<p><strong>ಹೆಬ್ರಿ</strong>: ಉಡುಪಿ–ಹೆಬ್ರಿ–ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ ‘169ಎ’ಯ ಆಗುಂಬೆ ಘಾಟಿಯ 6ನೇ ತಿರುವಿನಲ್ಲಿ ಶುಕ್ರವಾರ ಸಂಜೆ ಭೂಕುಸಿತ ಸಂಭವಿಸಿ ಸಂಚಾರಕ್ಕೆ ತೊಡಕಾಗಿತ್ತು.</p><p>ಶನಿವಾರ ಬೆಳಿಗ್ಗೆಯಿಂದ ಮಣ್ಣು ತೆರವು ಕಾರ್ಯಾಚರಣೆ ನಡೆದಿದ್ದು, ಮಧ್ಯಾಹ್ನದ ಹೊತ್ತಿಗೆ ಮುಕ್ತಾಯಗೊಂಡು ಹೆದ್ದಾರಿಯು ಸಂಚಾರಕ್ಕೆ ಮುಕ್ತವಾಯಿತು.</p><p>ಭೂಕುಸಿತವಾಗಿ ಚಲಿಸುತ್ತಿದ್ದ ಪಿಕ್ಅಪ್ ಮೇಲೆ ಮರ ಬಿದ್ದು, ಒಬ್ಬರು ಗಾಯಗೊಂಡಿದ್ದರು. ಘಟನೆಯಿಂದ ಆಗುಂಬೆ ಘಾಟಿ ಸಂಪೂರ್ಣ ಬಂದ್ ಆಗಿತ್ತು. ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಿದವು. ಅರಣ್ಯ, ರಾಷ್ಟ್ರೀಯ ಹೆದ್ದಾರಿ, ಪೋಲಿಸ್ ಇಲಾಖೆಯ ಸಹಯೋಗದೊಂದಿಗೆ ಕಾರ್ಯಾಚರಣೆ ನಡೆಯಿತು.</p><p>ವಲಯ ಅರಣ್ಯಾಧಿಕಾರಿಗಳಾದ ಚಿದಾನಂದಪ್ಪ ಜಿ., ಮಂಜುಳಾ, ಆಗುಂಬೆ ಪಿಎಸ್ಐ ಶಿವಾನಂದ<br>ಪಾಟೀಲ್, ಹೆಬ್ರಿ ಪಿ.ಎಸ್.ಐ ಮಹಾಂತೇಶ್ ಜಾಬಗೌಡ, ರಾಷ್ಟ್ರೀಯ ಹೆದ್ದಾರಿಯ ಎಂಜಿನಿಯರ್ ಶಶಿಧರ್, ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಬ್ರಿ</strong>: ಉಡುಪಿ–ಹೆಬ್ರಿ–ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ ‘169ಎ’ಯ ಆಗುಂಬೆ ಘಾಟಿಯ 6ನೇ ತಿರುವಿನಲ್ಲಿ ಶುಕ್ರವಾರ ಸಂಜೆ ಭೂಕುಸಿತ ಸಂಭವಿಸಿ ಸಂಚಾರಕ್ಕೆ ತೊಡಕಾಗಿತ್ತು.</p><p>ಶನಿವಾರ ಬೆಳಿಗ್ಗೆಯಿಂದ ಮಣ್ಣು ತೆರವು ಕಾರ್ಯಾಚರಣೆ ನಡೆದಿದ್ದು, ಮಧ್ಯಾಹ್ನದ ಹೊತ್ತಿಗೆ ಮುಕ್ತಾಯಗೊಂಡು ಹೆದ್ದಾರಿಯು ಸಂಚಾರಕ್ಕೆ ಮುಕ್ತವಾಯಿತು.</p><p>ಭೂಕುಸಿತವಾಗಿ ಚಲಿಸುತ್ತಿದ್ದ ಪಿಕ್ಅಪ್ ಮೇಲೆ ಮರ ಬಿದ್ದು, ಒಬ್ಬರು ಗಾಯಗೊಂಡಿದ್ದರು. ಘಟನೆಯಿಂದ ಆಗುಂಬೆ ಘಾಟಿ ಸಂಪೂರ್ಣ ಬಂದ್ ಆಗಿತ್ತು. ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಿದವು. ಅರಣ್ಯ, ರಾಷ್ಟ್ರೀಯ ಹೆದ್ದಾರಿ, ಪೋಲಿಸ್ ಇಲಾಖೆಯ ಸಹಯೋಗದೊಂದಿಗೆ ಕಾರ್ಯಾಚರಣೆ ನಡೆಯಿತು.</p><p>ವಲಯ ಅರಣ್ಯಾಧಿಕಾರಿಗಳಾದ ಚಿದಾನಂದಪ್ಪ ಜಿ., ಮಂಜುಳಾ, ಆಗುಂಬೆ ಪಿಎಸ್ಐ ಶಿವಾನಂದ<br>ಪಾಟೀಲ್, ಹೆಬ್ರಿ ಪಿ.ಎಸ್.ಐ ಮಹಾಂತೇಶ್ ಜಾಬಗೌಡ, ರಾಷ್ಟ್ರೀಯ ಹೆದ್ದಾರಿಯ ಎಂಜಿನಿಯರ್ ಶಶಿಧರ್, ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>