<p><strong>ಬ್ರಹ್ಮಾವರ:</strong> ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಗಂಗೊಳ್ಳಿ ಕಂಚುಕೋಡು ನಿವಾಸಿ 87 ವರ್ಷ ಪ್ರಾಯದ ಅಶ್ವತ್ಥಮ್ಮ ಭಿಕ್ಷೆ ಬೇಡಿ ವಿವಿಧ ದೇವಸ್ಥಾನಗಳಿಗೆ ಇದುವರೆಗೆ ₹ 5 ಲಕ್ಷಕ್ಕಿಂತಲೂ ಅಧಿಕ ಹಣವನ್ನು ದೇವಸ್ಥಾನಗಳ ಅನ್ನದಾನಕ್ಕೆ ದೇಣಿಗೆ ನೀಡಿರುವುದು ಎಲ್ಲರ ಗಮನ ಸೆಳೆದಿದೆ.</p>.<p>ಅಜ್ಜಿ ಎಂದೇ ಜನಜನಿತರಾಗಿರುವ ಅಶ್ವತ್ಥಮ್ಮ ಅವರು, ಗುರುವಾರ ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದ ಅನ್ನದಾನ ಸೇವೆಗೆ ₹ 1 ಲಕ್ಷ ದೇಣಿಗೆ ನೀಡಿದರು.</p>.<p>ಸರ್ವರಿಗೂ ಒಳಿತಾಗಲಿ, ಲೋಕಕ್ಕೆ ಹಿತವಾಗಲಿ, ಕೊರೊನಾ ಸೋಂಕು ದೂರವಾಗಲಿ, ಹಸಿದವರ ಹೊಟ್ಟೆ ತುಂಬಲಿ ಎನ್ನುವ ಪ್ರಾರ್ಥನೆಯೊಂದಿಗೆ, ಸಂಗ್ರಹಿಸಿದ ಸಂಪತ್ತಿನ ಒಂದು ಭಾಗವನ್ನು ಸಾಲಿಗ್ರಾಮದ ಗುರುನರಸಿಂಹ, ಪೊಳಲಿ ರಾಜರಾಜೇಶ್ವರಿ ದೇವಸ್ಥಾನಗಳ ಅನ್ನದಾನಕ್ಕೆ ನೀಡಿದ್ದಾರೆ.</p>.<p>ದೇಶದ ಉದ್ದಗಲಕ್ಕೂ ಇರುವ ಹಲವು ಪವಿತ್ರ ಕ್ಷೇತ್ರಗಳ ಯಾತ್ರೆ ಮಾಡಿರುವ ಅವರು, ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಶಬರಿಮಲೆಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಪ್ರಯುಕ್ತ ಮಾಲೆಧರಿಸಿ ಸಾಲಿಗ್ರಾಮದ ಗುರುನರಸಿಂಹ ದೇವಳದ ವಠಾರದಲ್ಲಿ ಇದೇ 9 ರಂದು ಇರುಮುಡಿ ಕಟ್ಟುತ್ತಿದ್ದು, ಸಾರ್ವಜನಿಕ ಅನ್ನದಾನ ಸೇವೆ ಮಾಡುತ್ತಿದ್ದಾರೆ. ಮಧ್ಯಾಹ್ನ ನಡೆಯುವ ಅನ್ನಸಂತರ್ಪಣೆಗೆ ಸರ್ವರಿಗೂ ಆಮಂತ್ರಣ ಕೋರಿದ್ದಾರೆ.</p>.<p>ದೇವಳದ ಅರ್ಚಕ ಜನಾರ್ದನ ಅಡಿಗ ಮತ್ತು ವ್ಯವಸ್ಥಾಪಕ ಕೆ.ನಾಗರಾಜ ಹಂದೆ, ದೇವರ ಪ್ರಸಾದ ನೀಡಿ ಗೌರವಿಸಿದರು. ಸಾಲಿಗ್ರಾಮ ಮಯ್ಯ ಟಿಫನ್ ರೂಂನ ಮಾಲೀಕ ರಾಘವೇಂದ್ರ ಹೆಬ್ಬಾರ್ ಮತ್ತು ಮಾನಸ ಸ್ಟುಡಿಯೊ ಮಾಲೀಕ ರವಿಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಹ್ಮಾವರ:</strong> ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಗಂಗೊಳ್ಳಿ ಕಂಚುಕೋಡು ನಿವಾಸಿ 87 ವರ್ಷ ಪ್ರಾಯದ ಅಶ್ವತ್ಥಮ್ಮ ಭಿಕ್ಷೆ ಬೇಡಿ ವಿವಿಧ ದೇವಸ್ಥಾನಗಳಿಗೆ ಇದುವರೆಗೆ ₹ 5 ಲಕ್ಷಕ್ಕಿಂತಲೂ ಅಧಿಕ ಹಣವನ್ನು ದೇವಸ್ಥಾನಗಳ ಅನ್ನದಾನಕ್ಕೆ ದೇಣಿಗೆ ನೀಡಿರುವುದು ಎಲ್ಲರ ಗಮನ ಸೆಳೆದಿದೆ.</p>.<p>ಅಜ್ಜಿ ಎಂದೇ ಜನಜನಿತರಾಗಿರುವ ಅಶ್ವತ್ಥಮ್ಮ ಅವರು, ಗುರುವಾರ ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದ ಅನ್ನದಾನ ಸೇವೆಗೆ ₹ 1 ಲಕ್ಷ ದೇಣಿಗೆ ನೀಡಿದರು.</p>.<p>ಸರ್ವರಿಗೂ ಒಳಿತಾಗಲಿ, ಲೋಕಕ್ಕೆ ಹಿತವಾಗಲಿ, ಕೊರೊನಾ ಸೋಂಕು ದೂರವಾಗಲಿ, ಹಸಿದವರ ಹೊಟ್ಟೆ ತುಂಬಲಿ ಎನ್ನುವ ಪ್ರಾರ್ಥನೆಯೊಂದಿಗೆ, ಸಂಗ್ರಹಿಸಿದ ಸಂಪತ್ತಿನ ಒಂದು ಭಾಗವನ್ನು ಸಾಲಿಗ್ರಾಮದ ಗುರುನರಸಿಂಹ, ಪೊಳಲಿ ರಾಜರಾಜೇಶ್ವರಿ ದೇವಸ್ಥಾನಗಳ ಅನ್ನದಾನಕ್ಕೆ ನೀಡಿದ್ದಾರೆ.</p>.<p>ದೇಶದ ಉದ್ದಗಲಕ್ಕೂ ಇರುವ ಹಲವು ಪವಿತ್ರ ಕ್ಷೇತ್ರಗಳ ಯಾತ್ರೆ ಮಾಡಿರುವ ಅವರು, ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಶಬರಿಮಲೆಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಪ್ರಯುಕ್ತ ಮಾಲೆಧರಿಸಿ ಸಾಲಿಗ್ರಾಮದ ಗುರುನರಸಿಂಹ ದೇವಳದ ವಠಾರದಲ್ಲಿ ಇದೇ 9 ರಂದು ಇರುಮುಡಿ ಕಟ್ಟುತ್ತಿದ್ದು, ಸಾರ್ವಜನಿಕ ಅನ್ನದಾನ ಸೇವೆ ಮಾಡುತ್ತಿದ್ದಾರೆ. ಮಧ್ಯಾಹ್ನ ನಡೆಯುವ ಅನ್ನಸಂತರ್ಪಣೆಗೆ ಸರ್ವರಿಗೂ ಆಮಂತ್ರಣ ಕೋರಿದ್ದಾರೆ.</p>.<p>ದೇವಳದ ಅರ್ಚಕ ಜನಾರ್ದನ ಅಡಿಗ ಮತ್ತು ವ್ಯವಸ್ಥಾಪಕ ಕೆ.ನಾಗರಾಜ ಹಂದೆ, ದೇವರ ಪ್ರಸಾದ ನೀಡಿ ಗೌರವಿಸಿದರು. ಸಾಲಿಗ್ರಾಮ ಮಯ್ಯ ಟಿಫನ್ ರೂಂನ ಮಾಲೀಕ ರಾಘವೇಂದ್ರ ಹೆಬ್ಬಾರ್ ಮತ್ತು ಮಾನಸ ಸ್ಟುಡಿಯೊ ಮಾಲೀಕ ರವಿಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>