<p><strong>ಉಡುಪಿ:</strong> ಉಡುಪಿ ನಗರ ವ್ಯಾಪ್ತಿಯ ಡಿಜಿಟಲ್ ಆ್ಯಪ್ ಆಧಾರಿತ ಆಟೊಗಳು ಸರ್ಕಾರದ ಪರವಾನಗಿ ಪತ್ರ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹೇಳಿದರು.</p>.<p>ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಮ್ಮ ಯಾತ್ರಿ ಆ್ಯಪ್ ಹಾಗೂ ರ್ಯಾಪಿಡೊ ಆ್ಯಪ್ ಆಟೊ ಸೇವೆಗಳ ಕುರಿತು ಚರ್ಚಿಸಲು ಸೋಮವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. <br><br>ಮಣಿಪಾಲದಲ್ಲಿ ಡಿಜಿಟಲ್ ಆ್ಯಪ್ ಆಧಾರಿತ ಬಾಡಿಗೆ ಆಟೊಗಳ ಸಂಚಾರದ ಬಗ್ಗೆ ಪರ-ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಆ್ಯಪ್ ಆಧಾರಿತ ಕೆಲವು ಸಂಸ್ಥೆಗಳು ಸೇವೆಗಳನ್ನು ಒದಗಿಸುತ್ತಿವೆ. ಈ ಬಗ್ಗೆ ಸರ್ಕಾರದ ಪರವಾನಗಿ ಸೇರಿದಂತೆ ವಿವಿಧ ದಾಖಲೆಗಳನ್ನು ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಮುಂದೆ ಹಾಜರುಪಡಿಸಿದ್ದಲ್ಲಿ ಸ್ಥಳೀಯ ಆಟೋ ಚಾಲಕರ ಯೂನಿಯನ್ಗಳ ಪದಾಧಿಕಾರಿಗಳು ಹಾಗೂ ಆ್ಯಪ್ ಆಧಾರಿತ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುವುದು ಎಂದರು. <br><br>ಉಡುಪಿ ನಗರದ ವಲಯ -1 ರಲ್ಲಿ ಸುಮಾರು 4 ಸಾವಿರಕ್ಕೂ ಹೆಚ್ಚು ಆಟೊ ರಿಕ್ಷಾಗಳು ನೋಂದಣಿ ಮಾಡಿಕೊಂಡು ಸಂಚರಿಸುತ್ತಿದ್ದು, ಆಟೊ ನಿಲ್ದಾಣಗಳಲ್ಲಿ ಚಾಲಕರು ಸರದಿಯ ಅನ್ವಯ ಸೇವೆಗಳನ್ನು ಒದಗಿಸುತ್ತಿದ್ದಾರೆ. ಅವರಲ್ಲಿ ಕೆಲವರು ಹಲವು ವರ್ಷಗಳಿಂದ ಈ ವೃತ್ತಿಯನ್ನು ನಡೆಸಿಕೊಂಡು ಬರುತ್ತಿದ್ದು, ಅವರ ಅಭಿಪ್ರಾಯಗಳನ್ನು ಪಡೆಯಲಾಗುವುದು. ಪ್ರಸ್ತುತ ಚಾಲನೆಯಲ್ಲಿರುವ ಪ್ರತಿಯೊಂದು ಆಟೊಗಳು ಕಡ್ಡಾಯವಾಗಿ ಮೀಟರ್ ಬಳಕೆ ಮಾಡಿ, ಚಲಾಯಿಸಬೇಕು ಎಂದು ಹೇಳಿದರು. <br><br>ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಉಡುಪಿ ನಗರ ಭಾಗದಲ್ಲಿ ಜನರ ಹಾಗೂ ಪ್ರವಾಸಿಗರ ಬೇಡಿಕೆ ಮತ್ತು ಆಟೊ ನಿಲ್ದಾಣಗಳ ಸಾಮರ್ಥ್ಯಕ್ಕೆ ಅನುಗುಣವಾಗಿ ಬಾಡಿಗೆ ಮಾಡಲು ಅವಕಾಶ ನೀಡಬೇಕು. ನಿಲ್ದಾಣಗಳಲ್ಲಿ ರಿಕ್ಷಾ ಚಾಲಕರಿಗೆ ಮೂಲ ಸೌಕರ್ಯ ಕಲ್ಪಿಸಲು ಗಮನಹರಿಸಬೇಕು ಎಂದರು.</p>.<p>ಡಿಜಿಟಲ್ ಆ್ಯಪ್ ಆಧಾರಿತ ಆಟೊ ಸಂಚಾರದಿಂದ ನಗರದಲ್ಲಿ ಸುಮಾರು 30 ವರ್ಷಗಳಿಂದ ಆಟೊ ಚಾಲನೆ ಮಾಡಿ, ಜೀವನೋಪಾಯ ನಡೆಸುತ್ತಿರುವವರಿಗೆ ಉಂಟಾಗುವ ಸಮಸ್ಯೆಗಳನ್ನು ಚರ್ಚಿಸಿ, ನಂತರ ಡಿಜಿಟಲ್ ಆ್ಯಪ್ ಆಧರಿತ ಆಟೊಗಳ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ಹೇಳಿದರು.</p>.<p>ಆ್ಯಪ್ ಆಧರಿತ ಆಟೊ ಸಂಚಾರದಿಂದ ಇತರೆ ಆಟೊ ಚಾಲಕರಿಗೆ ಉಂಟಾಗುವ ಸಮಸ್ಯೆಗಳ ಬಗ್ಗೆ ಹಾಗೂ ವಲಯ-1, ವಲಯ-2 ರ ಆಟೊಗಳನ್ನು ಸರಳವಾಗಿ ಗುರುತಿಸಲು ಕಲರ್ ಕೋಡಿಂಗ್ ಅಳವಡಿಕೆ ವಿಚಾರವನ್ನು ಆಟೊ ರಿಕ್ಷಾ ಚಾಲಕರು ಸಭೆಯ ಗಮನಕ್ಕೆ ತಂದರು.</p>.<p>ನಗರಸಭೆಯ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಂತೋಷ್ ಶೆಟ್ಟಿ, ಆಟೊ ರಿಕ್ಷಾ ಯೂನಿಯನ್ ಪದಾಧಿಕಾರಿಗಳು, ಆಟೊ ರಿಕ್ಷಾ ಚಾಲಕರು ಹಾಗೂ ಮಾಲಕರುಗಳು, ನಮ್ಮ ಯಾತ್ರಿ ಹಾಗೂ ರ್ಯಾಪಿಡ್ ಆ್ಯಪ್ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.</p>.<p><strong>‘ಚರ್ಚಿಸಿ ಅನುಮತಿ ನೀಡಲಾಗುವುದು’</strong> </p><p>ಆ್ಯಪ್ ಆಧರಿತ ಆಟೊಗಳ ಸಂಚಾರವನ್ನು ಅಭಿವೃದ್ಧಿಪಡಿಸಿದಾಗ ಇತರ ಆಟೊ ಚಾಲಕರಿಗೆ ಅನಾನುಕೂಲ ಆಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದರು. ವಲಯ-2 ರಲ್ಲಿ ಪರವಾನಗಿ ಪಡೆದು ನಗರ ವ್ಯಾಪ್ತಿಯಲ್ಲಿ ಆಟೊ ಚಾಲನೆ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಆಟೊ ನಿಲ್ದಾಣಗಳಲ್ಲಿ ಈ ಹಿಂದೆ ನೋಂದಣಿ ಹೊಂದಿದವರಿಗೆ ಮಾತ್ರ ಅವಕಾಶ ಇದೆ. ನಿಲ್ದಾಣ ಹೊಂದದೇ ಇರುವ ಆಟೊ ಚಾಲಕರು ನೋಂದಣಿಗೆ ಅರ್ಜಿ ಸಲ್ಲಿಸಿದ್ದಲ್ಲಿ ಅಲ್ಲಿನ ಆಟೊ ದಟ್ಟಣಿ ನೋಡಿ ನಗರಸಭೆಯ ಪೌರಾಯುಕ್ತರೊಂದಿಗೆ ಚರ್ಚಿಸಿ ಅನುಮತಿ ನೀಡಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಉಡುಪಿ ನಗರ ವ್ಯಾಪ್ತಿಯ ಡಿಜಿಟಲ್ ಆ್ಯಪ್ ಆಧಾರಿತ ಆಟೊಗಳು ಸರ್ಕಾರದ ಪರವಾನಗಿ ಪತ್ರ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹೇಳಿದರು.</p>.<p>ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಮ್ಮ ಯಾತ್ರಿ ಆ್ಯಪ್ ಹಾಗೂ ರ್ಯಾಪಿಡೊ ಆ್ಯಪ್ ಆಟೊ ಸೇವೆಗಳ ಕುರಿತು ಚರ್ಚಿಸಲು ಸೋಮವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. <br><br>ಮಣಿಪಾಲದಲ್ಲಿ ಡಿಜಿಟಲ್ ಆ್ಯಪ್ ಆಧಾರಿತ ಬಾಡಿಗೆ ಆಟೊಗಳ ಸಂಚಾರದ ಬಗ್ಗೆ ಪರ-ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಆ್ಯಪ್ ಆಧಾರಿತ ಕೆಲವು ಸಂಸ್ಥೆಗಳು ಸೇವೆಗಳನ್ನು ಒದಗಿಸುತ್ತಿವೆ. ಈ ಬಗ್ಗೆ ಸರ್ಕಾರದ ಪರವಾನಗಿ ಸೇರಿದಂತೆ ವಿವಿಧ ದಾಖಲೆಗಳನ್ನು ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಮುಂದೆ ಹಾಜರುಪಡಿಸಿದ್ದಲ್ಲಿ ಸ್ಥಳೀಯ ಆಟೋ ಚಾಲಕರ ಯೂನಿಯನ್ಗಳ ಪದಾಧಿಕಾರಿಗಳು ಹಾಗೂ ಆ್ಯಪ್ ಆಧಾರಿತ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುವುದು ಎಂದರು. <br><br>ಉಡುಪಿ ನಗರದ ವಲಯ -1 ರಲ್ಲಿ ಸುಮಾರು 4 ಸಾವಿರಕ್ಕೂ ಹೆಚ್ಚು ಆಟೊ ರಿಕ್ಷಾಗಳು ನೋಂದಣಿ ಮಾಡಿಕೊಂಡು ಸಂಚರಿಸುತ್ತಿದ್ದು, ಆಟೊ ನಿಲ್ದಾಣಗಳಲ್ಲಿ ಚಾಲಕರು ಸರದಿಯ ಅನ್ವಯ ಸೇವೆಗಳನ್ನು ಒದಗಿಸುತ್ತಿದ್ದಾರೆ. ಅವರಲ್ಲಿ ಕೆಲವರು ಹಲವು ವರ್ಷಗಳಿಂದ ಈ ವೃತ್ತಿಯನ್ನು ನಡೆಸಿಕೊಂಡು ಬರುತ್ತಿದ್ದು, ಅವರ ಅಭಿಪ್ರಾಯಗಳನ್ನು ಪಡೆಯಲಾಗುವುದು. ಪ್ರಸ್ತುತ ಚಾಲನೆಯಲ್ಲಿರುವ ಪ್ರತಿಯೊಂದು ಆಟೊಗಳು ಕಡ್ಡಾಯವಾಗಿ ಮೀಟರ್ ಬಳಕೆ ಮಾಡಿ, ಚಲಾಯಿಸಬೇಕು ಎಂದು ಹೇಳಿದರು. <br><br>ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಉಡುಪಿ ನಗರ ಭಾಗದಲ್ಲಿ ಜನರ ಹಾಗೂ ಪ್ರವಾಸಿಗರ ಬೇಡಿಕೆ ಮತ್ತು ಆಟೊ ನಿಲ್ದಾಣಗಳ ಸಾಮರ್ಥ್ಯಕ್ಕೆ ಅನುಗುಣವಾಗಿ ಬಾಡಿಗೆ ಮಾಡಲು ಅವಕಾಶ ನೀಡಬೇಕು. ನಿಲ್ದಾಣಗಳಲ್ಲಿ ರಿಕ್ಷಾ ಚಾಲಕರಿಗೆ ಮೂಲ ಸೌಕರ್ಯ ಕಲ್ಪಿಸಲು ಗಮನಹರಿಸಬೇಕು ಎಂದರು.</p>.<p>ಡಿಜಿಟಲ್ ಆ್ಯಪ್ ಆಧಾರಿತ ಆಟೊ ಸಂಚಾರದಿಂದ ನಗರದಲ್ಲಿ ಸುಮಾರು 30 ವರ್ಷಗಳಿಂದ ಆಟೊ ಚಾಲನೆ ಮಾಡಿ, ಜೀವನೋಪಾಯ ನಡೆಸುತ್ತಿರುವವರಿಗೆ ಉಂಟಾಗುವ ಸಮಸ್ಯೆಗಳನ್ನು ಚರ್ಚಿಸಿ, ನಂತರ ಡಿಜಿಟಲ್ ಆ್ಯಪ್ ಆಧರಿತ ಆಟೊಗಳ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ಹೇಳಿದರು.</p>.<p>ಆ್ಯಪ್ ಆಧರಿತ ಆಟೊ ಸಂಚಾರದಿಂದ ಇತರೆ ಆಟೊ ಚಾಲಕರಿಗೆ ಉಂಟಾಗುವ ಸಮಸ್ಯೆಗಳ ಬಗ್ಗೆ ಹಾಗೂ ವಲಯ-1, ವಲಯ-2 ರ ಆಟೊಗಳನ್ನು ಸರಳವಾಗಿ ಗುರುತಿಸಲು ಕಲರ್ ಕೋಡಿಂಗ್ ಅಳವಡಿಕೆ ವಿಚಾರವನ್ನು ಆಟೊ ರಿಕ್ಷಾ ಚಾಲಕರು ಸಭೆಯ ಗಮನಕ್ಕೆ ತಂದರು.</p>.<p>ನಗರಸಭೆಯ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಂತೋಷ್ ಶೆಟ್ಟಿ, ಆಟೊ ರಿಕ್ಷಾ ಯೂನಿಯನ್ ಪದಾಧಿಕಾರಿಗಳು, ಆಟೊ ರಿಕ್ಷಾ ಚಾಲಕರು ಹಾಗೂ ಮಾಲಕರುಗಳು, ನಮ್ಮ ಯಾತ್ರಿ ಹಾಗೂ ರ್ಯಾಪಿಡ್ ಆ್ಯಪ್ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.</p>.<p><strong>‘ಚರ್ಚಿಸಿ ಅನುಮತಿ ನೀಡಲಾಗುವುದು’</strong> </p><p>ಆ್ಯಪ್ ಆಧರಿತ ಆಟೊಗಳ ಸಂಚಾರವನ್ನು ಅಭಿವೃದ್ಧಿಪಡಿಸಿದಾಗ ಇತರ ಆಟೊ ಚಾಲಕರಿಗೆ ಅನಾನುಕೂಲ ಆಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದರು. ವಲಯ-2 ರಲ್ಲಿ ಪರವಾನಗಿ ಪಡೆದು ನಗರ ವ್ಯಾಪ್ತಿಯಲ್ಲಿ ಆಟೊ ಚಾಲನೆ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಆಟೊ ನಿಲ್ದಾಣಗಳಲ್ಲಿ ಈ ಹಿಂದೆ ನೋಂದಣಿ ಹೊಂದಿದವರಿಗೆ ಮಾತ್ರ ಅವಕಾಶ ಇದೆ. ನಿಲ್ದಾಣ ಹೊಂದದೇ ಇರುವ ಆಟೊ ಚಾಲಕರು ನೋಂದಣಿಗೆ ಅರ್ಜಿ ಸಲ್ಲಿಸಿದ್ದಲ್ಲಿ ಅಲ್ಲಿನ ಆಟೊ ದಟ್ಟಣಿ ನೋಡಿ ನಗರಸಭೆಯ ಪೌರಾಯುಕ್ತರೊಂದಿಗೆ ಚರ್ಚಿಸಿ ಅನುಮತಿ ನೀಡಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>