<p><strong>ಉಡುಪಿ</strong>: ಸಂಸ್ಕೃತ ಮತ್ತು ಕನ್ನಡ ಸಾಹಿತ್ಯ ಪರಂಪರೆಯ ಕಲೆಯಾದ ಅಷ್ಟಾವಧಾನವನ್ನು ಭಾನುವಾರ ಕೃಷ್ಣಮಠದ ರಾಜಾಂಗಣದಲ್ಲಿ ನಡೆಸಲಾಯಿತು.</p>.<p>ಈ ಕಾರ್ಯಕ್ರಮವನ್ನು ಮಹಾಮಹೋಪಾಧ್ಯಾಯ ಶತಾವಧಾನಿ ರಾಮನಾಥ ಆಚಾರ್ಯ ನಡೆಸಿಕೊಟ್ಟರು. ಸುಮಾರು 2 ಗಂಟೆಗಳ ಕಾಲಾವಧಿಯಲ್ಲಿ 8 ವಿಭಾಗಗಳ ಎಲ್ಲಾ ಪ್ರಕಾರಗಳನ್ನು ನಿರ್ವಹಿಸಿ ಅತ್ಯಲ್ಪ ಕಾಲದಲ್ಲಿ ಕಠಿಣವಾದ ಸವಾಲುಗಳನ್ನು ನೆರವೇರಿಸಿದರು.</p>.<p>ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರು ಪ್ರಶ್ನಪ್ರಹಸನ, ಅದಮಾರು ಮಠದ ವಿಶ್ವಪ್ರಿಯತೀರ್ಥ ಶ್ರೀಪಾದರು ಗೀತಾಲೋಕನ ಮತ್ತು ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಚಿತ್ರಕವನ ವಿಭಾಗದ ಪೃಚ್ಛಕರಾಗಿದ್ದರು.</p>.<p>ವಿರುದ್ಧವರ್ಣ ವಿಭಾಗದಲ್ಲಿ ಮಧುಸೂದನ ಭಟ್, ಪದಪ್ರಧಾನ ವಿಭಾಗದಲ್ಲಿ ವಿದ್ವಾನ್ ಮುರಾರಿ ತಂತ್ರಿ ಬೈಲೂರು, ಸಮಸ್ಯಾವಸಾನ ವಿಭಾಗದಲ್ಲಿ ವಿದ್ವಾನ್ ಕೃಷ್ಣ ನೂರಿತ್ತಾಯ ಧರ್ಮಸ್ಥಳ, ವೇದಪೂರಣ ವಿಭಾಗದಲ್ಲಿ ಅಡ್ವೆ ಲಕ್ಷ್ಮೀಶ ಭಟ್ ಭಾಗವಹಿಸಿದ್ದರು.</p>.<p>ಡಾ. ಷಣ್ಮುಖ ಹೆಬ್ಬಾರ್ ನಿರ್ವಹಿಸಿದರು. ಮಹಿತೋಷ ಆಚಾರ್ಯ ವಂದಿಸಿದರು. ಪ್ರಮೋದಾಚಾರ್ಯ ಮತ್ತು ರಮೇಶ ಭಟ್ ಸಹಕರಿಸಿದರು. ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ, ಕಾರ್ಯದರ್ಶಿ ವಿದ್ವಾನ್ ಪ್ರಸನ್ನಾಚಾರ್ಯ ಸಹಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಸಂಸ್ಕೃತ ಮತ್ತು ಕನ್ನಡ ಸಾಹಿತ್ಯ ಪರಂಪರೆಯ ಕಲೆಯಾದ ಅಷ್ಟಾವಧಾನವನ್ನು ಭಾನುವಾರ ಕೃಷ್ಣಮಠದ ರಾಜಾಂಗಣದಲ್ಲಿ ನಡೆಸಲಾಯಿತು.</p>.<p>ಈ ಕಾರ್ಯಕ್ರಮವನ್ನು ಮಹಾಮಹೋಪಾಧ್ಯಾಯ ಶತಾವಧಾನಿ ರಾಮನಾಥ ಆಚಾರ್ಯ ನಡೆಸಿಕೊಟ್ಟರು. ಸುಮಾರು 2 ಗಂಟೆಗಳ ಕಾಲಾವಧಿಯಲ್ಲಿ 8 ವಿಭಾಗಗಳ ಎಲ್ಲಾ ಪ್ರಕಾರಗಳನ್ನು ನಿರ್ವಹಿಸಿ ಅತ್ಯಲ್ಪ ಕಾಲದಲ್ಲಿ ಕಠಿಣವಾದ ಸವಾಲುಗಳನ್ನು ನೆರವೇರಿಸಿದರು.</p>.<p>ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರು ಪ್ರಶ್ನಪ್ರಹಸನ, ಅದಮಾರು ಮಠದ ವಿಶ್ವಪ್ರಿಯತೀರ್ಥ ಶ್ರೀಪಾದರು ಗೀತಾಲೋಕನ ಮತ್ತು ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಚಿತ್ರಕವನ ವಿಭಾಗದ ಪೃಚ್ಛಕರಾಗಿದ್ದರು.</p>.<p>ವಿರುದ್ಧವರ್ಣ ವಿಭಾಗದಲ್ಲಿ ಮಧುಸೂದನ ಭಟ್, ಪದಪ್ರಧಾನ ವಿಭಾಗದಲ್ಲಿ ವಿದ್ವಾನ್ ಮುರಾರಿ ತಂತ್ರಿ ಬೈಲೂರು, ಸಮಸ್ಯಾವಸಾನ ವಿಭಾಗದಲ್ಲಿ ವಿದ್ವಾನ್ ಕೃಷ್ಣ ನೂರಿತ್ತಾಯ ಧರ್ಮಸ್ಥಳ, ವೇದಪೂರಣ ವಿಭಾಗದಲ್ಲಿ ಅಡ್ವೆ ಲಕ್ಷ್ಮೀಶ ಭಟ್ ಭಾಗವಹಿಸಿದ್ದರು.</p>.<p>ಡಾ. ಷಣ್ಮುಖ ಹೆಬ್ಬಾರ್ ನಿರ್ವಹಿಸಿದರು. ಮಹಿತೋಷ ಆಚಾರ್ಯ ವಂದಿಸಿದರು. ಪ್ರಮೋದಾಚಾರ್ಯ ಮತ್ತು ರಮೇಶ ಭಟ್ ಸಹಕರಿಸಿದರು. ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ, ಕಾರ್ಯದರ್ಶಿ ವಿದ್ವಾನ್ ಪ್ರಸನ್ನಾಚಾರ್ಯ ಸಹಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>