ಉಡುಪಿ: ನೆರೆ ಸಂತ್ರಸ್ಥರಿಗೆ ರಾಜ್ಯ ಸರ್ಕಾರತಾತ್ಕಾಲಿಕ ಪರಿಹಾರ ವಿತರಣೆ ಮಾಡುತ್ತಿದೆ. ಮನೆ, ರಸ್ತೆ, ಸೇತುವೆಗಳ ನಿರ್ಮಾಣಕ್ಕೆ ಹೆಚ್ಚಿನ ಹಣದ ಅಗತ್ಯವಿದೆ. ಹಸಿ ಭೂಮಿಯಲ್ಲಿ ಶಾಶ್ವತ ಕಾಮಗಾರಿ ನಡೆಸಲು ಸಾಧ್ಯವಿಲ್ಲದ್ದರಿಂದ ಒಂದು ತಿಂಗಳು ತಡವಾಗಿ ಕೇಂದ್ರದಿಂದ ಹಣ ಬಿಡುಗಡೆಯಾದರೂ ಅಡ್ಡಿಯಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.