ಹೆಬ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ ಅವರ ನೇತೃತ್ವದಲ್ಲಿ ತಂಡವನ್ನು ಸ್ವಾಗತಿಸಿ ಮಾಹಿತಿ ವಿನಿಮಯ ನಡೆಸಲಾಯಿತು. ಹೆಬ್ರಿ ಗ್ರಾಮ ಪಂಚಾಯಿತಿಯ ಪ್ರಗತಿಯ ಬಗ್ಗೆ ತಂಡ ಮೆಚ್ಚುಗೆ ವ್ಯಕ್ತಪಡಿಸಿತು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಶಶಿಧರ ಕೆ.ಜಿ., ಮೈಸೂರು ಪಂಚಾಯತ್ ರಾಜ್ ಸಂಸ್ಥೆಯ ಎಸ್ಎಚ್ ಪ್ರಕಾಶ್ ಜಿ., ಮಲ್ಲಿಕಾರ್ಜುನ ಸ್ವಾಮಿ, ಪಂಚಾಯತ್ ರಾಜ್ ವಿಭಾಗದ ಎಂಜಿನಿಯರ್ ಸುರೇಂದ್ರನಾಥ್, ಹೆಬ್ರಿ ಪಿಡಿಒ ಸದಾಶಿವ ಸೇರ್ವೆಗಾರ್, ಸದಸ್ಯರಾದ ಸುಧಾಕರ್ ಹೆಗ್ಡೆ, ಜನಾರ್ದನ ಎಚ್., ಎಚ್. ಬಿ. ಸುರೇಶ್, ಕೃಷ್ಣ ನಾಯ್ಕ್, ತಾರನಾಥ ಬಂಗೇರ, ಪಂಚಾಯಿತಿ ಸಿಬ್ಬಂದಿ ಮತ್ತು ಸ್ವಚ್ಛ ಸಂಕೀರ್ಣದ ಸಿಬ್ಬಂದಿ ಇದ್ದರು. ನಿಯೋಗವನ್ನು ಸಾಂಪ್ರದಾಯಿಕವಾಗಿ ತಿಲಕವಿಟ್ಟು ಪುಷ್ಪ ಸಿಂಚನ ಮತ್ತು ಪುಷ್ಪ ನೀಡುವುದರ ಮೂಲಕ ಸ್ವಾಗತಿಸಿ ಸಾಂಪ್ರಾದಾಯಿಕ ತುಳುನಾಡಿನ ಮುಟ್ಟಾಳೆ ತೊಡಿಸಿ ಗೌರವಿಸಲಾಯಿತು.