<p><strong>ಉಡುಪಿ:</strong>ಬಡ ಹಾಗೂ ಮಧ್ಯಮ ವರ್ಗದವರಿಗೆ ಉಚಿತ ಆರೋಗ್ಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ಜಾರಿಗೆ ಬಂದಿರುವ ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೂ 7,706 ರೋಗಿಗಳು ಚಿಕಿತ್ಸೆ ಪಡೆದಿದ್ದಾರೆ.</p>.<p>2018ರ ಅಕ್ಟೋಬರ್ನಿಂದ ಯೋಜನೆ ಆರಂಭವಾಗಿದ್ದು, 2019ರ ನವೆಂಬರ್ ಅಂತ್ಯಕ್ಕೆಜಿಲ್ಲೆಯಲ್ಲಿ 7,706 ಮಂದಿ ₹ 23.54 ಕೋಟಿ ವೆಚ್ಚದ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಅಂಕಿಅಂಶಗಳು ತಿಳಿಸಿವೆ.</p>.<p>ಇದರಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿರುವ ರೋಗಿಗಳ ವಿವರಗಳನ್ನು ನೋಡುವುದಾದರೆ,ಕಾರ್ಕಳ ತಾಲ್ಲೂಕಿನಲ್ಲಿ 1,436 ಫಲಾನುಭವಿಗಳು ₹ 3.94 ಕೋಟಿ ವೆಚ್ಚದ ಚಿಕಿತ್ಸೆ ಪಡೆದಿದ್ದರೆ, ಕುಂದಾಪುರದಲ್ಲಿ 3,257 ಮಂದಿ ₹ 10.04 ಕೋಟಿ, ಉಡುಪಿ ತಾಲ್ಲೂಕಿನಲ್ಲಿ 3,013 ರೋಗಿಗಳಗೆ ₹ 9.54 ಕೋಟಿ ವೆಚ್ಚದ ಚಿಕಿತ್ಸೆ ನೀಡಲಾಗಿದೆ.</p>.<p>ರೆಫರಲ್ ಪಡೆಯದೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ರೋಗಿಗಳ ಸಂಖ್ಯೆಯೂ ಹೆಚ್ಚಾಗಿದೆ.ಉಡುಪಿ ಜಿಲ್ಲಾಸ್ಪತ್ರೆಯಲ್ಲಿ 2,550, ಕಾರ್ಕಳದಲ್ಲಿ 490 ಹಾಗೂ ಕುಂದಾಪುರದಲ್ಲಿ 952 ಮಂದಿ ಶಸ್ತ್ರಚಿಕಿತ್ಸೆ ಸೇರಿದಂತೆ ಇತರ ಚಿಕಿತ್ಸೆಗಳನ್ನು ಪಡೆದುಕೊಂಡಿದ್ದಾರೆ.</p>.<p>ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವುದು, ಬಡವರಿಗೆ ಗುಣಮಟ್ಟದ ಚಿಕಿತ್ಸೆ ನೀಡುವುದು ಯೋಜನೆಯ ಉದ್ದೇಶವಾಗಿದ್ದು, ಇದರಡಿ ಚಿಕಿತ್ಸೆ ಪಡೆದುಕೊಂಡ ಫಲಾನುಭವಿಗಳ ಸಂಖ್ಯೆಯಲ್ಲಿ ಉಡುಪಿ ಜಿಲ್ಲಾ ಆಸ್ಪತ್ರೆಯು ರಾಜ್ಯದಲ್ಲಿ ಎಂಟನೇ ಸ್ಥಾನದಲ್ಲಿದೆ ಎಂದು ಅಂಕಿಅಂಶಗಳು ತಿಳಿಸುತ್ತವೆ.</p>.<p>ಜಿಲ್ಲೆಯಲ್ಲಿ ಇದುವರೆಗೆ ಮೂರು ಲಕ್ಷಕ್ಕೂ ಹೆಚ್ಚು ಕಾರ್ಡ್ಗಳನ್ನು ವಿತರಿಸಲಾಗಿದ್ದು, ಕಾರ್ಡ್ ವಿತರಣೆಯಲ್ಲಿ ಉಡುಪಿ ರಾಜ್ಯಕ್ಕೆ ದ್ವಿತೀಯ ಸ್ಥಾನದಲ್ಲಿದೆ ಎಂದು ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕದ ಜಿಲ್ಲಾ ವ್ಯವಸ್ಥಾಪಕ ಜಗನ್ನಾಥ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong>ಬಡ ಹಾಗೂ ಮಧ್ಯಮ ವರ್ಗದವರಿಗೆ ಉಚಿತ ಆರೋಗ್ಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ಜಾರಿಗೆ ಬಂದಿರುವ ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೂ 7,706 ರೋಗಿಗಳು ಚಿಕಿತ್ಸೆ ಪಡೆದಿದ್ದಾರೆ.</p>.<p>2018ರ ಅಕ್ಟೋಬರ್ನಿಂದ ಯೋಜನೆ ಆರಂಭವಾಗಿದ್ದು, 2019ರ ನವೆಂಬರ್ ಅಂತ್ಯಕ್ಕೆಜಿಲ್ಲೆಯಲ್ಲಿ 7,706 ಮಂದಿ ₹ 23.54 ಕೋಟಿ ವೆಚ್ಚದ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಅಂಕಿಅಂಶಗಳು ತಿಳಿಸಿವೆ.</p>.<p>ಇದರಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿರುವ ರೋಗಿಗಳ ವಿವರಗಳನ್ನು ನೋಡುವುದಾದರೆ,ಕಾರ್ಕಳ ತಾಲ್ಲೂಕಿನಲ್ಲಿ 1,436 ಫಲಾನುಭವಿಗಳು ₹ 3.94 ಕೋಟಿ ವೆಚ್ಚದ ಚಿಕಿತ್ಸೆ ಪಡೆದಿದ್ದರೆ, ಕುಂದಾಪುರದಲ್ಲಿ 3,257 ಮಂದಿ ₹ 10.04 ಕೋಟಿ, ಉಡುಪಿ ತಾಲ್ಲೂಕಿನಲ್ಲಿ 3,013 ರೋಗಿಗಳಗೆ ₹ 9.54 ಕೋಟಿ ವೆಚ್ಚದ ಚಿಕಿತ್ಸೆ ನೀಡಲಾಗಿದೆ.</p>.<p>ರೆಫರಲ್ ಪಡೆಯದೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ರೋಗಿಗಳ ಸಂಖ್ಯೆಯೂ ಹೆಚ್ಚಾಗಿದೆ.ಉಡುಪಿ ಜಿಲ್ಲಾಸ್ಪತ್ರೆಯಲ್ಲಿ 2,550, ಕಾರ್ಕಳದಲ್ಲಿ 490 ಹಾಗೂ ಕುಂದಾಪುರದಲ್ಲಿ 952 ಮಂದಿ ಶಸ್ತ್ರಚಿಕಿತ್ಸೆ ಸೇರಿದಂತೆ ಇತರ ಚಿಕಿತ್ಸೆಗಳನ್ನು ಪಡೆದುಕೊಂಡಿದ್ದಾರೆ.</p>.<p>ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವುದು, ಬಡವರಿಗೆ ಗುಣಮಟ್ಟದ ಚಿಕಿತ್ಸೆ ನೀಡುವುದು ಯೋಜನೆಯ ಉದ್ದೇಶವಾಗಿದ್ದು, ಇದರಡಿ ಚಿಕಿತ್ಸೆ ಪಡೆದುಕೊಂಡ ಫಲಾನುಭವಿಗಳ ಸಂಖ್ಯೆಯಲ್ಲಿ ಉಡುಪಿ ಜಿಲ್ಲಾ ಆಸ್ಪತ್ರೆಯು ರಾಜ್ಯದಲ್ಲಿ ಎಂಟನೇ ಸ್ಥಾನದಲ್ಲಿದೆ ಎಂದು ಅಂಕಿಅಂಶಗಳು ತಿಳಿಸುತ್ತವೆ.</p>.<p>ಜಿಲ್ಲೆಯಲ್ಲಿ ಇದುವರೆಗೆ ಮೂರು ಲಕ್ಷಕ್ಕೂ ಹೆಚ್ಚು ಕಾರ್ಡ್ಗಳನ್ನು ವಿತರಿಸಲಾಗಿದ್ದು, ಕಾರ್ಡ್ ವಿತರಣೆಯಲ್ಲಿ ಉಡುಪಿ ರಾಜ್ಯಕ್ಕೆ ದ್ವಿತೀಯ ಸ್ಥಾನದಲ್ಲಿದೆ ಎಂದು ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕದ ಜಿಲ್ಲಾ ವ್ಯವಸ್ಥಾಪಕ ಜಗನ್ನಾಥ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>