ಈ ಕುರಿತು ‘ಪ್ರಜಾವಾಣಿ’ ಜತೆ ಮಾತನಾಡಿದ ಅವರು, ‘ಮಧ್ಯರಾತ್ರಿ 3.15ರ ಸುಮಾರಿಗೆ ಪೆರ್ಣಂಕಿಲದ ಶ್ರೀಲತಾ ಎಂಬುವರು ಕರೆ ಮಾಡಿ ಹೆರಿಗೆ ನೋವು ಹೆಚ್ಚಾಗಿರುವ ವಿಚಾರ ತಿಳಿಸಿದರು. ತಕ್ಷಣ ಆಟೊ ತೆಗೆದುಕೊಂಡು ಅವರನ್ನು ಉಡುಪಿಯ ಬಿ.ಆರ್.ಶೆಟ್ಟಿ ಆಸ್ಪತ್ರೆಗೆ ದಾಖಲಿಸಿದೆ. ಗುರುವಾರ ಶ್ರೀಲತಾಗೆ ಹೆಣ್ಣುಮಗು ಜನಿಸಿದೆ. ತಾಯಿ, ಮಗು ಆರೋಗ್ಯವಾಗಿದ್ದಾರೆ’ ಎಂದು ಸಂತಸ ವ್ಯಕ್ತಪಡಿಸಿದರು ರಾಜೀವಿ.