<p><strong>ಬೈಂದೂರು</strong>: ಯಕ್ಷಗಾನ, ತಾಳಮದ್ದಳೆ, ಹೂವಿನಕೋಲು ಮುಂತಾದವುಗಳು ಪರಂಪರೆಯ ಭಾಗವಾಗಿದ್ದು ಮಹಾಕಾವ್ಯಗಳನ್ನು ಜನರಿಗೆ ತಲುಪಿಸಲು ಉತ್ತಮ ಮಾಧ್ಯಮ ಎಂದು ನಿವೃತ್ತ ಸೈನಿಕ, ಬರಹಗಾರ ಚಂದ್ರಶೇಖರ ನಾವಡ ಹೇಳಿದರು.</p>.<p>ಬೈಂದೂರಿನ ಲಾವಣ್ಯ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಶ್ರೀ ಸೇನೇಶ್ವರ ದೇವಸ್ಥಾನ, ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಯುವಕ ಸಂಘದ ಆಶ್ರಯದಲ್ಲಿ ನಡೆದ ಯಕ್ಷಗಾನ ತಾಳಮದ್ದಳೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ತಾಳಮದ್ದಲೆ ಕಲೆ ಇತ್ತೀಚೆಗೆ ಅಪರೂಪವಾಗುತ್ತಿದೆ. ಯುವಜನತೆಯಲ್ಲಿ ಈ ಕಲೆಯ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದ್ದು ಇದರ ಮಹತ್ವವನ್ನು ಅರಿತು ಉಳಿಸಿ ಬೆಳೆಸಬೇಕು ಎಂದು ಅವರು ಹೇಳಿದರು.</p>.<p>ಲಾವಣ್ಯದ ಅಧ್ಯಕ್ಷ ನರಸಿಂಹ ಬಿ.ನಾಯಕ್, ಹಿರಿಯ ಕಲಾವಿದ ಗಣೇಶ ಕಾರಂತ್, ಬೈಂದೂರು ವೃತ್ತ ನಿರೀಕ್ಷಕ ಸವಿತ್ರತೇಜ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುಧಾಕರ ಯಡ್ತರೆ, ಡಾ.ಬಿ.ಆರ್. ಅಂಬೇಡ್ಕರ್ ಸಂಘದ ಅಧ್ಯಕ್ಷ ರಾಘವೇಂದ್ರ ಬಿ.ಕೆ, ಚಂದ್ರ ಯಡ್ತರೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೈಂದೂರು</strong>: ಯಕ್ಷಗಾನ, ತಾಳಮದ್ದಳೆ, ಹೂವಿನಕೋಲು ಮುಂತಾದವುಗಳು ಪರಂಪರೆಯ ಭಾಗವಾಗಿದ್ದು ಮಹಾಕಾವ್ಯಗಳನ್ನು ಜನರಿಗೆ ತಲುಪಿಸಲು ಉತ್ತಮ ಮಾಧ್ಯಮ ಎಂದು ನಿವೃತ್ತ ಸೈನಿಕ, ಬರಹಗಾರ ಚಂದ್ರಶೇಖರ ನಾವಡ ಹೇಳಿದರು.</p>.<p>ಬೈಂದೂರಿನ ಲಾವಣ್ಯ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಶ್ರೀ ಸೇನೇಶ್ವರ ದೇವಸ್ಥಾನ, ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಯುವಕ ಸಂಘದ ಆಶ್ರಯದಲ್ಲಿ ನಡೆದ ಯಕ್ಷಗಾನ ತಾಳಮದ್ದಳೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ತಾಳಮದ್ದಲೆ ಕಲೆ ಇತ್ತೀಚೆಗೆ ಅಪರೂಪವಾಗುತ್ತಿದೆ. ಯುವಜನತೆಯಲ್ಲಿ ಈ ಕಲೆಯ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದ್ದು ಇದರ ಮಹತ್ವವನ್ನು ಅರಿತು ಉಳಿಸಿ ಬೆಳೆಸಬೇಕು ಎಂದು ಅವರು ಹೇಳಿದರು.</p>.<p>ಲಾವಣ್ಯದ ಅಧ್ಯಕ್ಷ ನರಸಿಂಹ ಬಿ.ನಾಯಕ್, ಹಿರಿಯ ಕಲಾವಿದ ಗಣೇಶ ಕಾರಂತ್, ಬೈಂದೂರು ವೃತ್ತ ನಿರೀಕ್ಷಕ ಸವಿತ್ರತೇಜ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುಧಾಕರ ಯಡ್ತರೆ, ಡಾ.ಬಿ.ಆರ್. ಅಂಬೇಡ್ಕರ್ ಸಂಘದ ಅಧ್ಯಕ್ಷ ರಾಘವೇಂದ್ರ ಬಿ.ಕೆ, ಚಂದ್ರ ಯಡ್ತರೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>