ಬೈಂದೂರು: ಉಪ್ಪುಂದ-ನಂದನವನ ಎಂಬಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದ ಘಟನೆ ನಡೆದಿದೆ. ಗಾಯಾಳು ಪ್ರಸನ್ನನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸನ್ನ ಗೆಳೆಯ ಮನೋಜ ಖಾರ್ವಿ ಜೊತೆ ಹೊಟೇಲ್ಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಬುಧವಾರ ರಾತ್ರಿ ನಡೆದಿರುವ ಈ ಹಲ್ಲೆ ತಡವಾಗಿ ಬೆಳಕಿಗೆ ಬಂದಿದೆ.