ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ನಿರ್ವಹಣೆ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಸಚಿವರು, ‘ತಜ್ಞರ ಸಮಿತಿ ಶಿಫಾರಸ್ಸಿನಂತೆ ರಾಜ್ಯದಲ್ಲಿ 14 ದಿನ ಕಠಿಣ ನಿರ್ಬಂಧ ಹಾಕಲಾಗಿದೆ. 10 ಅಥವಾ 12ನೇ ದಿನ ತಜ್ಞರ ಸಮಿತಿ ಸಭೆ ಸೇರಿ ಅಭಿಪ್ರಾಯ ತಿಳಿಸಲಿದೆ. ಬಳಿಕ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.