ಮೀನುಗಾರರಿಗೆ ಡೀಸೆಲ್ ಸಬ್ಸಿಡಿ ನೀಡಲು ಬಿಪಿಎಲ್ ಕಾರ್ಡ್ ಪರಿಗಣನೆ ಮಾಡದ ಬಗ್ಗೆ ಕ್ರಮ ಜರುಗಿಸಬೇಕು, ಬೋಟ್ಗಳಿಗೆ ರೋಡ್ ಸೆಸ್ ವಿಧಿಸುವುದನ್ನು ಕೈಬಿಡಬೇಕು, ಅಂತರರಾಜ್ಯ ಸಮನ್ವಯ ಸಮಿತಿ ರಚನೆ ಮಾಡಬೇಕು, ಅನಿಯಮಿತ ಸೀಮೆಎಣ್ಣೆ ಸರಬರಾಜು ಮಾಡಬೇಕು, ಮಲ್ಪೆಯಲ್ಲಿ ಹೊರ ಬಂದರು ನಿರ್ಮಾಣ ಮಾಡಬೇಕು, ಈಗಿರುವ ಬಂದರನ್ನು ಮೇಲ್ದರ್ಜೆಗೇರಿಸಬೇಕು, ಮೀನುಗಾರಿಕಾ ಕ್ಷೇತ್ರಕ್ಕೆ ಪೂರಕವಾಗಿ ಕೈಗಾರಿಕಾ ವಲಯ ಆರಂಭಿಸಬೇಕು, ಹಳೆಯ ಬೋಟುಗಳ ಪುನರ್ ನಿರ್ಮಾಣಕ್ಕೆ ಸಹಾಯಧನ ನೀಡಬೇಕು ಎಂಬ ಬೇಡಿಕೆಗಳ ಮನವಿಯನ್ನು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ ಕೇಂದ್ರ ಸಚಿವರಿಗೆ ಸಲ್ಲಿಸಿದರು.