<p><strong>ಉಡುಪಿ</strong>: ಆಮ್ಚೆ ಕ್ರಿಯೇಷನ್ಸ್ ಅಡಿಯಲ್ಲಿ ನಿರ್ಮಾಣವಾಗಿರುವ ಕೊಂಕಣಿ ಭಾಷೆಯ ‘ಆಮ್ಚೆ ಸಂಸಾರ್’ ಚಲನಚಿತ್ರದ ಪ್ರೀಮಿಯರ್ ಶೋ ಅ.24ರಂದು ಮಧ್ಯಾಹ್ನ 3ಕ್ಕೆ ಮಣಿಪಾಲದ ಕೆನರಾ ಮಾಲ್ನ ಭಾರತ್ ಸಿನಿಮಾಸ್ನಲ್ಲಿ ನಡೆಯಲಿದೆ ಎಂದು ಸಿನಿಮಾದ ಸಿನಿಮಾಟೊಗ್ರಫರ್ ಭುವನೇಶ್ ಪ್ರಭು ತಿಳಿಸಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಿಮಿಯರ್ ಶೋವನ್ನು ನಿರ್ದೇಶಕ ಕಾಸರಗೋಡು ಚಿನ್ನ ಉದ್ಘಾಟಿಸಲಿದ್ದಾರೆ. ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು.</p>.<p>2 ಗಂಟೆ 10 ನಿಮಿಷ ಅವಧಿಯ ಚಿತ್ರವು ಹಿರಿಯರ ಕುರಿತಾದ ಕಥಾವಸ್ತುವನ್ನು ಹೊಂದಿದೆ. ಚಿತ್ರ ನಿರ್ಮಾಣಕ್ಕಾಗಿ ₹ 30 ಲಕ್ಷ ವೆಚ್ಚವಾಗಿದೆ. ಉಡುಪಿ ಕುಂದಾಪುರ, ಕಾರ್ಕಳ ತಾಲ್ಲೂಕಿನ ಹಲವೆಡೆ ಚಿತ್ರೀಕರಣ ಮಾಡಲಾಗಿದೆ ಎಂದು ತಿಳಿಸಿದರು.</p>.<p>ಆರ್ಎಸ್ಬಿ ಭಾಷಿಕರು ಹೆಚ್ಚಾಗಿರುವ ಮುಂಬೈ, ಗೋವಾ, ಬೆಳಗಾವಿ, ದಕ್ಷಿಣ ಕನ್ನಡ, ಬೆಂಗಳೂರು, ಪುಣೆ ಸೇರಿದಂತೆ ಹಲವೆಡೆ ಚಿತ್ರ ಬಿಡುಗಡೆ ಮಾಡಲಾಗುವುದು ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ನಿರ್ದೇಶಕ ಸಂದೀಪ್ ಕಾಮತ್, ನಾಯಕ ರೋಹನ್ ನಾಯಕ್, ಕಲಾವಿದರಾದ ಪಾಂಡುರಂಗ ಪ್ರಭು, ಪ್ರವೀಣ್ ಪ್ರಭು, ಪುಂಡಲೀಕ ಮರಾಠೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಆಮ್ಚೆ ಕ್ರಿಯೇಷನ್ಸ್ ಅಡಿಯಲ್ಲಿ ನಿರ್ಮಾಣವಾಗಿರುವ ಕೊಂಕಣಿ ಭಾಷೆಯ ‘ಆಮ್ಚೆ ಸಂಸಾರ್’ ಚಲನಚಿತ್ರದ ಪ್ರೀಮಿಯರ್ ಶೋ ಅ.24ರಂದು ಮಧ್ಯಾಹ್ನ 3ಕ್ಕೆ ಮಣಿಪಾಲದ ಕೆನರಾ ಮಾಲ್ನ ಭಾರತ್ ಸಿನಿಮಾಸ್ನಲ್ಲಿ ನಡೆಯಲಿದೆ ಎಂದು ಸಿನಿಮಾದ ಸಿನಿಮಾಟೊಗ್ರಫರ್ ಭುವನೇಶ್ ಪ್ರಭು ತಿಳಿಸಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಿಮಿಯರ್ ಶೋವನ್ನು ನಿರ್ದೇಶಕ ಕಾಸರಗೋಡು ಚಿನ್ನ ಉದ್ಘಾಟಿಸಲಿದ್ದಾರೆ. ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು.</p>.<p>2 ಗಂಟೆ 10 ನಿಮಿಷ ಅವಧಿಯ ಚಿತ್ರವು ಹಿರಿಯರ ಕುರಿತಾದ ಕಥಾವಸ್ತುವನ್ನು ಹೊಂದಿದೆ. ಚಿತ್ರ ನಿರ್ಮಾಣಕ್ಕಾಗಿ ₹ 30 ಲಕ್ಷ ವೆಚ್ಚವಾಗಿದೆ. ಉಡುಪಿ ಕುಂದಾಪುರ, ಕಾರ್ಕಳ ತಾಲ್ಲೂಕಿನ ಹಲವೆಡೆ ಚಿತ್ರೀಕರಣ ಮಾಡಲಾಗಿದೆ ಎಂದು ತಿಳಿಸಿದರು.</p>.<p>ಆರ್ಎಸ್ಬಿ ಭಾಷಿಕರು ಹೆಚ್ಚಾಗಿರುವ ಮುಂಬೈ, ಗೋವಾ, ಬೆಳಗಾವಿ, ದಕ್ಷಿಣ ಕನ್ನಡ, ಬೆಂಗಳೂರು, ಪುಣೆ ಸೇರಿದಂತೆ ಹಲವೆಡೆ ಚಿತ್ರ ಬಿಡುಗಡೆ ಮಾಡಲಾಗುವುದು ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ನಿರ್ದೇಶಕ ಸಂದೀಪ್ ಕಾಮತ್, ನಾಯಕ ರೋಹನ್ ನಾಯಕ್, ಕಲಾವಿದರಾದ ಪಾಂಡುರಂಗ ಪ್ರಭು, ಪ್ರವೀಣ್ ಪ್ರಭು, ಪುಂಡಲೀಕ ಮರಾಠೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>