ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ಹತ್ಯೆಯಿಂದ ಸಹಜವಾಗಿ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿತ್ತು. ಸರ್ಕಾರ ಕಾರ್ಯಕರ್ತರನ್ನು ಕಡೆಗಣಿಸದೆ ಉತ್ತಮ ತೀರ್ಮಾನಗಳನ್ನು ಕೈಗೊಂಡಿದೆ. ಮುಖ್ಯಮಂತ್ರಿಗಳು ಒಂದು ವರ್ಷದ ಆಡಳಿತದ ವಿಜಯೋತ್ಸವ ಕಾರ್ಯಕ್ರಮವನ್ನು ರದ್ದು ಮಾಡಿ, ಬೆಳ್ಳಾರೆಗೆ ಭೇಟಿ ನೀಡಿದ್ದಾರೆ. ಕಾರ್ಯಕರ್ತನನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ ಎಂದರು.