ಪಣಿಯೂರಿನಿಂದ ಪಡುಬಿದ್ರಿ ರೈಲು ನಿಲ್ದಾಣದವರೆಗೆ ನಿರ್ಮಿಸಿರುವ ಕಾಂಕ್ರೀಟ್ ರಸ್ತೆಯ ಉದ್ಘಾಟನೆ, ಎರಡನೇ ಹಂತದ ಕಾಮಗಾರಿಯ ಶಿಲಾನ್ಯಾಸ ಶನಿವಾರ ನೆರವೇರಿತು.</p>.<p>ರೈಲು ನಿಲ್ದಾಣದವರೆಗೆ ಪ್ರಥಮ ಹಂತದ ₹ 20 ಲಕ್ಷ ವೆಚ್ಚದ, 416 ಮೀ. ಉದ್ದದ ಕಾಂಕ್ರೀಟ್ ರಸ್ತೆಯ ಉದ್ಘಾಟನೆ, ಎರಡನೇ ಹಂತದ ಸುಮಾರು ₹ 20 ಲಕ್ಷ ವೆಚ್ಚದಲ್ಲಿ 580 ಮೀ ಉದ್ದದ ರಸ್ತೆಯ ವಿಸ್ತರಣಾ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.</p>.<p>ಅದಾನಿ ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಬೆಳಪು ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಉದ್ಘಾಟಿಸಿದರು.</p>.<p>ಬೆಳಪು ಗ್ರಾಮವು ಈಗ ಮಾದರಿ ಗ್ರಾಮವಾಗಿ ಪರಿವರ್ತನೆಗೊಂಡಿದೆ. ಬೆಳಪು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇದುವರೆಗೂ ಸುಮಾರು ₹ 2 ಕೋಟಿ ಮೌಲ್ಯದ ಮೂಲಸೌಕರ್ಯ ಕಾಮಗಾರಿಗಳನ್ನು ಪೂರೈಸಲಾಗಿದೆ ಎಂದು ಕಿಶೋರ್ ಆಳ್ವ ಹೇಳಿದರು.</p>.<p>ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ರೈಲು ನಿಲ್ದಾಣ ಸಂಪರ್ಕಿಸುವ ರಸ್ತೆ ಹದಗೆಟ್ಟಿದ್ದು, ದುರಸ್ತಿ ಮಾಡುವಂತೆ ರೈಲ್ವೆ ಇಲಾಖೆಗೆ ಹಲವು ಬಾರಿ ಮನವಿ ಮಾಡಲಾಗಿತ್ತು. ಅವರು ಸ್ಪಂದಿಸಿರಲಿಲ್ಲ. ಅದಾನಿ ಸಿಎಸ್ಆರ್ನ ವಾರ್ಷಿಕ ಕ್ರಿಯಾಯೋಜನೆಗೆ ಸೇರಿಸಿ ಅದಾನಿ ಫೌಂಡೇಷನ್ ಮೂಲಕ ಕಾಮಗಾರಿ ನಡೆಸಲಾಗಿದೆ ಎಂದರು.</p>.<p>ಉಪಾಧ್ಯಕ್ಷೆ ಶೋಭಾ ಭಟ್, ಸದಸ್ಯರಾದ ಶರತ್ ಕುಮಾರ್, ಸುಲೈಮಾನ್, ನಫೀಸಾ, ಪ್ರಮುಖರಾದ ಕರುಣಾಕರ ಶೆಟ್ಟಿ, ಯು.ಸಿ.ಶೇಖಬ್ಬ, ಅದಾನಿ ಪವರ್ ಲಿಮಿಟೆಡ್ನ ಅಸೋಸಿಯೇಟ್ ಜನರಲ್ ಮ್ಯಾನೇಜರ್ ರವಿ ಆರ್.ಜೇರೆ, ಫೌಂಡೇಷನ್ನ ಅನುದೀಪ್, ಸ್ಥಳೀಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>