<p><strong>ಬ್ರಹ್ಮಾವರ:</strong> ಸಾಲಿಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಾಣಿಪಾಲನ ಘಟಕಕ್ಕೆ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ ಪ್ರಾಣಿಗಳನ್ನು ಸ್ಥಳಾಂತರಿಸಿದರು.</p>.<p>ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಉಡುಪಿ ಜಿಲ್ಲಾ ಪ್ರಾಣಿದಯಾ ಸಂಘದ ನಡಾವಳಿಯಂತೆ ಶನಿವಾರ ಪೇಟಾ ಇಂಡಿಯಾ ಸಂಸ್ಥೆಯ ದೂರಿನನ್ವಯ ಈ ಕ್ರಮಕೈಗೊಳ್ಳಲಾಗಿದೆ.</p>.<p>ಹಿಂದೊಮ್ಮೆ ಈ ಸಾಕಾಣಿಕೆ ಕೇಂದ್ರ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. ಮುಂದೆ ಈ ರೀತಿ ಕಾರ್ಯ ನಿರ್ವಹಿಸದಂತೆ ಮಾಲೀಕರಾದ ಸುಧೀಂದ್ರ ಐತಾಳ ಕೆರೆಕಟ್ಟೆ ಅವರಿಗೆ ಎಚ್ಚರಿಕೆ ನೀಡಲಾಗಿತ್ತು. ಆದರೆ ಮತ್ತೆ ಹಿಂಸಾತ್ಮಕ ರೀತಿಯಲ್ಲಿ ಮತ್ತು ಶುಚಿತ್ವವಿಲ್ಲದೆ ನಾಯಿಗಳು, ಬೆಕ್ಕುಗಳು, ಸಂರಕ್ಷಿತ ವನ್ಯಜೀವಿಗಳು ಮತ್ತು ಅನಾರೋಗ್ಯಕರ ಆಕಳ ಕರುಗಳನ್ನು ಸಾಕುತ್ತಿರುವುದಾಗಿ ಪೇಟಾ ಸಂಸ್ಥೆಯವರು ದೂರಿನಲ್ಲಿ ತಿಳಿಸಿದ್ದರು.</p>.<p>ಅದರಂತೆ ಸ್ಥಳೀಯ ಪಶುವೈದ್ಯಾಧಿಕಾರಿಗಳು, ಪಟ್ಟಣ ಪಂಚಾಯಿತಿ, ಸಾಲಿಗ್ರಾಮ, ವಲಯ ಅರಣ್ಯಾಧಿಕಾರಿ, ವನ್ಯಜೀವಿ ವಿಭಾಗ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳ ತಂಡ ಕೇಂದ್ರಕ್ಕೆ ಭೇಟಿ ನೀಡಿ ತನಿಖೆ ನಡೆಸಿದಾಗ ಪರವಾನಗಿ ಪಡೆದಿರುವುದು ಕಂಡುಬಂದಿರುವುದಿಲ್ಲ. ಈ ಕಾರಣಕ್ಕೆ ಅಲ್ಲಿದ್ದ ನಾಯಿಗಳು, ಬೆಕ್ಕುಗಳನ್ನು ಪೇಟಾ ಇಂಡಿಯಾ ಸಂಸ್ಥೆಯ ಪುನರ್ ವಸತಿ ಕೇಂದ್ರಗಳಿಗೆ, ಸಂರಕ್ಷಿತ ವನ್ಯಜೀವಿಗಳನ್ನು ಮಂಗಳೂರಿನ ಪಿಲಿಕುಳ ವನ್ಯಧಾಮಕ್ಕೆ ಹಾಗೂ ಅನಾರೋಗ್ಯ ಪೀಡಿತ ಜಾನುವಾರುಗಳನ್ನು ಗೋಶಾಲೆಗಳಿಗೆ ಹಸ್ತಾಂತರಿಸಲಾಯಿತು.</p>.<p>ಪ್ರಾಣಿಗಳನ್ನು ಸ್ಥಳಾಂತರಿಸುವ ವೇಳೆ ಮಾಲೀಕರಿಗೆ ಸರಿಯಾದ ನೋಟಿಸ್ ನೀಡಿಲ್ಲ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಗಾಣಿಗ ಕೋಟ ಅವರು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಆದರೆ, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಕ್ರಮ ಜರಗಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಹ್ಮಾವರ:</strong> ಸಾಲಿಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಾಣಿಪಾಲನ ಘಟಕಕ್ಕೆ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ ಪ್ರಾಣಿಗಳನ್ನು ಸ್ಥಳಾಂತರಿಸಿದರು.</p>.<p>ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಉಡುಪಿ ಜಿಲ್ಲಾ ಪ್ರಾಣಿದಯಾ ಸಂಘದ ನಡಾವಳಿಯಂತೆ ಶನಿವಾರ ಪೇಟಾ ಇಂಡಿಯಾ ಸಂಸ್ಥೆಯ ದೂರಿನನ್ವಯ ಈ ಕ್ರಮಕೈಗೊಳ್ಳಲಾಗಿದೆ.</p>.<p>ಹಿಂದೊಮ್ಮೆ ಈ ಸಾಕಾಣಿಕೆ ಕೇಂದ್ರ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. ಮುಂದೆ ಈ ರೀತಿ ಕಾರ್ಯ ನಿರ್ವಹಿಸದಂತೆ ಮಾಲೀಕರಾದ ಸುಧೀಂದ್ರ ಐತಾಳ ಕೆರೆಕಟ್ಟೆ ಅವರಿಗೆ ಎಚ್ಚರಿಕೆ ನೀಡಲಾಗಿತ್ತು. ಆದರೆ ಮತ್ತೆ ಹಿಂಸಾತ್ಮಕ ರೀತಿಯಲ್ಲಿ ಮತ್ತು ಶುಚಿತ್ವವಿಲ್ಲದೆ ನಾಯಿಗಳು, ಬೆಕ್ಕುಗಳು, ಸಂರಕ್ಷಿತ ವನ್ಯಜೀವಿಗಳು ಮತ್ತು ಅನಾರೋಗ್ಯಕರ ಆಕಳ ಕರುಗಳನ್ನು ಸಾಕುತ್ತಿರುವುದಾಗಿ ಪೇಟಾ ಸಂಸ್ಥೆಯವರು ದೂರಿನಲ್ಲಿ ತಿಳಿಸಿದ್ದರು.</p>.<p>ಅದರಂತೆ ಸ್ಥಳೀಯ ಪಶುವೈದ್ಯಾಧಿಕಾರಿಗಳು, ಪಟ್ಟಣ ಪಂಚಾಯಿತಿ, ಸಾಲಿಗ್ರಾಮ, ವಲಯ ಅರಣ್ಯಾಧಿಕಾರಿ, ವನ್ಯಜೀವಿ ವಿಭಾಗ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳ ತಂಡ ಕೇಂದ್ರಕ್ಕೆ ಭೇಟಿ ನೀಡಿ ತನಿಖೆ ನಡೆಸಿದಾಗ ಪರವಾನಗಿ ಪಡೆದಿರುವುದು ಕಂಡುಬಂದಿರುವುದಿಲ್ಲ. ಈ ಕಾರಣಕ್ಕೆ ಅಲ್ಲಿದ್ದ ನಾಯಿಗಳು, ಬೆಕ್ಕುಗಳನ್ನು ಪೇಟಾ ಇಂಡಿಯಾ ಸಂಸ್ಥೆಯ ಪುನರ್ ವಸತಿ ಕೇಂದ್ರಗಳಿಗೆ, ಸಂರಕ್ಷಿತ ವನ್ಯಜೀವಿಗಳನ್ನು ಮಂಗಳೂರಿನ ಪಿಲಿಕುಳ ವನ್ಯಧಾಮಕ್ಕೆ ಹಾಗೂ ಅನಾರೋಗ್ಯ ಪೀಡಿತ ಜಾನುವಾರುಗಳನ್ನು ಗೋಶಾಲೆಗಳಿಗೆ ಹಸ್ತಾಂತರಿಸಲಾಯಿತು.</p>.<p>ಪ್ರಾಣಿಗಳನ್ನು ಸ್ಥಳಾಂತರಿಸುವ ವೇಳೆ ಮಾಲೀಕರಿಗೆ ಸರಿಯಾದ ನೋಟಿಸ್ ನೀಡಿಲ್ಲ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಗಾಣಿಗ ಕೋಟ ಅವರು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಆದರೆ, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಕ್ರಮ ಜರಗಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>