<p><strong>ಕಾಪು (ಪಡುಬಿದ್ರಿ):</strong> ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಬುಧವಾರ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರ್ಶನ ಪಡೆದರು.</p>.<p>ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು. ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.</p>.<p>ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ‘ಇದು ಜೀವನದಲ್ಲಿ ಅತ್ಯಂತ ಶ್ರೇಷ್ಠವಾದ ದಿನ. ಇಂತಹ ಚರಿತ್ರೆಯುಳ್ಳ ದೇವಸ್ಥಾನಕ್ಕೆ ಬಂದಿರುವುದು ಪೂರ್ವಜನ್ಮದ ಪುಣ್ಯ. ತಾಯಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ’ ಎಂದರು.</p>.<p>ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ವ್ಯವಸ್ಥಾಪನಾ ಸಮಿತಿಯ ಸದಸ್ಯ ಮಾಧವ ಆರ್. ಪಾಲನ್, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ, ಹುಬ್ಬಳ್ಳಿ ಧಾರವಾಡ ಸಮಿತಿಯ ಸಂಚಾಲಕ ಸುಗ್ಗಿ ಸುಧಾಕರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶೇಖರ ಸಾಲ್ಯಾನ್, ರವೀಂದ್ರ ಮಲ್ಲಾರ್, ಮನೋಹರ ರಾವ್, ಜಯಲಕ್ಷ್ಮಿ ಎಸ್. ಶೆಟ್ಟಿ, ಚರಿತ ದೇವಾಡಿಗ, ಪ್ರಚಾರ ಸಮಿತಿ ಸಂಚಾಲಕ ಜಯರಾಂ ಆಚಾರ್ಯ, ನವದುರ್ಗಾ ಲೇಖನ ಯಜ್ಞ ಸಮಿತಿಯ ಪ್ರಧಾನ ಸಂಚಾಲಕಿ ಸಾವಿತ್ರಿ ಗಣೇಶ್ ಮತ್ತು ಪ್ರಬಂಧಕ ಗೋವರ್ಧನ್ ಸೇರಿಗಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಪು (ಪಡುಬಿದ್ರಿ):</strong> ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಬುಧವಾರ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರ್ಶನ ಪಡೆದರು.</p>.<p>ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು. ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.</p>.<p>ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ‘ಇದು ಜೀವನದಲ್ಲಿ ಅತ್ಯಂತ ಶ್ರೇಷ್ಠವಾದ ದಿನ. ಇಂತಹ ಚರಿತ್ರೆಯುಳ್ಳ ದೇವಸ್ಥಾನಕ್ಕೆ ಬಂದಿರುವುದು ಪೂರ್ವಜನ್ಮದ ಪುಣ್ಯ. ತಾಯಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ’ ಎಂದರು.</p>.<p>ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ವ್ಯವಸ್ಥಾಪನಾ ಸಮಿತಿಯ ಸದಸ್ಯ ಮಾಧವ ಆರ್. ಪಾಲನ್, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ, ಹುಬ್ಬಳ್ಳಿ ಧಾರವಾಡ ಸಮಿತಿಯ ಸಂಚಾಲಕ ಸುಗ್ಗಿ ಸುಧಾಕರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶೇಖರ ಸಾಲ್ಯಾನ್, ರವೀಂದ್ರ ಮಲ್ಲಾರ್, ಮನೋಹರ ರಾವ್, ಜಯಲಕ್ಷ್ಮಿ ಎಸ್. ಶೆಟ್ಟಿ, ಚರಿತ ದೇವಾಡಿಗ, ಪ್ರಚಾರ ಸಮಿತಿ ಸಂಚಾಲಕ ಜಯರಾಂ ಆಚಾರ್ಯ, ನವದುರ್ಗಾ ಲೇಖನ ಯಜ್ಞ ಸಮಿತಿಯ ಪ್ರಧಾನ ಸಂಚಾಲಕಿ ಸಾವಿತ್ರಿ ಗಣೇಶ್ ಮತ್ತು ಪ್ರಬಂಧಕ ಗೋವರ್ಧನ್ ಸೇರಿಗಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>