ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಘಾಟಿ ಕುಸಿತ: ವಾಹನ ಸಂಚಾರಕ್ಕೆ ನಿರ್ಬಂಧ 12ವರೆಗೆ

Last Updated 10 ಜುಲೈ 2022, 17:35 IST
ಅಕ್ಷರ ಗಾತ್ರ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ವ್ಯಾಪ್ತಿಯ ಆಗುಂಬೆ ಘಾಟಿಯ 11ನೇ ತಿರುವಿನಲ್ಲಿ ಭೂಕುಸಿತವಾಗಿರುವುದರಿಂದ ಜುಲೈ 12ರವರೆಗೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ.

ಜುಲೈ 30ರವರೆಗೆ ಘಾಟಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗಿದೆ. ಘಾಟಿಯ ಬದಲಾಗಿ ರಾಷ್ಟ್ರೀಯ ಹೆದ್ದಾರಿ 169ರ ಕೊಲ್ಲಾಪುರ–ಮಂಗಳೂರು ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ರಾಷ್ಟ್ರೀಯ 169ರ ಮೂಲಕ ಸಂಚರಿಸುವ ವಾಹನಗಳು ತೀರ್ಥಹಳ್ಳಿ–ಕೊಪ್ಪ–ಶೃಂಗೇರಿ–ಕಾರ್ಕಳ–ಮಂಗಳೂರು ಮಾರ್ಗವಾಗಿ ಸಂಚರಿಸಬೇಕು. 169 ಎ ವ್ಯಾಪ್ತಿಯಲ್ಲಿ ಸಂಚರಿಸುವ ವಾಹನಗಳು ತೀರ್ಥಹಳ್ಳಿ–ಆಗುಂಬೆ,ಶೃಂಗೇರಿ–ಕಾರ್ಕಳ ಮಾರ್ಗವಾಗಿ ಮಂಗಳೂರಿಗೆ ಸಂಚರಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT