<p><strong>ಉಡುಪಿ:</strong> ಬಾಬ್ರಿ ಮಸೀದಿ ಉತ್ಖನನ ತಂಡದಲ್ಲಿದ್ದ ತಜ್ಞರಲ್ಲಿ ಒಬ್ಬರಾದ ಪ್ರಸಿದ್ಧ ಪುರಾತತ್ವ ತಜ್ಞರಾದ ಕೆ.ಕೆ.ಮೊಹಮ್ಮದ್ ಅವರನ್ನು ಡಾ.ಪಾದೂರು ಗುರುರಾಜ ಭಟ್ ಸ್ಮರಣಾರ್ಥ ಕೊಡಮಾಡುವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್ನ ಚೇರ್ಮನ್ ಪಿ.ಶ್ರೀಪತಿ ತಂತ್ರಿ ತಿಳಿಸಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.28ರಂದು ವಿದ್ಯೋದಯ ಪಬ್ಲಿಕ್ ಶಾಲೆ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಅಯೋಧ್ಯೆ ಉತ್ಖನನ ಹಾಗೂ ಮಧ್ಯಪ್ರದೇಶ, ಜಾರ್ಖಂಡ್ನಲ್ಲಿ ನಡೆದ ಉತ್ಖನನಗಳ ಕುರಿತು ಪ್ರಶಸ್ತಿ ಪುರಸ್ಕೃತ ಕೆ.ಕೆ.ಮೊಹಮ್ಮದ್ ಮಾತನಾಡಲಿದ್ದಾರೆ. ಪ್ರಶಸ್ತಿ ₹ 1 ಲಕ್ಷ ನಗದು ಹಾಗೂ ಫಲಕ ಒಳಗೊಂಡಿದೆ ಎಂದರು.</p>.<p>ಕಾರ್ಯಕ್ರಮವನ್ನು ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಶಾಸಕ ರಘುಪತಿ ಭಟ್, ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ವಿವಿ ವಿಶ್ರಾಂತ ಕುಲಪತಿ ಕೆ.ಭೈರಪ್ಪ ಉಪಸ್ಥಿತರಿರಲಿದ್ದಾರೆ ಎಂದರು.</p>.<p>ಅಯೋಧ್ಯೆಯ ವಿವಾದಿತ ಭೂಮಿಯ ಉತ್ಖನನ ಕಾರ್ಯಕ್ಕೆ ಅಲಹಾಬಾದ್ ನ್ಯಾಯಾಲಯ ನೇಮಿಸಿದ್ದ ತಜ್ಞರ ಸಮಿತಿಯಲ್ಲಿದ್ದ ಕೆ.ಕೆ.ಮೊಹಮ್ಮದ್, ‘ವಿಷ್ಣು ದೇವಾಲಯವನ್ನು ಕೆಡವಿ ಬಾಬ್ರಿ ಮಸೀದಿ ನಿರ್ಮಿಸಲಾಗಿತ್ತು’ ಎಂಬ ಅಂಶಗಳನ್ನು ಪುರಾವೆಗಳ ಸಹಿತ ತೋರಿಸಿದ್ದರು. ಸಮಿತಿಯಲ್ಲಿದ್ದ ಎಲ್ಲ ಮುಸ್ಲಿಂ ಸದಸ್ಯರೂ ಇದನ್ನು ಅನುಮೋದಿಸಿದ್ದರು.</p>.<p>ಮಹಮ್ಮದ್ ನೀಡಿದ ವರದಿಯಲ್ಲಿ ವಿವಾದಿತ ಸ್ಥಳದಲ್ಲಿ ಮೊದಲು ರಾಮನಿಗೆ ಸೇರಿದ ದೇವಾಲಯವಿತ್ತು ಎಂದು ಸ್ಪಷ್ಟವಾಗಿ ಪ್ರತಿಪಾದಿಸಲಾಗಿತ್ತು. ಇದೇ ವರದಿಯ ಆಧಾರದ ಮೇಲೆ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿತು ಎಂದರು.</p>.<p>ಕೆ.ಕೆ.ಮೊಹಮ್ಮದ್ ಅಯೋಧ್ಯೆ ಮಾತ್ರವಲ್ಲ, ಮಧ್ಯಪ್ರದೇಶ, ಜಾರ್ಖಂಡ್, ಸೇರಿದಂತೆ ಹಲವು ಕಡೆಗಳಲ್ಲಿ ದೇವಾಲಯಗಳ ಉತ್ಖನನ ಹಾಗೂ ಪುನರುಜ್ಜೀವನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್ ಖಜಾಂಚಿ ಪರಶುರಾಮ್ ಭಟ್, ವಾಸುದೇವ್ ಭಟ್, ಸದಸ್ಯರಾದ ರಘುಪತಿ ರಾವ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಬಾಬ್ರಿ ಮಸೀದಿ ಉತ್ಖನನ ತಂಡದಲ್ಲಿದ್ದ ತಜ್ಞರಲ್ಲಿ ಒಬ್ಬರಾದ ಪ್ರಸಿದ್ಧ ಪುರಾತತ್ವ ತಜ್ಞರಾದ ಕೆ.ಕೆ.ಮೊಹಮ್ಮದ್ ಅವರನ್ನು ಡಾ.ಪಾದೂರು ಗುರುರಾಜ ಭಟ್ ಸ್ಮರಣಾರ್ಥ ಕೊಡಮಾಡುವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್ನ ಚೇರ್ಮನ್ ಪಿ.ಶ್ರೀಪತಿ ತಂತ್ರಿ ತಿಳಿಸಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.28ರಂದು ವಿದ್ಯೋದಯ ಪಬ್ಲಿಕ್ ಶಾಲೆ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಅಯೋಧ್ಯೆ ಉತ್ಖನನ ಹಾಗೂ ಮಧ್ಯಪ್ರದೇಶ, ಜಾರ್ಖಂಡ್ನಲ್ಲಿ ನಡೆದ ಉತ್ಖನನಗಳ ಕುರಿತು ಪ್ರಶಸ್ತಿ ಪುರಸ್ಕೃತ ಕೆ.ಕೆ.ಮೊಹಮ್ಮದ್ ಮಾತನಾಡಲಿದ್ದಾರೆ. ಪ್ರಶಸ್ತಿ ₹ 1 ಲಕ್ಷ ನಗದು ಹಾಗೂ ಫಲಕ ಒಳಗೊಂಡಿದೆ ಎಂದರು.</p>.<p>ಕಾರ್ಯಕ್ರಮವನ್ನು ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಶಾಸಕ ರಘುಪತಿ ಭಟ್, ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ವಿವಿ ವಿಶ್ರಾಂತ ಕುಲಪತಿ ಕೆ.ಭೈರಪ್ಪ ಉಪಸ್ಥಿತರಿರಲಿದ್ದಾರೆ ಎಂದರು.</p>.<p>ಅಯೋಧ್ಯೆಯ ವಿವಾದಿತ ಭೂಮಿಯ ಉತ್ಖನನ ಕಾರ್ಯಕ್ಕೆ ಅಲಹಾಬಾದ್ ನ್ಯಾಯಾಲಯ ನೇಮಿಸಿದ್ದ ತಜ್ಞರ ಸಮಿತಿಯಲ್ಲಿದ್ದ ಕೆ.ಕೆ.ಮೊಹಮ್ಮದ್, ‘ವಿಷ್ಣು ದೇವಾಲಯವನ್ನು ಕೆಡವಿ ಬಾಬ್ರಿ ಮಸೀದಿ ನಿರ್ಮಿಸಲಾಗಿತ್ತು’ ಎಂಬ ಅಂಶಗಳನ್ನು ಪುರಾವೆಗಳ ಸಹಿತ ತೋರಿಸಿದ್ದರು. ಸಮಿತಿಯಲ್ಲಿದ್ದ ಎಲ್ಲ ಮುಸ್ಲಿಂ ಸದಸ್ಯರೂ ಇದನ್ನು ಅನುಮೋದಿಸಿದ್ದರು.</p>.<p>ಮಹಮ್ಮದ್ ನೀಡಿದ ವರದಿಯಲ್ಲಿ ವಿವಾದಿತ ಸ್ಥಳದಲ್ಲಿ ಮೊದಲು ರಾಮನಿಗೆ ಸೇರಿದ ದೇವಾಲಯವಿತ್ತು ಎಂದು ಸ್ಪಷ್ಟವಾಗಿ ಪ್ರತಿಪಾದಿಸಲಾಗಿತ್ತು. ಇದೇ ವರದಿಯ ಆಧಾರದ ಮೇಲೆ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿತು ಎಂದರು.</p>.<p>ಕೆ.ಕೆ.ಮೊಹಮ್ಮದ್ ಅಯೋಧ್ಯೆ ಮಾತ್ರವಲ್ಲ, ಮಧ್ಯಪ್ರದೇಶ, ಜಾರ್ಖಂಡ್, ಸೇರಿದಂತೆ ಹಲವು ಕಡೆಗಳಲ್ಲಿ ದೇವಾಲಯಗಳ ಉತ್ಖನನ ಹಾಗೂ ಪುನರುಜ್ಜೀವನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್ ಖಜಾಂಚಿ ಪರಶುರಾಮ್ ಭಟ್, ವಾಸುದೇವ್ ಭಟ್, ಸದಸ್ಯರಾದ ರಘುಪತಿ ರಾವ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>