ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಂದೂರು:ಮಾದಕ ವಸ್ತು ಸಾಗಾಟ: ಇಬ್ಬರ ಬಂಧನ

Last Updated 6 ಜುಲೈ 2022, 13:27 IST
ಅಕ್ಷರ ಗಾತ್ರ

ಬೈಂದೂರು: ತಾಲ್ಲೂಕಿನ ಯಡ್ತರೆಯಲ್ಲಿ ಗಾಂಜಾ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಬದ್ರಿಯಾ ಕಾಲೊನಿ ನಿವಾಸಿ ಅಬ್ದುಲ್ ರೆಹಮಾನ್ ಹಾಗೂ ಉಡುಪಿಯ ಶಿರ್ವದ ನಿವಾಸಿ ಅಬ್ದುಲ್ ಸಮದ್ ಎಂಬಾತನನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ₹ 25 ಸಾವಿರ ಮೌಲ್ಯದ 30 ಗ್ರಾಂ ಗಾಂಜಾ, ₹ 11 ಸಾವಿರ ಮೌಲ್ಯದ 11.40 ಗ್ರಾಂ ಎಂಡಿಎಂಎ ಹರಳು, ₹ 4 ಲಕ್ಷ ಮೌಲ್ಯದ ಕಾರು, ಮೊಬೈಲ್ ಫೋನ್‌ಗಳು, ತೂಕದ ಮೆಷಿನ್ ಹಾಗೂ ₹ 1080 ನಗದು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳು ಮಾದಕ ವಸ್ತುವನ್ನು ಸಲೀಂ ಮಂಚಿ ಎಂಬಾತನಿಂದ ಖರೀದಿಸಿ ರಾಷ್ಟ್ರೀಯ ಹೆದ್ದಾರಿ 66ರ ಮೂಲಕ ಕುಂದಾಪುರದಿಂದ ಭಟ್ಕಳದ ಕಡೆಗೆ ತೆರಳುತ್ತಿದ್ದರು. ಕುಂದಾಪುರ ಡಿವೈಎಸ್ಪಿ ಶ್ರೀಕಾಂತ ಮಾರ್ಗದರ್ಶನದಲ್ಲಿ ಬೈಂದೂರು ಇನ್‌ಸ್ಪೆಕ್ಟರ್ ಸಂತೋಷ ಕಾಯ್ಕಿಣಿ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದೆ. ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT