ಕರಾವಳಿಗೆ ರಂಗಾಯಣ ಬೇಕು ಎಂಬ ಹಲವು ವರ್ಷಗಳ ಬೇಡಿಕೆ ಈಡೇರಿದ್ದು, ಯಕ್ಷಗಾನ ನಾಟಕ ಹಾಗೂ ನೃತ್ಯವನ್ನೊಳಗಂಡ ಯಕ್ಷ ರಂಗಾಯಣವನ್ನು ಕಾರ್ಕಳದಲ್ಲಿ ಸ್ಥಾಪಿಸಲಾಗುವುದು. ಕೋಟಿ ಚೆನ್ನಯ್ಯ ಥೀಂ ಪಾರ್ಕ್ನ ಆವರಣದಲ್ಲಿ 2 ಎಕರೆಯಲ್ಲಿ ಯಕ್ಷ ರಂಗಾಯಣ ನಿರ್ಮಾಣವಾಗಲಿದ್ದು, ಯಕ್ಷಗಾನ, ನಾಟಕ, ಸಂಗೀತ ಹಾಗೂ ನೃತ್ಯ ತರಬೇತಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದರು.