<p><strong>ಉಡುಪಿ: </strong>ಕೋವಿಡ್ ಸೋಂಕು ಹರಡುವಿಕೆ ತಡೆಗೆ ಶ್ರಮಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.</p>.<p>ಕೋವಿಡ್ನಿಂದ ರಾಜ್ಯದ ಜನರೆಲ್ಲರೂ ಮನೆಯಲ್ಲಿದ್ದರೂ ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರ ಸೂಚಿಸಿದ ಕೆಲಸಗಳನ್ನು ನಿರ್ವಹಿಸಿದ್ದಾರೆ. ಕರಾವಳಿಯ ದುರ್ಗಮ ಪ್ರದೇಶಕ್ಕೆ ತೆರಳಿ ಆಹಾರ ಹಂಚಿದ್ದಾರೆ. ಹಲವು ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಹಲ್ಲೆಗಳು ನಡೆದಿವೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕೋವಿಡ್ ಕಾರ್ಯ ನಿರ್ವಹಣೆ ವೇಳೆ ಗುಣಮಟ್ಟದ ಸುರಕ್ಷತಾ ಸಾಧನಗಳನ್ನು ಕೊಡದ ಕಾರಣ ಹಲವರಿಗೆ ಸೋಂಕು ತಗುಲಿದೆ. ಹಾಗಾಗಿ, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ತಾರತಮ್ಯವಿಲ್ಲದೆ ₹ 50 ಲಕ್ಷದವರೆಗೂ ವಿಮಾ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು.</p>.<p>ಐಸಿಡಿಎಸ್ ಯೋಜನೆ ಅನುದಾನ ಹೆಚ್ಚಿಸಬೇಕು, ಗುಣಮಟ್ಟದ ಪಿಪಿಎ ಕಿಟ್, ಸ್ಯಾನಿಟೈಸರ್, ಮಾಸ್ಕ್ ನೀಡಬೇಕು. ಕೊರೊನಾ ಸಂದರ್ಭ ₹ 25,000 ಪ್ರೋತ್ಸಾಹ ಧನ, ಬಸ್ ಪಾಸ್, ಊಟದ ವೆಚ್ಚ ಭರಿಸಬೇಕು, ಎನ್ಪಿಎಸ್ ಲೈಟ್ ಬದಲಿಸಿ ಎಲ್ಐಸಿ ಆಧಾರಿತ ನಿವೃತ್ತಿ ವೇತನ ಜಾರಿಗೊಳಿಸಬೇಕು.</p>.<p>ಸರಿಯಾಗಿ ಬಿಲ್ ಪಾವತಿಸಬೇಕು. ಸಹಾಯಕಿಯರ ಬಡ್ತಿಗೆ ಇರುವ ವಯಸ್ಸಿನ ಮಿತಿ ತೆಗೆಯಬೇಕು, ನೌಕರಿ ಕಾಯಂ ಮಾಡಬೇಕು, ಅಲ್ಲಿಯವರೆಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ₹ 30,000, ಸಹಾಯಕಿಯರಿಗೆ ₹ 21,000 ವೇತನ ನೀಡಬೇಕು, ಅಂಗನವಾಡಿಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಬೇಕು ಎಂದು ಒತ್ತಾಯಿಸಿದರು.</p>.<p>ಪ್ರತಿಭಟನೆ ವೇಳೆ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಭಾರತಿ, ಪ್ರಧಾನ ಕಾರ್ಯದರ್ಶಿ ಸುಶೀಲ ನಾಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಕೋವಿಡ್ ಸೋಂಕು ಹರಡುವಿಕೆ ತಡೆಗೆ ಶ್ರಮಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.</p>.<p>ಕೋವಿಡ್ನಿಂದ ರಾಜ್ಯದ ಜನರೆಲ್ಲರೂ ಮನೆಯಲ್ಲಿದ್ದರೂ ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರ ಸೂಚಿಸಿದ ಕೆಲಸಗಳನ್ನು ನಿರ್ವಹಿಸಿದ್ದಾರೆ. ಕರಾವಳಿಯ ದುರ್ಗಮ ಪ್ರದೇಶಕ್ಕೆ ತೆರಳಿ ಆಹಾರ ಹಂಚಿದ್ದಾರೆ. ಹಲವು ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಹಲ್ಲೆಗಳು ನಡೆದಿವೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕೋವಿಡ್ ಕಾರ್ಯ ನಿರ್ವಹಣೆ ವೇಳೆ ಗುಣಮಟ್ಟದ ಸುರಕ್ಷತಾ ಸಾಧನಗಳನ್ನು ಕೊಡದ ಕಾರಣ ಹಲವರಿಗೆ ಸೋಂಕು ತಗುಲಿದೆ. ಹಾಗಾಗಿ, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ತಾರತಮ್ಯವಿಲ್ಲದೆ ₹ 50 ಲಕ್ಷದವರೆಗೂ ವಿಮಾ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು.</p>.<p>ಐಸಿಡಿಎಸ್ ಯೋಜನೆ ಅನುದಾನ ಹೆಚ್ಚಿಸಬೇಕು, ಗುಣಮಟ್ಟದ ಪಿಪಿಎ ಕಿಟ್, ಸ್ಯಾನಿಟೈಸರ್, ಮಾಸ್ಕ್ ನೀಡಬೇಕು. ಕೊರೊನಾ ಸಂದರ್ಭ ₹ 25,000 ಪ್ರೋತ್ಸಾಹ ಧನ, ಬಸ್ ಪಾಸ್, ಊಟದ ವೆಚ್ಚ ಭರಿಸಬೇಕು, ಎನ್ಪಿಎಸ್ ಲೈಟ್ ಬದಲಿಸಿ ಎಲ್ಐಸಿ ಆಧಾರಿತ ನಿವೃತ್ತಿ ವೇತನ ಜಾರಿಗೊಳಿಸಬೇಕು.</p>.<p>ಸರಿಯಾಗಿ ಬಿಲ್ ಪಾವತಿಸಬೇಕು. ಸಹಾಯಕಿಯರ ಬಡ್ತಿಗೆ ಇರುವ ವಯಸ್ಸಿನ ಮಿತಿ ತೆಗೆಯಬೇಕು, ನೌಕರಿ ಕಾಯಂ ಮಾಡಬೇಕು, ಅಲ್ಲಿಯವರೆಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ₹ 30,000, ಸಹಾಯಕಿಯರಿಗೆ ₹ 21,000 ವೇತನ ನೀಡಬೇಕು, ಅಂಗನವಾಡಿಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಬೇಕು ಎಂದು ಒತ್ತಾಯಿಸಿದರು.</p>.<p>ಪ್ರತಿಭಟನೆ ವೇಳೆ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಭಾರತಿ, ಪ್ರಧಾನ ಕಾರ್ಯದರ್ಶಿ ಸುಶೀಲ ನಾಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>