<p><strong>ಉಡುಪಿ:</strong> ಸರ್ಕಾರ ಜಾರಿಗೆ ತಂದಿರುವ ನಿಶ್ಚಿತ ಅವಧಿಯ ಉದ್ಯೋಗ ಕಾಯ್ದೆಯಿಂದ ಮುಂದೆ ನೌಕರರಿಗೆ ಸೇವಾಭದ್ರತೆ ಇಲ್ಲದಂತಾಗುತ್ತದೆ ಎಂದು ವಿಮಾ ನೌಕರರ ಸಂಘದ ಉಡುಪಿ ವಿಭಾಗದ ಅಧ್ಯಕ್ಷ ವಿಶ್ವನಾಥ್ ಆತಂಕ ವ್ಯಕ್ತಪಡಿಸಿದರು.</p>.<p>ಮಂಗಳವಾರ ಉಡುಪಿ ವಿಮಾ ನೌಕರರ ಸಂಘದ ಆವರಣದಲ್ಲಿ ನಡೆದ ವಿಮಾ ಪಿಂಚಣಿದಾರರ ಸಂಘದ ಉಡುಪಿ ವಿಭಾಗದ 21ನೇ ವಾರ್ಷಿಕ ಮಹಾಧಿವೇಶನದಲ್ಲಿ ಮಾತನಾಡಿದರು.</p>.<p>ನಿಶ್ಚಿತ ಅವಧಿಯ ಉದ್ಯೋಗ ಕಾಯ್ದೆ ಕಾರ್ಮಿಕರ ಹಕ್ಕುಗಳನ್ನು ಮೊಟಕುಗೊಳಿಸುತ್ತದೆ. ಇದೊಂದು ಕಾರ್ಮಿಕ ವಿರೋಧಿ ನೀತಿಯಾಗಿದ್ದು, ಇದರ ವಿರುದ್ಧ ನೌಕರರು ಈಗಿನಿಂದಲೇ ಎಚ್ಚುತ್ತುಕೊಳ್ಳಬೇಕಿದೆ ಎಂದರು.</p>.<p>ವಿಮಾ ನೌಕರರ ಸಂಘದ ಉಡುಪಿ ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಕುಂದರ್ ಮಾತನಾಡಿ, 2010ರ ಏಪ್ರಿಲ್ ತಿಂಗಳಿನಿಂದೀಚೆಗೆ ನೇಮಕವಾದ ಉದ್ಯೋಗಿಗಳಿಗೂ ಹೊಸ ಪಿಂಚಣಿ ಯೋಜನೆಯ ಬದಲು ಹಳೆಯ ನಿಶ್ಚಿತ ಪಿಂಚಣಿ ಯೋಜನೆ ಮುಂದುವರಿಸಬೇಕು. ಈ ಬಗ್ಗೆ ಎಲ್ಐಸಿಯನ್ನು ಒತ್ತಾಯಿಸುವ ವಿಮಾ ನೌಕರರ ಹೋರಾಟದಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು.</p>.<p>ವಾರ್ಷಿಕ ವರದಿ ಮಂಡಿಸಿದ ಸಂಘದ ನಿಯೋಜಿತ ಪ್ರಧಾನ ಕಾರ್ಯದರ್ಶಿ ಎ.ಮಧ್ವರಾಜ ಬಲ್ಲಾಳ್ ಮಾತನಾಡಿ, ವಿಮಾ ನೌಕರರಿಗೆ ವೈದ್ಯಕೀಯ ಭತ್ಯೆ ಸೌಲಭ್ಯ ಇದ್ದರೂ ಹೆಚ್ಚಿನ ನೌಕರರಿಗೆ ಅನುಕೂಲವಾಗುತ್ತಿಲ್ಲ. ಹಾಗಾಗಿ, ಹೊರ ರೋಗಿಗಳಾಗಿ ದಾಖಲಾಗುವ ನೌಕರರಿಗೂ ವೈದ್ಯಕೀಯ ಭತ್ಯೆಯನ್ನು ನೀಡಬೇಕು ಎಂದು ಒತ್ತಾಯಿಸಿದರು.</p>.<p>ಸಂಘದ ನಿಯೋಜಿತ ಅಧ್ಯಕ್ಷ ಕೆ.ರಾಘವೇಂದ್ರ ಭಟ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ಉಪಾಧ್ಯಕ್ಷರಾದ ತಿಮ್ಮಪ್ಪ, ರಮೇಶ್ ಸುವರ್ಣ, ಜಂಟಿ ಕಾರ್ಯದರ್ಶಿ ಶ್ರೀಪತಿ ಉಪಾಧ್ಯ, ಕೋಶಾಧಿಕಾರಿ ಎ. ರಮೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಸರ್ಕಾರ ಜಾರಿಗೆ ತಂದಿರುವ ನಿಶ್ಚಿತ ಅವಧಿಯ ಉದ್ಯೋಗ ಕಾಯ್ದೆಯಿಂದ ಮುಂದೆ ನೌಕರರಿಗೆ ಸೇವಾಭದ್ರತೆ ಇಲ್ಲದಂತಾಗುತ್ತದೆ ಎಂದು ವಿಮಾ ನೌಕರರ ಸಂಘದ ಉಡುಪಿ ವಿಭಾಗದ ಅಧ್ಯಕ್ಷ ವಿಶ್ವನಾಥ್ ಆತಂಕ ವ್ಯಕ್ತಪಡಿಸಿದರು.</p>.<p>ಮಂಗಳವಾರ ಉಡುಪಿ ವಿಮಾ ನೌಕರರ ಸಂಘದ ಆವರಣದಲ್ಲಿ ನಡೆದ ವಿಮಾ ಪಿಂಚಣಿದಾರರ ಸಂಘದ ಉಡುಪಿ ವಿಭಾಗದ 21ನೇ ವಾರ್ಷಿಕ ಮಹಾಧಿವೇಶನದಲ್ಲಿ ಮಾತನಾಡಿದರು.</p>.<p>ನಿಶ್ಚಿತ ಅವಧಿಯ ಉದ್ಯೋಗ ಕಾಯ್ದೆ ಕಾರ್ಮಿಕರ ಹಕ್ಕುಗಳನ್ನು ಮೊಟಕುಗೊಳಿಸುತ್ತದೆ. ಇದೊಂದು ಕಾರ್ಮಿಕ ವಿರೋಧಿ ನೀತಿಯಾಗಿದ್ದು, ಇದರ ವಿರುದ್ಧ ನೌಕರರು ಈಗಿನಿಂದಲೇ ಎಚ್ಚುತ್ತುಕೊಳ್ಳಬೇಕಿದೆ ಎಂದರು.</p>.<p>ವಿಮಾ ನೌಕರರ ಸಂಘದ ಉಡುಪಿ ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಕುಂದರ್ ಮಾತನಾಡಿ, 2010ರ ಏಪ್ರಿಲ್ ತಿಂಗಳಿನಿಂದೀಚೆಗೆ ನೇಮಕವಾದ ಉದ್ಯೋಗಿಗಳಿಗೂ ಹೊಸ ಪಿಂಚಣಿ ಯೋಜನೆಯ ಬದಲು ಹಳೆಯ ನಿಶ್ಚಿತ ಪಿಂಚಣಿ ಯೋಜನೆ ಮುಂದುವರಿಸಬೇಕು. ಈ ಬಗ್ಗೆ ಎಲ್ಐಸಿಯನ್ನು ಒತ್ತಾಯಿಸುವ ವಿಮಾ ನೌಕರರ ಹೋರಾಟದಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು.</p>.<p>ವಾರ್ಷಿಕ ವರದಿ ಮಂಡಿಸಿದ ಸಂಘದ ನಿಯೋಜಿತ ಪ್ರಧಾನ ಕಾರ್ಯದರ್ಶಿ ಎ.ಮಧ್ವರಾಜ ಬಲ್ಲಾಳ್ ಮಾತನಾಡಿ, ವಿಮಾ ನೌಕರರಿಗೆ ವೈದ್ಯಕೀಯ ಭತ್ಯೆ ಸೌಲಭ್ಯ ಇದ್ದರೂ ಹೆಚ್ಚಿನ ನೌಕರರಿಗೆ ಅನುಕೂಲವಾಗುತ್ತಿಲ್ಲ. ಹಾಗಾಗಿ, ಹೊರ ರೋಗಿಗಳಾಗಿ ದಾಖಲಾಗುವ ನೌಕರರಿಗೂ ವೈದ್ಯಕೀಯ ಭತ್ಯೆಯನ್ನು ನೀಡಬೇಕು ಎಂದು ಒತ್ತಾಯಿಸಿದರು.</p>.<p>ಸಂಘದ ನಿಯೋಜಿತ ಅಧ್ಯಕ್ಷ ಕೆ.ರಾಘವೇಂದ್ರ ಭಟ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ಉಪಾಧ್ಯಕ್ಷರಾದ ತಿಮ್ಮಪ್ಪ, ರಮೇಶ್ ಸುವರ್ಣ, ಜಂಟಿ ಕಾರ್ಯದರ್ಶಿ ಶ್ರೀಪತಿ ಉಪಾಧ್ಯ, ಕೋಶಾಧಿಕಾರಿ ಎ. ರಮೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>