<p><strong>ಉಡುಪಿ</strong>: ಕರಾವಳಿಯಲ್ಲ ಹಿಂದೆ ಭೂಗತ ಲೋಕದ ಚಟುವಟಿಕೆಗಳು ಹೆಚ್ಚಾಗಿದ್ದವು. ಕಾಲ ಬದಲಾದಂತೆ ಅಪರಾಧಗಳ ಸ್ವರೂಪವೂ ಬದಲಾಗುತ್ತಿರುತ್ತದೆ. ಎಂತಹ ಪರಿಸ್ಥಿತಿ ಇದ್ದರೂ ಎದುರಿಸಲು ಪೊಲೀಸ್ ಇಲಾಖೆ ಸಮರ್ಥವಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.</p>.<p>ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿ ಸಭೆ ನಡೆಸಿ ಮಾತನಾಡಿದ ಅವರು, ಹಿಜಾಬ್ ಕಾರಣದಿಂದ ಕರಾವಳಿ ಸೂಕ್ಷ್ಮವಾಗಿಲ್ಲ, ಹಿಂದಿನಿಂದಲೂ ಸೂಕ್ಷ್ಮ ಪ್ರದೇಶವಾಗಿದೆ. ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡಲ ಇಲಾಖೆ ಬದ್ಧವಾಗಿದೆ ಎಂದರು.</p>.<p>ಮಂಗಳೂರಿನಲ್ಲಿ ಹಿಜಾಬ್ ವಿಚಾರವಾಗಿ ಪ್ರತಿಭಟನೆ ನಡೆದಿದ್ದು, ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ ಎಂದರು.</p>.<p>ಉಡುಪಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಬರುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ವಿಶ್ಲೇಷಣೆ ಅಗತ್ಯವಿದ್ದು, ಚೆಕ್ಪೋಸ್ಟ್ಗಳಲ್ಲಿ ವಾಹನಗಳ ತಪಾಸಣೆ ಹೆಚ್ಚು ಮಾಡುವುದು ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.</p>.<p>ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಡೆಯುತ್ತಿದ್ದು, ಕಾಲಾವಕಾಶ ಬೇಕು. ಸಂತೋಷ್ ಪಡೆದುಕೊಂಡ ಗುತ್ತಿಗೆಗಳ ವಿವರ ಹಾಗೂ ಲೆಕ್ಕ ಪರಿಶೋಧನೆ ವಿವರ ಕಲೆಹಾಕಲು ಸಮಯ ಹಿಡಿಯುತ್ತದೆ. ಎಫ್ಎಸ್ಎಲ್ ವರದಿ ಕೈಸೇರಿಲ್ಲ. ಎಲ್ಲ ಆಯಾಮಗಳಲ್ಲೂ ಪ್ರಕರಣದ ತನಿಖೆ ನಡೆಯುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಕರಾವಳಿಯಲ್ಲ ಹಿಂದೆ ಭೂಗತ ಲೋಕದ ಚಟುವಟಿಕೆಗಳು ಹೆಚ್ಚಾಗಿದ್ದವು. ಕಾಲ ಬದಲಾದಂತೆ ಅಪರಾಧಗಳ ಸ್ವರೂಪವೂ ಬದಲಾಗುತ್ತಿರುತ್ತದೆ. ಎಂತಹ ಪರಿಸ್ಥಿತಿ ಇದ್ದರೂ ಎದುರಿಸಲು ಪೊಲೀಸ್ ಇಲಾಖೆ ಸಮರ್ಥವಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.</p>.<p>ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿ ಸಭೆ ನಡೆಸಿ ಮಾತನಾಡಿದ ಅವರು, ಹಿಜಾಬ್ ಕಾರಣದಿಂದ ಕರಾವಳಿ ಸೂಕ್ಷ್ಮವಾಗಿಲ್ಲ, ಹಿಂದಿನಿಂದಲೂ ಸೂಕ್ಷ್ಮ ಪ್ರದೇಶವಾಗಿದೆ. ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡಲ ಇಲಾಖೆ ಬದ್ಧವಾಗಿದೆ ಎಂದರು.</p>.<p>ಮಂಗಳೂರಿನಲ್ಲಿ ಹಿಜಾಬ್ ವಿಚಾರವಾಗಿ ಪ್ರತಿಭಟನೆ ನಡೆದಿದ್ದು, ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ ಎಂದರು.</p>.<p>ಉಡುಪಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಬರುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ವಿಶ್ಲೇಷಣೆ ಅಗತ್ಯವಿದ್ದು, ಚೆಕ್ಪೋಸ್ಟ್ಗಳಲ್ಲಿ ವಾಹನಗಳ ತಪಾಸಣೆ ಹೆಚ್ಚು ಮಾಡುವುದು ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.</p>.<p>ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಡೆಯುತ್ತಿದ್ದು, ಕಾಲಾವಕಾಶ ಬೇಕು. ಸಂತೋಷ್ ಪಡೆದುಕೊಂಡ ಗುತ್ತಿಗೆಗಳ ವಿವರ ಹಾಗೂ ಲೆಕ್ಕ ಪರಿಶೋಧನೆ ವಿವರ ಕಲೆಹಾಕಲು ಸಮಯ ಹಿಡಿಯುತ್ತದೆ. ಎಫ್ಎಸ್ಎಲ್ ವರದಿ ಕೈಸೇರಿಲ್ಲ. ಎಲ್ಲ ಆಯಾಮಗಳಲ್ಲೂ ಪ್ರಕರಣದ ತನಿಖೆ ನಡೆಯುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>