ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಟಿಎಂ ಕಾರ್ಡ್‌ ವಿವರ ಪಡೆದು ವಂಚನೆ

Last Updated 5 ನವೆಂಬರ್ 2019, 14:40 IST
ಅಕ್ಷರ ಗಾತ್ರ

ಉಡುಪಿ: ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ಕರೆಮಾಡಿದ ವಂಚಕನೊಬ್ಬಉಮೇಶ್‌ ನಾಯಕ್‌ ಎಂಬುವರ ಬ್ಯಾಂಕ್‌ ಖಾತೆಯಿಂದ ₹ 99,999 ಹಣ ದೋಚಿದ್ದಾನೆ.

ಪೆರ್ಣಂಕಿಲದ ಉಮೇಶ ನಾಯಕ್‌ ಕೆನರಾ ಬ್ಯಾಂಕ್ ಮೂಡುಬೆಳ್ಳೆ ಶಾಖೆಯಲ್ಲಿ ಖಾತೆ ಹೊಂದಿದ್ದು, ಶನಿವಾರ ಬ್ಯಾಂಕ್‌ ಅಧಿಕಾರಿ ಹೆಸರಿನಲ್ಲಿ ಅವರಿಗೆ ಕರೆ ಬಂದಿದೆ. ಅವರನ್ನು ಮಾತಿನಲ್ಲಿ ನಂಬಿಸಿ, ಎಟಿಎಂ ಕಾರ್ಡ್‌ನ ವಿವರ ಹಾಗೂ ಒಟಿಪಿಯನ್ನು ಪಡೆದುಕೊಂಡಿದ್ದಾನೆ. ಬಳಿಕ ಖಾತೆಯಿಂದ ಕ್ರಮವಾಗಿ 39,900, 50,000, 10,000 ನಗದು ಡ್ರಾ ಮಾಡಿಕೊಂಡಿದ್ದಾನೆ.

ಈ ಸಂಬಂಧ ಸೆನ್‌ ಠಾಣೆಯಲ್ಲಿ ಐ.ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT