ಶುಕ್ರವಾರ ಬೆಳಿಗ್ಗೆ ಕಟಪಾಡಿ ಕೋಟೆಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ರವಿ ವೇಷಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿ, ಏಳು ವರ್ಷಗಳಿಂದ ಅಷ್ಟಮಿಗೆ ವೇಷ ಹಾಕುತ್ತಿದ್ದು ಪ್ರದರ್ಶನ ನೀಡುತ್ತಿದ್ದೇನೆ. ಇದುವರೆಗೆ ₹ 90 ಲಕ್ಷ ಸಂಗ್ರಹಿಸಿ 66 ಮಕ್ಕಳ ಚಿಕಿತ್ಸೆಗಾಗಿ ನೀಡಿದ್ದೇನೆ.