<p><strong>ಉಡುಪಿ:</strong> ಬ್ರಹ್ಮಾವರ ತಾಲ್ಲೂಕಿನ ಆರೂರು ಗ್ರಾಮದ ಮುಂಡ್ಕಿನಜಡ್ಡುವಿನ ನಿವಾಸಿ ವಿದುಷಿ ದೀಕ್ಷಾ ವಿ. ಅವರು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆಗಾಗಿ ಇದೇ 21 ರಿಂದ 30ರ ವರೆಗೆ 216 ಗಂಟೆಗಳ ನಿರಂತರ ಭರತನಾಟ್ಯ ಪ್ರದರ್ಶನ ನೀಡಲಿದ್ದಾರೆ.</p>.<p>ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ದೀಕ್ಷಾ, ಕಲಾ ಗುರುಗಳಾದ ವಿದ್ವಾನ್ ಶ್ರೀಧರ ರಾವ್ ಅವರ ಮಾರ್ಗದರ್ಶನದಲ್ಲಿ ದಾಖಲೆ ಸಾಧಿಸಲು ಸಜ್ಜಾಗಿದ್ದೇನೆ ಎಂದರು.</p>.<p>ಮಾಜಿ ಶಾಸಕ ರಘುಪತಿ ಭಟ್ ಅವರ ಮಾರ್ಗದರ್ಶನದಲ್ಲಿ ಮಹೇಶ್ ಠಾಕೂರ್ ಅವರ ಮುಂದಾಳತ್ವದ ಮಣಿಪಾಲದ ರತ್ನ ಸಂಜೀವ ಕಲಾಮಂಡಲವು ಈ ಕಾರ್ಯಕ್ರಮಕ್ಕೆ ಬೆನ್ನೆಲುಬಾಗಿ ನಿಂತಿದೆ. ಕಾರ್ಯಕ್ರಮಕ್ಕೆ ‘ನವರಸ ದೀಕ್ಷಾ ವೈಭವಂ’ ಎಂದು ಹೆಸರಿಡಲಾಗಿದೆ ಎಂದು ವಿವರಿಸಿದರು.</p>.<p>ಕಾರ್ಯಕ್ರಮವು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ 21ರಂದು 2 ಗಂಟೆಯಿಂದ ಆರಂಭವಾಗಲಿದೆ ಎಂದು ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ವಿದ್ವಾನ್ ಶ್ರೀಧರ ರಾವ್, ಉಷಾ ಹೆಬ್ಬಾರ್, ಅಶ್ವಿನಿ ಮಹೇಶ್ ಠಾಕೂರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಬ್ರಹ್ಮಾವರ ತಾಲ್ಲೂಕಿನ ಆರೂರು ಗ್ರಾಮದ ಮುಂಡ್ಕಿನಜಡ್ಡುವಿನ ನಿವಾಸಿ ವಿದುಷಿ ದೀಕ್ಷಾ ವಿ. ಅವರು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆಗಾಗಿ ಇದೇ 21 ರಿಂದ 30ರ ವರೆಗೆ 216 ಗಂಟೆಗಳ ನಿರಂತರ ಭರತನಾಟ್ಯ ಪ್ರದರ್ಶನ ನೀಡಲಿದ್ದಾರೆ.</p>.<p>ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ದೀಕ್ಷಾ, ಕಲಾ ಗುರುಗಳಾದ ವಿದ್ವಾನ್ ಶ್ರೀಧರ ರಾವ್ ಅವರ ಮಾರ್ಗದರ್ಶನದಲ್ಲಿ ದಾಖಲೆ ಸಾಧಿಸಲು ಸಜ್ಜಾಗಿದ್ದೇನೆ ಎಂದರು.</p>.<p>ಮಾಜಿ ಶಾಸಕ ರಘುಪತಿ ಭಟ್ ಅವರ ಮಾರ್ಗದರ್ಶನದಲ್ಲಿ ಮಹೇಶ್ ಠಾಕೂರ್ ಅವರ ಮುಂದಾಳತ್ವದ ಮಣಿಪಾಲದ ರತ್ನ ಸಂಜೀವ ಕಲಾಮಂಡಲವು ಈ ಕಾರ್ಯಕ್ರಮಕ್ಕೆ ಬೆನ್ನೆಲುಬಾಗಿ ನಿಂತಿದೆ. ಕಾರ್ಯಕ್ರಮಕ್ಕೆ ‘ನವರಸ ದೀಕ್ಷಾ ವೈಭವಂ’ ಎಂದು ಹೆಸರಿಡಲಾಗಿದೆ ಎಂದು ವಿವರಿಸಿದರು.</p>.<p>ಕಾರ್ಯಕ್ರಮವು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ 21ರಂದು 2 ಗಂಟೆಯಿಂದ ಆರಂಭವಾಗಲಿದೆ ಎಂದು ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ವಿದ್ವಾನ್ ಶ್ರೀಧರ ರಾವ್, ಉಷಾ ಹೆಬ್ಬಾರ್, ಅಶ್ವಿನಿ ಮಹೇಶ್ ಠಾಕೂರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>