<p><strong>ಉಡುಪಿ</strong>: ಅ.1ರೊಳಗೆ ರಾಜ್ಯ ಸರ್ಕಾರ ಪಂಚಮಸಾಲಿ, ಗೌಡ ಲಿಂಗಾಯತ, ಮಲೆಗೌಡ, ದೀಕ್ಷಾ ಲಿಂಗಾಯತರನ್ನು 2 ‘ಎ’ ಮೀಸಲಾತಿ ಪಟ್ಟಿಗೆ ಸೇರಿಸಬೇಕು. ಎಲ್ಲ ಲಿಂಗಾಯತ ಸಮಾಜಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಬೇಕು. ಇಲ್ಲವಾದರೆ, ಮೀಸಲಾತಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.</p>.<p>ಪ್ರತಿಜ್ಞಾ ಪಂಚಾಯತ್ ಬೃಹತ್ ರಾಜ್ಯ ಅಭಿಯಾನ ಅಂಗವಾಗಿ ಬುಧವಾರ ಉಡುಪಿಗೆ ಭೇಟಿನೀಡಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸ್ವಾಮೀಜಿ, ಲಿಂಗಾಯತ ಪಂಚಮಸಾಲಿ ಸಮಾಜವನ್ನು ಕೇವಲ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಸಮಾಜಕ್ಕೆ ಸಿಗಬೇಕಾದ ಶಿಕ್ಷಣ ಹಾಗೂ ಉದ್ಯೋಗ ಮೀಸಲಾತಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಸಾಮಾಜಿಕ ನ್ಯಾಯಕ್ಕೆ ಒತ್ತಾಯಿಸಿ ಜ.14ರಿಂದ 39 ದಿನಗಳ 712 ಕಿ.ಮೀ ಬೃಹತ್ ಪಾದಯಾತ್ರೆ ನಡೆಸಲಾಗಿತ್ತು.</p>.<p>ಫೆ.21ರಂದು ಅರಮನೆ ಮೈದಾನದಲ್ಲಿ ಸಮಾಜದ 10 ಲಕ್ಷ ಜನರು ಒಟ್ಟಾಗಿ ಮೀಸಲಾತಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಹಕ್ಕೋತ್ತಾಯ ಮಾಡಲಾಗಿತ್ತು. ಸ್ವಾತಂತ್ರ್ಯ ಉದ್ಯಾನದಲ್ಲಿ 23 ದಿನ ಧರಣಿ ಸತ್ಯಾಗ್ರಹ ನಡೆಸಲಾಗಿತ್ತು. ಈ ಮೂರು ಹೋರಾಟಗಳಿಗೆ ಮಣಿದ ರಾಜ್ಯ ಸರ್ಕಾರ ಮಾರ್ಚ್ 15ರಂದು ಅಧಿವೇಶನದಲ್ಲಿ ಮೀಸಲಾತಿ ನೀಡುವು ಭರವಸೆ ನೀಡಿ, 6 ತಿಂಗಳ ಕಾಲಾವಕಾಶ ಕೋರಿತ್ತು.</p>.<p>ಸರ್ಕಾರ ತೆಗೆದುಕೊಂಡ ಕಾಲಾವಕಾಶ ಸೆ.15ಕ್ಕೆ ಮುಕ್ತಾಯವಾಗುತ್ತಿದ್ದು, ಇದುವರೆಗೂ ಬೇಡಿಕೆ ಈಡೇರಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರವನ್ನು ಎಚ್ಚರಿಸಲು, ಸಮುದಾಯವನ್ನು ಒಗ್ಗೂಡಿಸಲು ಮತ್ತೆ ಹೋರಾಟದ ಹಾದಿ ತುಳಿಯಬೇಕಾಗಿದೆ. ಅದರ ಭಾಗವಾಗಿ ಆ.26ರಿಂದ ರಾಜ್ಯದಾದ್ಯಂತ ಪ್ರತಿಜ್ಞಾ ಪಂಚಾಯತ್ ಅಭಿಯಾನ ಆರಂಭಿಸಲಾಗಿದೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಲಿಂಗಾಯತ ಪಂಚಮಸಾಲಿ ಸಮಾಜದ ಮೇಲೆ ಅಭಿಮಾನವಿದೆ. ಅ.1ರೊಳಗೆ ಸಮಾಜಕ್ಕೆ 2 ‘ಎ’ ಮೀಸಲಾತಿ ನೀಡುವ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು. ವಿಳಂಬ ಮಾಡಿದರೆ, ಅ.1ರಂದು ಬೆಂಗಳೂರಿನ ಫ್ರೀಂಡ ಪಾರ್ಕ್ನಲ್ಲಿ ಜೆ.ಎಚ್.ಪಟೇಲ್ ಜಯಂತಿ ನಡೆಸಿ, ಮತ್ತೆ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಪಂಚಮಸಾಲಿ ಪೀಠಗಳು ಸರ್ಕಾರದ ವಿರುದ್ಧವಾಗಲಿ, ಪರವಾಗಲಿ ಇಲ್ಲ. ಸಮಾಜಕ್ಕೆ ನ್ಯಾಯ ಕೊಡಿಸುವುದು ಹಾಗೂ ಹಕ್ಕುಗಳನ್ನು ಪಡೆಯುವುದು ಮಾತ್ರ ಪೀಠಗಳ ಉದ್ದೇಶ. ಹರಿಹರದ ಪೀಠ ಹಿಂದೆ ಅರ್ಧದಲ್ಲಿ ಬಂದು ಹೋರಾಟದಲ್ಲಿ ಭಾಗವಹಿಸಿತ್ತು. ಈ ಬಾರಿಯೂ ಹೋರಾಟಕ್ಕೆ ಕೈಜೋಡಿಸಿದರೆ ಸ್ವಾಗತ ಎಂದರು.</p>.<p>ಪಾದಯಾತ್ರೆ ಶುರುವಾದಾಗಿನಿಂದಲೂ ಹೋರಾಟಗಳನ್ನು ಹತ್ತಿಕ್ಕುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ. ಎಲ್ಲವನ್ನೂ ಸಕಾರಾತ್ಮಕವಾಗಿ ತೆಗೆದುಕೊಂಡಿದ್ದು, ಅಸೂಹೆ, ದ್ವೇಷ ಸಾಧಿಸುವವರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸುತ್ತೇನೆ. ಯಾವುದೇ ಬೇಸರವಿಲ್ಲ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಸಿದ್ದರಾಮಣ್ಣ, ಯು.ಸಿ.ನಿರಂಜನ, ಗಂಗಾಧರ್, ಶಂಭು ಪಾಟೀಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಅ.1ರೊಳಗೆ ರಾಜ್ಯ ಸರ್ಕಾರ ಪಂಚಮಸಾಲಿ, ಗೌಡ ಲಿಂಗಾಯತ, ಮಲೆಗೌಡ, ದೀಕ್ಷಾ ಲಿಂಗಾಯತರನ್ನು 2 ‘ಎ’ ಮೀಸಲಾತಿ ಪಟ್ಟಿಗೆ ಸೇರಿಸಬೇಕು. ಎಲ್ಲ ಲಿಂಗಾಯತ ಸಮಾಜಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಬೇಕು. ಇಲ್ಲವಾದರೆ, ಮೀಸಲಾತಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.</p>.<p>ಪ್ರತಿಜ್ಞಾ ಪಂಚಾಯತ್ ಬೃಹತ್ ರಾಜ್ಯ ಅಭಿಯಾನ ಅಂಗವಾಗಿ ಬುಧವಾರ ಉಡುಪಿಗೆ ಭೇಟಿನೀಡಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸ್ವಾಮೀಜಿ, ಲಿಂಗಾಯತ ಪಂಚಮಸಾಲಿ ಸಮಾಜವನ್ನು ಕೇವಲ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಸಮಾಜಕ್ಕೆ ಸಿಗಬೇಕಾದ ಶಿಕ್ಷಣ ಹಾಗೂ ಉದ್ಯೋಗ ಮೀಸಲಾತಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಸಾಮಾಜಿಕ ನ್ಯಾಯಕ್ಕೆ ಒತ್ತಾಯಿಸಿ ಜ.14ರಿಂದ 39 ದಿನಗಳ 712 ಕಿ.ಮೀ ಬೃಹತ್ ಪಾದಯಾತ್ರೆ ನಡೆಸಲಾಗಿತ್ತು.</p>.<p>ಫೆ.21ರಂದು ಅರಮನೆ ಮೈದಾನದಲ್ಲಿ ಸಮಾಜದ 10 ಲಕ್ಷ ಜನರು ಒಟ್ಟಾಗಿ ಮೀಸಲಾತಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಹಕ್ಕೋತ್ತಾಯ ಮಾಡಲಾಗಿತ್ತು. ಸ್ವಾತಂತ್ರ್ಯ ಉದ್ಯಾನದಲ್ಲಿ 23 ದಿನ ಧರಣಿ ಸತ್ಯಾಗ್ರಹ ನಡೆಸಲಾಗಿತ್ತು. ಈ ಮೂರು ಹೋರಾಟಗಳಿಗೆ ಮಣಿದ ರಾಜ್ಯ ಸರ್ಕಾರ ಮಾರ್ಚ್ 15ರಂದು ಅಧಿವೇಶನದಲ್ಲಿ ಮೀಸಲಾತಿ ನೀಡುವು ಭರವಸೆ ನೀಡಿ, 6 ತಿಂಗಳ ಕಾಲಾವಕಾಶ ಕೋರಿತ್ತು.</p>.<p>ಸರ್ಕಾರ ತೆಗೆದುಕೊಂಡ ಕಾಲಾವಕಾಶ ಸೆ.15ಕ್ಕೆ ಮುಕ್ತಾಯವಾಗುತ್ತಿದ್ದು, ಇದುವರೆಗೂ ಬೇಡಿಕೆ ಈಡೇರಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರವನ್ನು ಎಚ್ಚರಿಸಲು, ಸಮುದಾಯವನ್ನು ಒಗ್ಗೂಡಿಸಲು ಮತ್ತೆ ಹೋರಾಟದ ಹಾದಿ ತುಳಿಯಬೇಕಾಗಿದೆ. ಅದರ ಭಾಗವಾಗಿ ಆ.26ರಿಂದ ರಾಜ್ಯದಾದ್ಯಂತ ಪ್ರತಿಜ್ಞಾ ಪಂಚಾಯತ್ ಅಭಿಯಾನ ಆರಂಭಿಸಲಾಗಿದೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಲಿಂಗಾಯತ ಪಂಚಮಸಾಲಿ ಸಮಾಜದ ಮೇಲೆ ಅಭಿಮಾನವಿದೆ. ಅ.1ರೊಳಗೆ ಸಮಾಜಕ್ಕೆ 2 ‘ಎ’ ಮೀಸಲಾತಿ ನೀಡುವ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು. ವಿಳಂಬ ಮಾಡಿದರೆ, ಅ.1ರಂದು ಬೆಂಗಳೂರಿನ ಫ್ರೀಂಡ ಪಾರ್ಕ್ನಲ್ಲಿ ಜೆ.ಎಚ್.ಪಟೇಲ್ ಜಯಂತಿ ನಡೆಸಿ, ಮತ್ತೆ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಪಂಚಮಸಾಲಿ ಪೀಠಗಳು ಸರ್ಕಾರದ ವಿರುದ್ಧವಾಗಲಿ, ಪರವಾಗಲಿ ಇಲ್ಲ. ಸಮಾಜಕ್ಕೆ ನ್ಯಾಯ ಕೊಡಿಸುವುದು ಹಾಗೂ ಹಕ್ಕುಗಳನ್ನು ಪಡೆಯುವುದು ಮಾತ್ರ ಪೀಠಗಳ ಉದ್ದೇಶ. ಹರಿಹರದ ಪೀಠ ಹಿಂದೆ ಅರ್ಧದಲ್ಲಿ ಬಂದು ಹೋರಾಟದಲ್ಲಿ ಭಾಗವಹಿಸಿತ್ತು. ಈ ಬಾರಿಯೂ ಹೋರಾಟಕ್ಕೆ ಕೈಜೋಡಿಸಿದರೆ ಸ್ವಾಗತ ಎಂದರು.</p>.<p>ಪಾದಯಾತ್ರೆ ಶುರುವಾದಾಗಿನಿಂದಲೂ ಹೋರಾಟಗಳನ್ನು ಹತ್ತಿಕ್ಕುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ. ಎಲ್ಲವನ್ನೂ ಸಕಾರಾತ್ಮಕವಾಗಿ ತೆಗೆದುಕೊಂಡಿದ್ದು, ಅಸೂಹೆ, ದ್ವೇಷ ಸಾಧಿಸುವವರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸುತ್ತೇನೆ. ಯಾವುದೇ ಬೇಸರವಿಲ್ಲ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಸಿದ್ದರಾಮಣ್ಣ, ಯು.ಸಿ.ನಿರಂಜನ, ಗಂಗಾಧರ್, ಶಂಭು ಪಾಟೀಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>