<p><strong>ಉಡುಪಿ:</strong> ಬ್ರಹ್ಮಾವರ ತಾಲ್ಲೂಕಿನ ಆರೂರು ಗ್ರಾಮದ ಮುಂಡ್ಕಿನಜಡ್ಡುವಿನ ನಿವಾಸಿ ವಿದುಷಿ ದೀಕ್ಷಾ ವಿ. ಅವರು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆಗಾಗಿ 216 ಗಂಟೆಗಳ ನಿರಂತರ ಭರತನಾಟ್ಯ ಪ್ರದರ್ಶನವನ್ನು ಗುರುವಾರ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಆರಂಭಿಸಿದರು.</p>.<p>ಭರತನಾಟ್ಯಕ್ಕೂ ಮೊದಲು ನಡೆದ ಸಮಾರಂಭವನ್ನು ಮಾಜಿ ಶಾಸಕ ರಘುಪತಿ ಭಟ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯಾವುದೇ ಸಾಧನೆ ಮಾಡಲು ಸಂಕಲ್ಪ ಮತ್ತು ಧೈರ್ಯ ಅತಿ ಮುಖ್ಯ. ದೀಕ್ಷಾ ಅವರು ಧೈರ್ಯದಿಂದ ಇಂತಹ ಸಾಧನೆ ಮಾಡಲು ಹೊರಟಿದ್ದಾರೆ ಎಂದರು.</p>.<p>ದೀಕ್ಷಾ ಮಾತನಾಡಿ, ನಿರಂತರ 24 ಗಂಟೆಗಳ ಕಾಲ ಹಾಡು ಹಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನಲ್ಲಿ ದಾಖಲೆ ಮಾಡಿದ ಯಶವಂತ್ ಎಂ.ಜಿ. ಅವರ ಪ್ರೇರಣೆಯಿಂದ ಈ ದಾಖಲೆಗೆ ಹೊರಟಿದ್ದೇನೆ ಎಂದು ತಿಳಿಸಿದರು.</p>.<p>ಮಣಿಪಾಲದ ರತ್ನ ಸಂಜೀವ ಕಲಾಮಂಡಲವು ಈ ಕಾರ್ಯಕ್ರಮಕ್ಕೆ ಸಹಕಾರ ನೀಡಿದೆ. ಡಾ. ಜಿ.ಶಂಕರ್ ಮಹಿಳಾ ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ಸೋಜನ್ ಕೆ.ಜಿ., ಗೀತಾಂಜಲಿ ಸುವರ್ಣ, ಅಶ್ವಿನಿ ಮಹೇಶ್ ಠಾಕೂರ್, ವೀಣಾ ಶೆಟ್ಟಿ ಇದ್ದರು. ಮಹೇಶ್ ಠಾಕೂರ್ ಸ್ವಾಗತಿಸಿದರು. ರಾಮಚಂದ್ರ ಪಾಟ್ಕರ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಬ್ರಹ್ಮಾವರ ತಾಲ್ಲೂಕಿನ ಆರೂರು ಗ್ರಾಮದ ಮುಂಡ್ಕಿನಜಡ್ಡುವಿನ ನಿವಾಸಿ ವಿದುಷಿ ದೀಕ್ಷಾ ವಿ. ಅವರು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆಗಾಗಿ 216 ಗಂಟೆಗಳ ನಿರಂತರ ಭರತನಾಟ್ಯ ಪ್ರದರ್ಶನವನ್ನು ಗುರುವಾರ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಆರಂಭಿಸಿದರು.</p>.<p>ಭರತನಾಟ್ಯಕ್ಕೂ ಮೊದಲು ನಡೆದ ಸಮಾರಂಭವನ್ನು ಮಾಜಿ ಶಾಸಕ ರಘುಪತಿ ಭಟ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯಾವುದೇ ಸಾಧನೆ ಮಾಡಲು ಸಂಕಲ್ಪ ಮತ್ತು ಧೈರ್ಯ ಅತಿ ಮುಖ್ಯ. ದೀಕ್ಷಾ ಅವರು ಧೈರ್ಯದಿಂದ ಇಂತಹ ಸಾಧನೆ ಮಾಡಲು ಹೊರಟಿದ್ದಾರೆ ಎಂದರು.</p>.<p>ದೀಕ್ಷಾ ಮಾತನಾಡಿ, ನಿರಂತರ 24 ಗಂಟೆಗಳ ಕಾಲ ಹಾಡು ಹಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನಲ್ಲಿ ದಾಖಲೆ ಮಾಡಿದ ಯಶವಂತ್ ಎಂ.ಜಿ. ಅವರ ಪ್ರೇರಣೆಯಿಂದ ಈ ದಾಖಲೆಗೆ ಹೊರಟಿದ್ದೇನೆ ಎಂದು ತಿಳಿಸಿದರು.</p>.<p>ಮಣಿಪಾಲದ ರತ್ನ ಸಂಜೀವ ಕಲಾಮಂಡಲವು ಈ ಕಾರ್ಯಕ್ರಮಕ್ಕೆ ಸಹಕಾರ ನೀಡಿದೆ. ಡಾ. ಜಿ.ಶಂಕರ್ ಮಹಿಳಾ ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ಸೋಜನ್ ಕೆ.ಜಿ., ಗೀತಾಂಜಲಿ ಸುವರ್ಣ, ಅಶ್ವಿನಿ ಮಹೇಶ್ ಠಾಕೂರ್, ವೀಣಾ ಶೆಟ್ಟಿ ಇದ್ದರು. ಮಹೇಶ್ ಠಾಕೂರ್ ಸ್ವಾಗತಿಸಿದರು. ರಾಮಚಂದ್ರ ಪಾಟ್ಕರ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>