ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸಚಿವರು, ‘ನನಗೆ ಕೃಷಿ ಹೊಸದಲ್ಲ, ನಾನೂ ರೈತನ ಮಗನೇ. ರಂಟೆ ಹೊಡೆದಿದ್ದೇನೆ, ಸಲಕೆ ಹಿಡಿದು ಕೆಲಸ ಮಾಡಿದ್ದೇನೆ, ನಾಟಿ ಮಾಡಿದ್ದೇನೆ. ಪೊಲೀಸ್ ಅಧಿಕಾರಿ ಹಾಗೂ ನಟನಾದ ಬಳಿಕ ಕೃಷಿ ಕಾರ್ಯ ಮರೆತುಹೋದಂತಾಗಿತ್ತು. ಈಗ ಮತ್ತೆ ಹಳೆ ನೆನಪುಗಳು ಮರುಕಳಿಸಿದಂತಾಯಿತು’ ಎಂದರು.