2016ರ ಜುಲೈ 28ರಲ್ಲಿ ನಡೆದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ರಾಜ್ಯದಾದ್ಯಂತ ಸುದ್ದಿಯಾಗಿತ್ತು. ಭಾಸ್ಕರ್ ಶೆಟ್ಟಿ ಅವರ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ನಿರಂಜನ್ ಭಟ್ ಅವರನ್ನು ಕೊಲೆ ಪ್ರಕರಣದಡಿ ಬಂಧಿಸಲಾಗಿದೆ. ಆರೋಪಿಗಳು ಇನ್ನೂ ಜೈಲಿನಲ್ಲಿದ್ದು, ಜಾಮೀನಿಗಾಗಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಸಾಕ್ಷಿಗಳ ಹಾಗೂ ಆರೋಪಿಗಳ ವಿಚಾರಣೆ ಆರಂಭಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಜುಲೈ2ರಿಂದ ವಿಚಾರಣೆ ಆರಂಭವಾಗಿದೆ