ಜುಲೈ 19, 2018ರಂದು ಶೀರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ವಿಧಿವಶರಾಗಿದ್ದರು. 2 ವರ್ಷ 9 ತಿಂಗಳು ಪೀಠ ಖಾಲಿ ಉಳಿದಿತ್ತು. ಮತ್ತೊಂದೆಡೆ, ಶೀರೂರು ಮಠದ ಆಡಳಿತದಲ್ಲಿ ಪಾರದರ್ಶಕತೆ ಇಲ್ಲದಿರುವ ವಿಚಾರ ನ್ಯಾಯಾಲಯದಲ್ಲಿದ್ದು, ನೂತನ ಉತ್ತರಾಧಿಕಾರಿ ನೇಮಕ ಮಾಡುವಂತಿಲ್ಲ. ಮಾಡಿದರೆ ಕಾನೂನು ಹೋರಾಟ ಮಾಡುವುದಾಗಿ ಲಕ್ಷ್ಮೀವರ ತೀರ್ಥ ಶ್ರೀಗಳ ಪೂರ್ವಾಶ್ರಮದ ಸಹೋದರ ಲಾತವ್ಯ ಆಚಾರ್ಯ ಎಚ್ಚರಿಕೆ ನೀಡಿದ್ದಾರೆ.