<p><strong>ಉಡುಪಿ:</strong> ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಶನಿವಾರ ಸಂಭ್ರಮದಿಂದ ಆಚರಿಸಿದರು.</p>.<p>ಉಡುಪಿ ನಗರ, ಕಾಪು, ಪಡುಬಿದ್ರಿ, ಶಿರ್ವ, ಕಟಪಾಡಿ, ಬ್ರಹ್ಮಾವರ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ ಮೊದಲಾದೆಡೆ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಜ್ ನೆರವೇರಿತು.</p>.<p>ಮುಸ್ಲಿಮರು ಬೆಳಿಗ್ಗೆ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಜ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಜ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.</p>.<p>ಉಡುಪಿ ಜಾಮಿಯ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ, ಬ್ರಹ್ಮಗಿರಿ ಹಾಶಿಮಿ ಮಸೀದಿಯ ಇಮಾಮ್ ಮೌಲಾನಾ ಉಬೇದಾರ್ ರೆಹಮಾನ್ ನದ್ವಿ ನೇತೃತ್ವದಲ್ಲಿ ಈದ್ ನಮಾಜ್ ನಿರ್ವಹಿಸಲಾಯಿತು.</p>.<p>ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ವಿಶೇಷ ನಮಾಜ್ ಮತ್ತು ಖುತ್ಬಾ ಪಾರಾಯಣ ನಡೆಯಿತು.</p>.<p>‘ಸಾಮಾಜಿಕ ಮಾಧ್ಯಮಗಳಲ್ಲಿ ಬೇರೆ ಸಮಾಜದವರನ್ನು ನಿಂದಿಸುವುದು ಅಥವಾ ಅವಹೇಳನ ಮಾಡುವ ಪೋಸ್ಟ್ಗಳನ್ನು ಹಾಕಬಾರದು’ ಎಂದು ಬ್ರಹ್ಮಗಿರಿ ಹಾಶಿಮಿ ಮಸೀದಿಯ ಇಮಾಮ್ ಮೌಲಾನಾ ಉಬೇದಾರ್ ರೆಹಮಾನ್ ನದ್ವಿ ಸಂದೇಶದಲ್ಲಿ ಕರೆ ನೀಡಿದ್ದಾರೆ.</p>.<p>ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಶನಿವಾರ ಸಂಭ್ರಮದಿಂದ ಆಚರಿಸಿದರು.</p>.<p>ಉಡುಪಿ ನಗರ, ಕಾಪು, ಪಡುಬಿದ್ರಿ, ಶಿರ್ವ, ಕಟಪಾಡಿ, ಬ್ರಹ್ಮಾವರ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ ಮೊದಲಾದೆಡೆ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಜ್ ನೆರವೇರಿತು.</p>.<p>ಮುಸ್ಲಿಮರು ಬೆಳಿಗ್ಗೆ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಜ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಜ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.</p>.<p>ಉಡುಪಿ ಜಾಮಿಯ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ, ಬ್ರಹ್ಮಗಿರಿ ಹಾಶಿಮಿ ಮಸೀದಿಯ ಇಮಾಮ್ ಮೌಲಾನಾ ಉಬೇದಾರ್ ರೆಹಮಾನ್ ನದ್ವಿ ನೇತೃತ್ವದಲ್ಲಿ ಈದ್ ನಮಾಜ್ ನಿರ್ವಹಿಸಲಾಯಿತು.</p>.<p>ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ವಿಶೇಷ ನಮಾಜ್ ಮತ್ತು ಖುತ್ಬಾ ಪಾರಾಯಣ ನಡೆಯಿತು.</p>.<p>‘ಸಾಮಾಜಿಕ ಮಾಧ್ಯಮಗಳಲ್ಲಿ ಬೇರೆ ಸಮಾಜದವರನ್ನು ನಿಂದಿಸುವುದು ಅಥವಾ ಅವಹೇಳನ ಮಾಡುವ ಪೋಸ್ಟ್ಗಳನ್ನು ಹಾಕಬಾರದು’ ಎಂದು ಬ್ರಹ್ಮಗಿರಿ ಹಾಶಿಮಿ ಮಸೀದಿಯ ಇಮಾಮ್ ಮೌಲಾನಾ ಉಬೇದಾರ್ ರೆಹಮಾನ್ ನದ್ವಿ ಸಂದೇಶದಲ್ಲಿ ಕರೆ ನೀಡಿದ್ದಾರೆ.</p>.<p>ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>