ಜಿಲ್ಲೆಯಲ್ಲಿ ಸದ್ಯ ‘ಕೃಷಿ ಯಂತ್ರಧಾರೆ’ ಯೋಜನೆಯ ಎರಡು ಕೇಂದ್ರಗಳಷ್ಟೇ ಕಾರ್ಯನಿರ್ವಹಿಸುತ್ತಿವೆ. ಬಾಗಿಲು ಮುಚ್ಚಿರುವ ಕೇಂದ್ರಗಳಲ್ಲಿರುವ ಕೃಷಿ ಯಂತ್ರೋಪಕರಣಗಳಲ್ಲಿ ಕೆಲವನ್ನು ಬೇರೆ ಕೇಂದ್ರಗಳಿಗೆ ವರ್ಗಾಯಿಸಲಾಗಿದೆ. ಇನ್ನುಳಿದವುಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.
–ಪೂಜಾ ಎಂ.ಎನ್., ಸಹಾಯಕ ನಿರ್ದೇಶಕಿ ಕೃಷಿ ಇಲಾಖೆ
‘ಕೃಷಿ ಯಂತ್ರಧಾರೆ’ ಕೇಂದ್ರಗಳನ್ನು ಮತ್ತೆ ಆರಂಭಿಸಬೇಕೆಂದು ನಾವು ಜಿಲ್ಲಾಧಿಕಾರಿಗೂ ಮನವಿ ಸಲ್ಲಿಸಿದ್ದೆವು. ಆದರೆ ಈ ಕೇಂದ್ರಗಳ ನಿರ್ವಹಣೆಗೆ ಯಾರೂ ಮುಂದೆ ಬರುತ್ತಿಲ್ಲ.
–ಬಿ.ಸತ್ಯನಾರಾಯಣ ಉಡುಪ, ಪ್ರಧಾನ ಕಾರ್ಯದರ್ಶಿ ಭಾರತೀಯ ಕಿಸಾನ್ ಸಂಘದ ಜಿಲ್ಲಾ ಘಟಕ