ಉಡುಪಿ: ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರಾಷ್ಟ್ರೀಯ ಹೆದ್ದಾರಿ 169 ‘ಎ’ ತೀರ್ಥಹಳ್ಳಿ- ಉಡುಪಿ-ಮಂಗಳೂರು ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಹಿಂದೆ, ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಿ, ಪರ್ಯಾಯ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಆದೇಶಿಸಲಾಗಿತ್ತು. ಮಳೆಯ ಪ್ರಮಾಣ ಕ್ಷೀಣವಾಗಿರುವುದರಿಂದ ಆದೇಶವನ್ನು ತಾತ್ಕಾಲಿಕ ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.