<p><strong>ಉಡುಪಿ:</strong> ‘ಬೀಡಿ ಕಾರ್ಮಿಕರಿಗಾಗಿ ಸರ್ಕಾರ ನಿಗದಿ ಮಾಡಿದ ತುಟ್ಟಿಭತ್ಯೆ, ಕನಿಷ್ಠ ಕೂಲಿಯನ್ನು ಕಾರ್ಮಿಕರಿಗೆ ಕೊಡಲು ಮಾಲೀಕರು ಹಿಂದೇಟು ಹಾಕುತ್ತಿದ್ದಾರೆ’ ಎಂದು ಬೀಡಿ ಫೆಡರೇಶನ್ ರಾಜ್ಯ ಘಟಕ ಅಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ ಆರೋಪಿಸಿದರು.</p>.<p>ನಗರದ ವಿಮಾ ನೌಕರರ ಸಂಘದ ಕಚೇರಿ ಸಭಾಂಗಣದಲ್ಲಿ ಭಾನುವಾರ ನಡೆದ ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ 8ನೇ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸರ್ಕಾರ ನಿಗದಿ ಮಾಡಿದ ₹301 ಕನಿಷ್ಠ ವೇತನ ನೀಡದೇ ₹287 ನೀಡುತ್ತೇವೆ ಎಂದು ಹೇಳಿ ಅದನ್ನೂ ಕಾರ್ಮಿಕರಿಗೆ ಮಾಲೀಕರು ನೀಡುತ್ತಿಲ್ಲ. ಆದ್ದರಿಂದ ಕಾರ್ಮಿಕರು ಮುಂದಿನ ದಿನಗಳಲ್ಲಿ ನಿರ್ಣಾಯಕವಾದ ಹೋರಾಟಕ್ಕೆ ಮುಂದಾಗಬೇಕು’ ಎಂದರು.</p>.<p>‘ನಮ್ಮನ್ನು ಅಳುವ ಸರ್ಕಾರದ ಪ್ರತಿನಿಧಿಗಳು, ಶಾಸಕರು, ಸಂಸದರು ಯಾರು ಕೂಡ ಅಧಿವೇಶನದಲ್ಲಿ ಬೀಡಿ ಕಾರ್ಮಿಕರ ಬಗ್ಗೆ ಮಾತನಾಡುವುದಿಲ್ಲ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ 3 ಲಕ್ಷಕ್ಕೂ ಮಿಕ್ಕಿ ಬೀಡಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಇದೇ 24 ರಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಅಹೋರಾತ್ರಿ ರಾತ್ರಿ ಹೋರಾಟ ಮತ್ತು 28 ರಂದು ಸಹಾಯಕ ಆಯುಕ್ತರ ಕಚೇರಿ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದರು.</p>.<p>ಮುಖ್ಯ ಅತಿಥಿಗಳಾಗಿ ಬೀಡಿ ಫೆಡರೇಶನ್ ಉಪಾಧ್ಯಕ್ಷೆ ಬಲ್ಕೀಸ್, ಕಾರ್ಕಳ ತಾಲ್ಲೂಕು ಬೀಡಿ ಕಾರ್ಮಿಕ ಸಂಘದ ಅಧ್ಯಕ್ಷೆ ಸುನೀತಾ ಶೆಟ್ಟಿ, ಜನವಾದಿ ಮಹಿಳಾ ಸಂಘದ ಕಾರ್ಯದರ್ಶಿ ಶೀಲಾವತಿ, ಉಡುಪಿ ಬೀಡಿ ಸಂಘದ ಅಧ್ಯಕ್ಷೆ ನಳಿನಿ ಎಸ್. ಉಪಸ್ಥಿತರಿದ್ದರು.</p>.<p>ಸಮ್ಮೇಳನದ ಅಧ್ಯಕ್ಷತೆಯನ್ನು ಬೀಡಿ ಫೆಡರೇಶನ್ ಅಧ್ಯಕ್ಷರಾದ ಮಹಾಬಲ ವಡೇಯರಹೊಬಳಿ ವಹಿಸಿದ್ದರು. ಫೆಡರೇಶನ್ ಕಾರ್ಯದರ್ಶಿ ಉಮೇಶ್ ಕುಂದರ್ ಸ್ವಾಗತಿಸಿದರು. ಕವಿರಾಜ್. ಎಸ್.ಕಾಂಚನ್ ವಂದಿಸಿದರು.</p>.<p>ಸಮ್ಮೇಳನದಲ್ಲಿ ಮುಂದಿನ ಮೂರು ವರ್ಷದ ಅವಧಿಗೆ ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಶನ್ನ 15 ಜನರ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಉಮೇಶ್ ಕುಂದರ್, ಪ್ರಧಾನ ಕಾರ್ಯದರ್ಶಿಯಾಗಿ ಕವಿರಾಜ್ ಎಸ್.ಕಾಂಚನ್, ಕೋಶಾಧಿಕಾರಿಯಾಗಿ ಬಲ್ಕೀಸ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ‘ಬೀಡಿ ಕಾರ್ಮಿಕರಿಗಾಗಿ ಸರ್ಕಾರ ನಿಗದಿ ಮಾಡಿದ ತುಟ್ಟಿಭತ್ಯೆ, ಕನಿಷ್ಠ ಕೂಲಿಯನ್ನು ಕಾರ್ಮಿಕರಿಗೆ ಕೊಡಲು ಮಾಲೀಕರು ಹಿಂದೇಟು ಹಾಕುತ್ತಿದ್ದಾರೆ’ ಎಂದು ಬೀಡಿ ಫೆಡರೇಶನ್ ರಾಜ್ಯ ಘಟಕ ಅಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ ಆರೋಪಿಸಿದರು.</p>.<p>ನಗರದ ವಿಮಾ ನೌಕರರ ಸಂಘದ ಕಚೇರಿ ಸಭಾಂಗಣದಲ್ಲಿ ಭಾನುವಾರ ನಡೆದ ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ 8ನೇ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸರ್ಕಾರ ನಿಗದಿ ಮಾಡಿದ ₹301 ಕನಿಷ್ಠ ವೇತನ ನೀಡದೇ ₹287 ನೀಡುತ್ತೇವೆ ಎಂದು ಹೇಳಿ ಅದನ್ನೂ ಕಾರ್ಮಿಕರಿಗೆ ಮಾಲೀಕರು ನೀಡುತ್ತಿಲ್ಲ. ಆದ್ದರಿಂದ ಕಾರ್ಮಿಕರು ಮುಂದಿನ ದಿನಗಳಲ್ಲಿ ನಿರ್ಣಾಯಕವಾದ ಹೋರಾಟಕ್ಕೆ ಮುಂದಾಗಬೇಕು’ ಎಂದರು.</p>.<p>‘ನಮ್ಮನ್ನು ಅಳುವ ಸರ್ಕಾರದ ಪ್ರತಿನಿಧಿಗಳು, ಶಾಸಕರು, ಸಂಸದರು ಯಾರು ಕೂಡ ಅಧಿವೇಶನದಲ್ಲಿ ಬೀಡಿ ಕಾರ್ಮಿಕರ ಬಗ್ಗೆ ಮಾತನಾಡುವುದಿಲ್ಲ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ 3 ಲಕ್ಷಕ್ಕೂ ಮಿಕ್ಕಿ ಬೀಡಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಇದೇ 24 ರಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಅಹೋರಾತ್ರಿ ರಾತ್ರಿ ಹೋರಾಟ ಮತ್ತು 28 ರಂದು ಸಹಾಯಕ ಆಯುಕ್ತರ ಕಚೇರಿ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದರು.</p>.<p>ಮುಖ್ಯ ಅತಿಥಿಗಳಾಗಿ ಬೀಡಿ ಫೆಡರೇಶನ್ ಉಪಾಧ್ಯಕ್ಷೆ ಬಲ್ಕೀಸ್, ಕಾರ್ಕಳ ತಾಲ್ಲೂಕು ಬೀಡಿ ಕಾರ್ಮಿಕ ಸಂಘದ ಅಧ್ಯಕ್ಷೆ ಸುನೀತಾ ಶೆಟ್ಟಿ, ಜನವಾದಿ ಮಹಿಳಾ ಸಂಘದ ಕಾರ್ಯದರ್ಶಿ ಶೀಲಾವತಿ, ಉಡುಪಿ ಬೀಡಿ ಸಂಘದ ಅಧ್ಯಕ್ಷೆ ನಳಿನಿ ಎಸ್. ಉಪಸ್ಥಿತರಿದ್ದರು.</p>.<p>ಸಮ್ಮೇಳನದ ಅಧ್ಯಕ್ಷತೆಯನ್ನು ಬೀಡಿ ಫೆಡರೇಶನ್ ಅಧ್ಯಕ್ಷರಾದ ಮಹಾಬಲ ವಡೇಯರಹೊಬಳಿ ವಹಿಸಿದ್ದರು. ಫೆಡರೇಶನ್ ಕಾರ್ಯದರ್ಶಿ ಉಮೇಶ್ ಕುಂದರ್ ಸ್ವಾಗತಿಸಿದರು. ಕವಿರಾಜ್. ಎಸ್.ಕಾಂಚನ್ ವಂದಿಸಿದರು.</p>.<p>ಸಮ್ಮೇಳನದಲ್ಲಿ ಮುಂದಿನ ಮೂರು ವರ್ಷದ ಅವಧಿಗೆ ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಶನ್ನ 15 ಜನರ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಉಮೇಶ್ ಕುಂದರ್, ಪ್ರಧಾನ ಕಾರ್ಯದರ್ಶಿಯಾಗಿ ಕವಿರಾಜ್ ಎಸ್.ಕಾಂಚನ್, ಕೋಶಾಧಿಕಾರಿಯಾಗಿ ಬಲ್ಕೀಸ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>