ಘಟನೆ ವಿವರ:ಸಾಕ್ಷಿ ಹೇಳಲು ನ್ಯಾಯಾಲಯಕ್ಕೆ ಬಂದಿದ್ದ ಶಾಹಿದ್ ಹಾಗೂ ವಕೀಲ ಗುರುರಾಜ್ ನಡುವೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಾಗ್ವಾದ ನಡೆದಿದ್ದು, ಪರಸ್ಪರ ಹಲ್ಲೆ ನಡೆದಿದೆ. ಘಟನೆ ಹಿನ್ನೆಲೆಯಲ್ಲಿ ಕೋರ್ಟ್ ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು.