<p><strong>ಕಾರ್ಕಳ:</strong> ಕೋಟಿ ಚೆನ್ನಯ ಥೀಂ ಪಾರ್ಕ್ಅನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸುವ ಮತ್ತು ಇತರ ವಿವಿಧ ಕಾಮಗಾರಿಗಳ ಪೂರ್ಣತೆಗೆ ₹2 ಕೋಟಿ ಅನುದಾನ ನೀಡಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು.</p>.<p>ಇಲ್ಲಿನ ಕೋಟಿ ಚೆನ್ನಯ ಥೀಂ ಪಾರ್ಕ್ಗೆ ಶನಿವಾರ ಭೇಟಿ ನೀಡಿ ಮಾತನಾಡಿ, ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅನುದಾನವನ್ನು ಅದಕ್ಕಾಗಿ ಬಳಸಲಾಗುತ್ತಿದೆ. ಇಲ್ಲದೆ ಇದ್ದಿದ್ದರೆ ವಿವಿಧ ಉತ್ಸವ, ಕಲಾವಿದರ ಮಾಸಾಶನಕ್ಕೆ ಬಳಕೆ ಮಾಡಲಾಗುತ್ತಿತ್ತು. ಸರ್ಕಾರದ ಕೆಲಸಗಳು ಅನುದಾನ ಆಧಾರಿತ ಆಗಿರುವುದರಿಂದ ಶಾಸಕರ ಮನವಿ ಪುರಸ್ಕರಿಸಿ ಅದು ಸದುಪಯೋಗವಾಗುತ್ತದೆ ಎಂಬ ದೃಷ್ಟಿಯಿಂದ ಈ ಅನುದಾನ ನೀಡಲಾಗುವುದು. ಜತೆಗೆ ಈ ಬಾರಿ ನೀಡಿದಂತೆ ಥೀಂ ಪಾರ್ಕ್ನ ನಿರ್ವಹಣಾ ವೆಚ್ಚ ವರ್ಷಕ್ಕೆ ₹ 10 ಲಕ್ಷ ಶಾಶ್ವತ ಅನುದಾನ ಮುಂದುವರಿಸಲಾಗುವುದು ಎಂದು ಅವರು ಹೇಳಿದರು.</p>.<p>ಸಚಿವರು ಥೀಂ ಪಾರ್ಕ್ ಆವರಣದಲ್ಲಿ ಗಿಡ ನೆಟ್ಟರು. ಶಾಸಕ ವಿ ಸುನಿಲ್ ಕುಮಾರ್, ಇರ್ವತ್ತೂರು ಭಾಸ್ಕರ್ ಎಸ್.ಕೋಟ್ಯಾನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ:</strong> ಕೋಟಿ ಚೆನ್ನಯ ಥೀಂ ಪಾರ್ಕ್ಅನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸುವ ಮತ್ತು ಇತರ ವಿವಿಧ ಕಾಮಗಾರಿಗಳ ಪೂರ್ಣತೆಗೆ ₹2 ಕೋಟಿ ಅನುದಾನ ನೀಡಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು.</p>.<p>ಇಲ್ಲಿನ ಕೋಟಿ ಚೆನ್ನಯ ಥೀಂ ಪಾರ್ಕ್ಗೆ ಶನಿವಾರ ಭೇಟಿ ನೀಡಿ ಮಾತನಾಡಿ, ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅನುದಾನವನ್ನು ಅದಕ್ಕಾಗಿ ಬಳಸಲಾಗುತ್ತಿದೆ. ಇಲ್ಲದೆ ಇದ್ದಿದ್ದರೆ ವಿವಿಧ ಉತ್ಸವ, ಕಲಾವಿದರ ಮಾಸಾಶನಕ್ಕೆ ಬಳಕೆ ಮಾಡಲಾಗುತ್ತಿತ್ತು. ಸರ್ಕಾರದ ಕೆಲಸಗಳು ಅನುದಾನ ಆಧಾರಿತ ಆಗಿರುವುದರಿಂದ ಶಾಸಕರ ಮನವಿ ಪುರಸ್ಕರಿಸಿ ಅದು ಸದುಪಯೋಗವಾಗುತ್ತದೆ ಎಂಬ ದೃಷ್ಟಿಯಿಂದ ಈ ಅನುದಾನ ನೀಡಲಾಗುವುದು. ಜತೆಗೆ ಈ ಬಾರಿ ನೀಡಿದಂತೆ ಥೀಂ ಪಾರ್ಕ್ನ ನಿರ್ವಹಣಾ ವೆಚ್ಚ ವರ್ಷಕ್ಕೆ ₹ 10 ಲಕ್ಷ ಶಾಶ್ವತ ಅನುದಾನ ಮುಂದುವರಿಸಲಾಗುವುದು ಎಂದು ಅವರು ಹೇಳಿದರು.</p>.<p>ಸಚಿವರು ಥೀಂ ಪಾರ್ಕ್ ಆವರಣದಲ್ಲಿ ಗಿಡ ನೆಟ್ಟರು. ಶಾಸಕ ವಿ ಸುನಿಲ್ ಕುಮಾರ್, ಇರ್ವತ್ತೂರು ಭಾಸ್ಕರ್ ಎಸ್.ಕೋಟ್ಯಾನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>