<p><strong>ಉಡುಪಿ:</strong> ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಜಿಲ್ಲೆಯಾದ್ಯಂತ ಮುಸ್ಲಿಮರು ಸಡಗರ, ಸಂಭ್ರಮದಿಂದ ಸೋಮವಾರ ಆಚರಿಸಿದರು.</p>.<p>ಹೊಸ ಬಟ್ಟೆ ಧರಿಸಿ ಬೆಳಿಗ್ಗೆ ಮಸೀದಿಗೆ ತೆರಳಿ ಅಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಶುಭಾಶಯ ಕೋರಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಪ್ರಾರ್ಥನೆ ಸಲ್ಲಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು.</p>.<p>ಉಡುಪಿಯ ನಾಯರ್ಕೆರೆಯ ಹಾಶಿಮಿ ಮಸೀದಿಯಲ್ಲಿ ಹಬ್ಬವನ್ನು ಆಚರಿಸಲಾಯಿತು. ಪ್ರಾರ್ಥನೆಯ ನೇತೃತ್ವವನ್ನು ಮೌಲಾನಾ ಒಬೈದುರ್ ರೆಹಮಾನ್ ನದ್ವಿ ವಹಿಸಿದ್ದರು. ಸಮಾಜದಲ್ಲಿ ಪ್ರೀತಿ, ಶಾಂತಿ ಮತ್ತು ಸಾಮರಸ್ಯದ ಮಹತ್ವವನ್ನು ಅವರು ಒತ್ತಿ ಹೇಳಿದರು.</p>.<p>ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ಪ್ರಾರ್ಥನೆ ನೆರವೇರಿತು.</p>.<p>ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಖುತ್ಬಾ ಪಾರಾಯಣ ನಡೆಯಿತು. ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.</p>.<p><strong>ಬೈಂದೂರು ವರದಿ:</strong> ಬೈಂದೂರು, ನಾಗೂರು, ನಾವುಂದ, ಶಿರೂರು ಮುಂತಾದ ಕಡೆಗಳಲ್ಲಿ ಬಕ್ರೀದ್ ಹಬ್ಬವನ್ನು ಮುಸ್ಲಿರು ಸಡಗರದಿಂದ ಆಚರಿಸಿದರು.</p>.<p>ಹಬ್ಬದ ಪ್ರಯುಕ್ತ ಮುಂಜಾನೆ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಫಾತಿಮಾ ಮಹ್ಮದ್ ಸಯೀದ್ ಮಸೀದಿ ಕೆಸರಕೋಡಿ, ಜಾಮೀಯಾ ಮಸೀದಿ, ಹಡವಿನಕೋಣೆ ಅಬ್ದುಲ್ ತಲಾಹಿ ಜಾಮೀಯಾ ಮಸೀದಿ, ಬೈಂದೂರಿನ ಜಾಮೀಯಾ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು.</p>.<p><strong>ಕಾಪು ವರದಿ:</strong> ತಾಲ್ಲೂಕಿನಾದ್ಯಂತ ‘ಈದುಲ್ ಅಝಾ’ (ಬಕ್ರೀದ್)ವನ್ನು ಸಂಭ್ರಮದಿಂದ ಆಚರಿಸಲಾಯಿತು.<br>ಕಾಪು, ಪಡುಬಿದ್ರಿ, ಶಿರ್ವ, ಕಟಪಾಡಿ ಭಾಗದಲ್ಲಿ ಬೆಳಿಗ್ಗೆ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ನಮಾಝ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಜಿಲ್ಲೆಯಾದ್ಯಂತ ಮುಸ್ಲಿಮರು ಸಡಗರ, ಸಂಭ್ರಮದಿಂದ ಸೋಮವಾರ ಆಚರಿಸಿದರು.</p>.<p>ಹೊಸ ಬಟ್ಟೆ ಧರಿಸಿ ಬೆಳಿಗ್ಗೆ ಮಸೀದಿಗೆ ತೆರಳಿ ಅಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಶುಭಾಶಯ ಕೋರಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಪ್ರಾರ್ಥನೆ ಸಲ್ಲಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು.</p>.<p>ಉಡುಪಿಯ ನಾಯರ್ಕೆರೆಯ ಹಾಶಿಮಿ ಮಸೀದಿಯಲ್ಲಿ ಹಬ್ಬವನ್ನು ಆಚರಿಸಲಾಯಿತು. ಪ್ರಾರ್ಥನೆಯ ನೇತೃತ್ವವನ್ನು ಮೌಲಾನಾ ಒಬೈದುರ್ ರೆಹಮಾನ್ ನದ್ವಿ ವಹಿಸಿದ್ದರು. ಸಮಾಜದಲ್ಲಿ ಪ್ರೀತಿ, ಶಾಂತಿ ಮತ್ತು ಸಾಮರಸ್ಯದ ಮಹತ್ವವನ್ನು ಅವರು ಒತ್ತಿ ಹೇಳಿದರು.</p>.<p>ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ಪ್ರಾರ್ಥನೆ ನೆರವೇರಿತು.</p>.<p>ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಖುತ್ಬಾ ಪಾರಾಯಣ ನಡೆಯಿತು. ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.</p>.<p><strong>ಬೈಂದೂರು ವರದಿ:</strong> ಬೈಂದೂರು, ನಾಗೂರು, ನಾವುಂದ, ಶಿರೂರು ಮುಂತಾದ ಕಡೆಗಳಲ್ಲಿ ಬಕ್ರೀದ್ ಹಬ್ಬವನ್ನು ಮುಸ್ಲಿರು ಸಡಗರದಿಂದ ಆಚರಿಸಿದರು.</p>.<p>ಹಬ್ಬದ ಪ್ರಯುಕ್ತ ಮುಂಜಾನೆ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಫಾತಿಮಾ ಮಹ್ಮದ್ ಸಯೀದ್ ಮಸೀದಿ ಕೆಸರಕೋಡಿ, ಜಾಮೀಯಾ ಮಸೀದಿ, ಹಡವಿನಕೋಣೆ ಅಬ್ದುಲ್ ತಲಾಹಿ ಜಾಮೀಯಾ ಮಸೀದಿ, ಬೈಂದೂರಿನ ಜಾಮೀಯಾ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು.</p>.<p><strong>ಕಾಪು ವರದಿ:</strong> ತಾಲ್ಲೂಕಿನಾದ್ಯಂತ ‘ಈದುಲ್ ಅಝಾ’ (ಬಕ್ರೀದ್)ವನ್ನು ಸಂಭ್ರಮದಿಂದ ಆಚರಿಸಲಾಯಿತು.<br>ಕಾಪು, ಪಡುಬಿದ್ರಿ, ಶಿರ್ವ, ಕಟಪಾಡಿ ಭಾಗದಲ್ಲಿ ಬೆಳಿಗ್ಗೆ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ನಮಾಝ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>