ಕಾರ್ಕಳ ತಾಲ್ಲೂಕಿನ ವ್ಯಾಪ್ತಿಯ ಮೀಸಲು ಅರಣ್ಯ ಪ್ರದೇಶದಲ್ಲಿ ಜಿಂಕೆ, ಕಡವೆ, ಕಾಡುಕೋಣಗಳು ಹೆಚ್ಚಾಗಿದ್ದು, ಎಲ್ಲೆಂದರಲ್ಲಿ ಬಿದ್ದಿರುವ ಮದ್ಯದ ಬಾಟಲಿಗಳಿಂದ ಅವುಗಳ ಸಂಚಾರಕ್ಕೆ ತೊಂದರೆಯಾಗಿದೆ. ರಾತ್ರಿಯ ಹೊತ್ತು ರಸ್ತೆ ಬದಿಯಲ್ಲಿಯೇ ಮದ್ಯಸೇವಿಸುವ ಕುಡುಕರು ಬಾಟಲಿಗಳನ್ನು ಕಾಡಿನೊಳಗೆ ಎಸೆಯುತ್ತಿದ್ದಾರೆ. ಪರಿಣಾಮ ವನ್ಯಜೀವಿಗಳ ಜೀವಕ್ಕೆ ಕುತ್ತು ಎದುರಾಗಿದೆ ಎಂದು ಪ್ರಾಣಿಪ್ರಿಯರು ಆತಂಕ ಪಟ್ಟಿದ್ದಾರೆ.