<p><strong>ಉಡುಪಿ: ‘</strong>ಇಂದು ನಮ್ಮ ಜಗತ್ತು ತಲ್ಲಣದಲ್ಲಿದೆ. ಈ ತಲ್ಲಣಕ್ಕೆ ಭಗವದ್ಗೀತೆಯೇ ಔಷಧಿ. ಶ್ರೀಕೃಷ್ಣ ವಿಶ್ವಕ್ಕೆ ನೀಡಿರುವ ದೊಡ್ಡ ಕೊಡುಗೆಯೇ ಗೀತೆ’ ಎಂದು ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಶ್ರೀಪಾದರು ಅಭಿಪ್ರಾಯಪಟ್ಟರು.</p>.<p>ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಬೃಹತ್ ಗೀತೋತ್ಸವದ ಅಂಗವಾಗಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಂತ ಸಂದೇಶ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಬದುಕಿನಲ್ಲಿ ಅಶಾಂತಿ ಇರುತ್ತದೆ, ಅಶಾಂತಿ ಬರುವುದೇ ಶಾಂತಿಯ ಮೂಲವನ್ನು ತಿಳಿಸಲು. ಇಡೀ ವಿಶ್ವಕ್ಕೆ ಶಾಂತಿಯನ್ನು ಬೋಧಿಸಬೇಕೆಂಬ ಉದ್ದೇಶದಿಂದ ಪುತ್ತಿಗೆ ಶ್ರೀಗಳು ಜಗತ್ತನ್ನು ಸುತ್ತಿ ಭಗವದ್ಗೀತೆಯ ಸಂದೇಶವನ್ನು ಸಾರುವ ಕೆಲಸವನ್ನು ಮಾಡುತ್ತಿದ್ದಾರೆ’ ಎಂದರು.</p>.<p>‘ಭಗವದ್ಗೀತೆಯು ಹಿಂದೂ ಧರ್ಮದ ಶ್ರೇಷ್ಠ ಗ್ರಂಥ. ಗೀತೆಯ ಶ್ಲೋಕಗಳನ್ನು ಕಂಠಪಾಠ ಮಾಡುವುದು, ಬರೆಯುವುದು ಅತ್ಯಂತ ಕಷ್ಟದ ಕೆಲಸ, ಆದರೂ ಪುತ್ತಿಗೆ ಶ್ರೀಗಳು ಎಲ್ಲರಲ್ಲೂ ಭಗವದ್ಗೀತೆಯ ಶ್ಲೋಕಗಳನ್ನು ಬರೆಸುವ ಮೂಲಕ ಮಹತ್ಕಾರ್ಯ ಮಾಡಿದ್ದಾರೆ’ ಎಂದು ಹೇಳಿದರು.</p>.<p>ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮಾತನಾಡಿ, ‘ಭಗವಂತನ ಪ್ರೀತಿಗಾಗಿ ಅವನಿಗೆ ಇಷ್ಟವಾದುದನ್ನು ಸಮರ್ಪಿಸಬೇಕು. ಶ್ರೀಕೃಷ್ಣನಿಗೆ ಇಷ್ಟವಾದುದು ಭಗವದ್ಗೀತೆ. ಆದ್ದರಿಂದ ಎಲ್ಲರೂ ಗೀತೆಯನ್ನು ಅನುಸರಿಸಬೇಕು’ ಎಂದು ಪ್ರತಿಪಾದಿಸಿದರು.</p>.<p>‘ಗೀತೆಯ ಪ್ರಚಾರದ ಮೂಲಕ ಭಗವಂತನ ಆರಾಧನೆ ಮಾಡಬೇಕೆಂಬ ಉದ್ದೇಶದಿಂದ ನಾವು ಬೃಹತ್ ಗೀತೋತ್ಸವವನ್ನು ಹಮ್ಮಿಕೊಂಡಿದ್ದೇವೆ. ಕೃಷ್ಣ ಗೀತೆಯಲ್ಲಿ ಏನು ಹೇಳಿದ್ದಾನೆ ಎಂಬುದನ್ನು ನಾವು ತಿಳಿದುಕೊಂಡರೆ ನಾವು ಉದ್ಧಾರವಾಗುತ್ತೇವೆ’ ಎಂದು ಹೇಳಿದರು.</p>.<p>‘ಆಸೆಗಳು ಮನಸ್ಸಿನಲ್ಲಿ ಅಶಾಂತಿ ಉಂಟು ಮಾಡುತ್ತದೆ. ಆಸೆ ಹೆಚ್ಚಾದಂತೆ ಬದುಕು ದುರ್ಬರವಾಗುತ್ತದೆ. ಆದ್ದರಿಂದ ನಾವು ಮನಸ್ಸಿನ ಮೇಲೆ ಆಸೆಯ ಹೊರೆಯನ್ನು ಹಾಕಬಾರದು’ ಎಂದರು.</p>.<p>ಪರ್ಯಾಯ ಪುತ್ತಿಗೆ ಮಠದ ಕಿರಿಯ ಶ್ರೀಸುಶ್ರೀಂದ್ರ ಶ್ರೀ, ಉದ್ಯಮಿ ಶಿವರಾಮ ಶೆಟ್ಟಿ, ಸಮಾಜ ಸೇವಕ ಥಾಮಸ್ ಡಿಸೋಜ ಇದ್ದರು.</p>.<div><blockquote>ಕೃಷ್ಣ ಇಡೀ ಜಗತ್ತಿಗೆ ತಂದೆಯಾಗಿ ಭಗವದ್ಗೀತೆಯ ಮೂಲಕ ಸಂದೇಶವನ್ನು ನೀಡಿದ್ದಾನೆ. ಅದರಂತೆ ನಾವು ಸನ್ಮಾರ್ಗದಲ್ಲಿ ನಡೆದರೆ ದೇವರ ಪ್ರೀತಿಗೆ ಪಾತ್ರರಾಗುತ್ತೇವೆ </blockquote><span class="attribution">ಸುಗುಣೇಂದ್ರ ತೀರ್ಥ ಸ್ವಾಮೀಜಿ ಪರ್ಯಾಯ ಪುತ್ತಿಗೆ ಮಠಾಧೀಶ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: ‘</strong>ಇಂದು ನಮ್ಮ ಜಗತ್ತು ತಲ್ಲಣದಲ್ಲಿದೆ. ಈ ತಲ್ಲಣಕ್ಕೆ ಭಗವದ್ಗೀತೆಯೇ ಔಷಧಿ. ಶ್ರೀಕೃಷ್ಣ ವಿಶ್ವಕ್ಕೆ ನೀಡಿರುವ ದೊಡ್ಡ ಕೊಡುಗೆಯೇ ಗೀತೆ’ ಎಂದು ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಶ್ರೀಪಾದರು ಅಭಿಪ್ರಾಯಪಟ್ಟರು.</p>.<p>ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಬೃಹತ್ ಗೀತೋತ್ಸವದ ಅಂಗವಾಗಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಂತ ಸಂದೇಶ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಬದುಕಿನಲ್ಲಿ ಅಶಾಂತಿ ಇರುತ್ತದೆ, ಅಶಾಂತಿ ಬರುವುದೇ ಶಾಂತಿಯ ಮೂಲವನ್ನು ತಿಳಿಸಲು. ಇಡೀ ವಿಶ್ವಕ್ಕೆ ಶಾಂತಿಯನ್ನು ಬೋಧಿಸಬೇಕೆಂಬ ಉದ್ದೇಶದಿಂದ ಪುತ್ತಿಗೆ ಶ್ರೀಗಳು ಜಗತ್ತನ್ನು ಸುತ್ತಿ ಭಗವದ್ಗೀತೆಯ ಸಂದೇಶವನ್ನು ಸಾರುವ ಕೆಲಸವನ್ನು ಮಾಡುತ್ತಿದ್ದಾರೆ’ ಎಂದರು.</p>.<p>‘ಭಗವದ್ಗೀತೆಯು ಹಿಂದೂ ಧರ್ಮದ ಶ್ರೇಷ್ಠ ಗ್ರಂಥ. ಗೀತೆಯ ಶ್ಲೋಕಗಳನ್ನು ಕಂಠಪಾಠ ಮಾಡುವುದು, ಬರೆಯುವುದು ಅತ್ಯಂತ ಕಷ್ಟದ ಕೆಲಸ, ಆದರೂ ಪುತ್ತಿಗೆ ಶ್ರೀಗಳು ಎಲ್ಲರಲ್ಲೂ ಭಗವದ್ಗೀತೆಯ ಶ್ಲೋಕಗಳನ್ನು ಬರೆಸುವ ಮೂಲಕ ಮಹತ್ಕಾರ್ಯ ಮಾಡಿದ್ದಾರೆ’ ಎಂದು ಹೇಳಿದರು.</p>.<p>ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮಾತನಾಡಿ, ‘ಭಗವಂತನ ಪ್ರೀತಿಗಾಗಿ ಅವನಿಗೆ ಇಷ್ಟವಾದುದನ್ನು ಸಮರ್ಪಿಸಬೇಕು. ಶ್ರೀಕೃಷ್ಣನಿಗೆ ಇಷ್ಟವಾದುದು ಭಗವದ್ಗೀತೆ. ಆದ್ದರಿಂದ ಎಲ್ಲರೂ ಗೀತೆಯನ್ನು ಅನುಸರಿಸಬೇಕು’ ಎಂದು ಪ್ರತಿಪಾದಿಸಿದರು.</p>.<p>‘ಗೀತೆಯ ಪ್ರಚಾರದ ಮೂಲಕ ಭಗವಂತನ ಆರಾಧನೆ ಮಾಡಬೇಕೆಂಬ ಉದ್ದೇಶದಿಂದ ನಾವು ಬೃಹತ್ ಗೀತೋತ್ಸವವನ್ನು ಹಮ್ಮಿಕೊಂಡಿದ್ದೇವೆ. ಕೃಷ್ಣ ಗೀತೆಯಲ್ಲಿ ಏನು ಹೇಳಿದ್ದಾನೆ ಎಂಬುದನ್ನು ನಾವು ತಿಳಿದುಕೊಂಡರೆ ನಾವು ಉದ್ಧಾರವಾಗುತ್ತೇವೆ’ ಎಂದು ಹೇಳಿದರು.</p>.<p>‘ಆಸೆಗಳು ಮನಸ್ಸಿನಲ್ಲಿ ಅಶಾಂತಿ ಉಂಟು ಮಾಡುತ್ತದೆ. ಆಸೆ ಹೆಚ್ಚಾದಂತೆ ಬದುಕು ದುರ್ಬರವಾಗುತ್ತದೆ. ಆದ್ದರಿಂದ ನಾವು ಮನಸ್ಸಿನ ಮೇಲೆ ಆಸೆಯ ಹೊರೆಯನ್ನು ಹಾಕಬಾರದು’ ಎಂದರು.</p>.<p>ಪರ್ಯಾಯ ಪುತ್ತಿಗೆ ಮಠದ ಕಿರಿಯ ಶ್ರೀಸುಶ್ರೀಂದ್ರ ಶ್ರೀ, ಉದ್ಯಮಿ ಶಿವರಾಮ ಶೆಟ್ಟಿ, ಸಮಾಜ ಸೇವಕ ಥಾಮಸ್ ಡಿಸೋಜ ಇದ್ದರು.</p>.<div><blockquote>ಕೃಷ್ಣ ಇಡೀ ಜಗತ್ತಿಗೆ ತಂದೆಯಾಗಿ ಭಗವದ್ಗೀತೆಯ ಮೂಲಕ ಸಂದೇಶವನ್ನು ನೀಡಿದ್ದಾನೆ. ಅದರಂತೆ ನಾವು ಸನ್ಮಾರ್ಗದಲ್ಲಿ ನಡೆದರೆ ದೇವರ ಪ್ರೀತಿಗೆ ಪಾತ್ರರಾಗುತ್ತೇವೆ </blockquote><span class="attribution">ಸುಗುಣೇಂದ್ರ ತೀರ್ಥ ಸ್ವಾಮೀಜಿ ಪರ್ಯಾಯ ಪುತ್ತಿಗೆ ಮಠಾಧೀಶ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>