<p><strong>ಉಡುಪಿ</strong>: ತಾಲ್ಲೂಕುಗಳಲ್ಲಿ ಬಾಲಭವನಗಳನ್ನು ನಿರ್ಮಿಸಲು ಜಮೀನು ಗುರುತಿಸಿ, ಜಾಗ ಮಂಜೂರಾತಿ ಪಡೆದು ಪ್ರಸ್ತಾವ ಸಲ್ಲಿಸಿದರೆ ಬಾಲಭವನ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ರಾಜ್ಯ ಬಾಲಭವನ ಸೊಸೈಟಿ ಅಧ್ಯಕ್ಷೆ ಚಿಕ್ಕಮ್ಮ ಬಸವರಾಜ್ ಹೇಳಿದರು.</p>.<p>ಗುರುವಾರ ಬ್ರಹ್ಮಗಿರಿ ಬಾಲಭವನಕ್ಕೆ ಭೇಟಿನೀಡಿದ ಬಳಿಕ ಮಾತನಾಡಿದ ಅವರು, 30 ಜಿಲ್ಲೆಗಳಲ್ಲಿರುವ ಬಾಲಭವನಗಳಲ್ಲಿ 18 ಮಾತ್ರ ಸ್ವಂತ ಕಟ್ಟಡಗಳಲ್ಲಿ ನಡೆಯುತ್ತಿವೆ. ಪ್ರಸಕ್ತ ವರ್ಷದಲ್ಲಿ ಬಾಲಭವನ ಸೊಸೈಟಿಗೆ ₹ 10 ಕೋಟಿ ಅನುದಾನವನ್ನು ಸರ್ಕಾರ ನೀಡಿದ್ದು, ಮುಂದಿನ ಆರ್ಥಿಕ ವರ್ಷದಲ್ಲಿ ₹ 17 ಕೋಟಿ ನೀಡುವಂತೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು.</p>.<p>ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಬಾಲಭವನಗಳ ಬೇಡಿಕೆಗೆ ಅನುಸಾರವಾಗಿ ಅನುದಾನ ಒದಗಿಸಲಾಗುತ್ತದೆ. ಬಾಲಭವನಗಳಲ್ಲಿ ವಾರಾಂತ್ಯದ ಕಾರ್ಯಕ್ರಮ ಆಯೋಜಿಸಲು ಸರ್ಕಾರದಿಂದ ಅನುಮತಿ ಪಡೆಯಲಾಗುವುದು. ಬಾಲಭವನಕ್ಕೆ ಹೆಚ್ಚಿನ ಮಕ್ಕಳು ಭೇಟಿನೀಡುವಂತೆ ಕ್ರಮ ಕೈಗೊಳ್ಳಲಾಗುವುದು.</p>.<p>ಬಾಲಭವನದ ಚಟುವಟಿಕೆಗಳ ಬಗ್ಗೆ ಶಾಲಾ ಮಕ್ಕಳಿಗೆ ಮಾಹಿತಿ ನೀಡುವುದು ಹಾಗೂ ಮಕ್ಕಳನ್ನು ಆಕರ್ಷಿಸುವಂತಹ ಆಟಿಕೆ ಮತ್ತು ಚಟುವಟಿಕೆಗಳನ್ನು ಬಾಲಭವನ ಆವರಣದಲ್ಲಿ ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಂಗವಿಕಲ ಮಕ್ಕಳನ್ನೂ ಬಾಲಭವನದ ಚಟುವಟಿಕೆಗಳಲ್ಲಿ ಭಾಗಿಯಾಗುವಂತೆ ಮಾಡಲು ನಿರ್ದೇಶನ ನೀಡಲಾಗಿದೆ ಎಂದು ಚಿಕ್ಕಮ್ಮ ಬಸವರಾಜ್ ತಿಳಿಸಿದರು.</p>.<p>ಜಿಲ್ಲಾ ಬಾಲಭವನದಲ್ಲಿ ಗ್ರಂಥಾಲಯ ಹಾಗೂ ಆಡಳಿತ ಕಚೇರಿ ಕಟ್ಟಡ ಕಾಮಗಾರಿಗಳಿಗೆ ಈಗಾಗಲೇ ಕೇಂದ್ರ ಬಾಲಭವನದಿಂದ ₹ 56.75 ಲಕ್ಷ ವೆಚ್ಚವಾಗಿದೆ. ಪ್ರಸಕ್ತ ವರ್ಷ ಬಾಲಭವನ ಚಟುವಟಿಕೆಗಳಿಗೆ ನೀಡಲಾಗಿದ್ದ ಅನುದಾನದಲ್ಲಿ ಕೋವಿಡ್ನಿಂದ ₹ 8 ಲಕ್ಷ ಉಳಿದಿದ್ದು, ಅದನ್ನು ಬಾಲಭವನದ ಅಭಿವೃದ್ಧಿಗೆ ಹಾಗೂ ಮಕ್ಕಳ ಕಾರ್ಯ ಚಟುವಟಿಕೆಗಳಿಗೆ ಬಳಸಲಾಗುವುದು ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಆರ್. ಶೇಷಪ್ಪ, ಸಿಡಿಪಿಒ ವೀಣಾ ವಿವೇಕಾನಂದ, ಬಾಲಭವನದ ಸಂಯೋಜಕಿ ರಮ್ಯಾ, ಉಸ್ತುವಾರಿ ಚಂದ್ರಿಕಾ, ನಗರಸಭೆ ವ್ಯವಸ್ಥಾಪಕ ವೆಂಕಟರಮಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ತಾಲ್ಲೂಕುಗಳಲ್ಲಿ ಬಾಲಭವನಗಳನ್ನು ನಿರ್ಮಿಸಲು ಜಮೀನು ಗುರುತಿಸಿ, ಜಾಗ ಮಂಜೂರಾತಿ ಪಡೆದು ಪ್ರಸ್ತಾವ ಸಲ್ಲಿಸಿದರೆ ಬಾಲಭವನ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ರಾಜ್ಯ ಬಾಲಭವನ ಸೊಸೈಟಿ ಅಧ್ಯಕ್ಷೆ ಚಿಕ್ಕಮ್ಮ ಬಸವರಾಜ್ ಹೇಳಿದರು.</p>.<p>ಗುರುವಾರ ಬ್ರಹ್ಮಗಿರಿ ಬಾಲಭವನಕ್ಕೆ ಭೇಟಿನೀಡಿದ ಬಳಿಕ ಮಾತನಾಡಿದ ಅವರು, 30 ಜಿಲ್ಲೆಗಳಲ್ಲಿರುವ ಬಾಲಭವನಗಳಲ್ಲಿ 18 ಮಾತ್ರ ಸ್ವಂತ ಕಟ್ಟಡಗಳಲ್ಲಿ ನಡೆಯುತ್ತಿವೆ. ಪ್ರಸಕ್ತ ವರ್ಷದಲ್ಲಿ ಬಾಲಭವನ ಸೊಸೈಟಿಗೆ ₹ 10 ಕೋಟಿ ಅನುದಾನವನ್ನು ಸರ್ಕಾರ ನೀಡಿದ್ದು, ಮುಂದಿನ ಆರ್ಥಿಕ ವರ್ಷದಲ್ಲಿ ₹ 17 ಕೋಟಿ ನೀಡುವಂತೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು.</p>.<p>ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಬಾಲಭವನಗಳ ಬೇಡಿಕೆಗೆ ಅನುಸಾರವಾಗಿ ಅನುದಾನ ಒದಗಿಸಲಾಗುತ್ತದೆ. ಬಾಲಭವನಗಳಲ್ಲಿ ವಾರಾಂತ್ಯದ ಕಾರ್ಯಕ್ರಮ ಆಯೋಜಿಸಲು ಸರ್ಕಾರದಿಂದ ಅನುಮತಿ ಪಡೆಯಲಾಗುವುದು. ಬಾಲಭವನಕ್ಕೆ ಹೆಚ್ಚಿನ ಮಕ್ಕಳು ಭೇಟಿನೀಡುವಂತೆ ಕ್ರಮ ಕೈಗೊಳ್ಳಲಾಗುವುದು.</p>.<p>ಬಾಲಭವನದ ಚಟುವಟಿಕೆಗಳ ಬಗ್ಗೆ ಶಾಲಾ ಮಕ್ಕಳಿಗೆ ಮಾಹಿತಿ ನೀಡುವುದು ಹಾಗೂ ಮಕ್ಕಳನ್ನು ಆಕರ್ಷಿಸುವಂತಹ ಆಟಿಕೆ ಮತ್ತು ಚಟುವಟಿಕೆಗಳನ್ನು ಬಾಲಭವನ ಆವರಣದಲ್ಲಿ ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಂಗವಿಕಲ ಮಕ್ಕಳನ್ನೂ ಬಾಲಭವನದ ಚಟುವಟಿಕೆಗಳಲ್ಲಿ ಭಾಗಿಯಾಗುವಂತೆ ಮಾಡಲು ನಿರ್ದೇಶನ ನೀಡಲಾಗಿದೆ ಎಂದು ಚಿಕ್ಕಮ್ಮ ಬಸವರಾಜ್ ತಿಳಿಸಿದರು.</p>.<p>ಜಿಲ್ಲಾ ಬಾಲಭವನದಲ್ಲಿ ಗ್ರಂಥಾಲಯ ಹಾಗೂ ಆಡಳಿತ ಕಚೇರಿ ಕಟ್ಟಡ ಕಾಮಗಾರಿಗಳಿಗೆ ಈಗಾಗಲೇ ಕೇಂದ್ರ ಬಾಲಭವನದಿಂದ ₹ 56.75 ಲಕ್ಷ ವೆಚ್ಚವಾಗಿದೆ. ಪ್ರಸಕ್ತ ವರ್ಷ ಬಾಲಭವನ ಚಟುವಟಿಕೆಗಳಿಗೆ ನೀಡಲಾಗಿದ್ದ ಅನುದಾನದಲ್ಲಿ ಕೋವಿಡ್ನಿಂದ ₹ 8 ಲಕ್ಷ ಉಳಿದಿದ್ದು, ಅದನ್ನು ಬಾಲಭವನದ ಅಭಿವೃದ್ಧಿಗೆ ಹಾಗೂ ಮಕ್ಕಳ ಕಾರ್ಯ ಚಟುವಟಿಕೆಗಳಿಗೆ ಬಳಸಲಾಗುವುದು ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಆರ್. ಶೇಷಪ್ಪ, ಸಿಡಿಪಿಒ ವೀಣಾ ವಿವೇಕಾನಂದ, ಬಾಲಭವನದ ಸಂಯೋಜಕಿ ರಮ್ಯಾ, ಉಸ್ತುವಾರಿ ಚಂದ್ರಿಕಾ, ನಗರಸಭೆ ವ್ಯವಸ್ಥಾಪಕ ವೆಂಕಟರಮಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>