ಮಾನವ ಸಂಬಂಧಗಳನ್ನು ಬೆಳಗಿಸುವ, ಗಾಢಗೊಳಿಸುವ ದೀಪಾವಳಿ ಮತ್ತೊಮ್ಮೆ ಬಂದಿದೆ. ಕೋವಿಡ್ ಭೀತಿಯಿಂದ ಮುಕ್ತಗೊಳ್ಳುವ ಶುಭ ಸಮಯದಲ್ಲಿ ಭರವಸೆಯ ದೀಪವನ್ನು ಬೆಳಗಿಸುವ ಹಬ್ಬ ದೀಪಾವಳಿಯಾಗಿದೆ. ಪ್ರತಿಯೊಬ್ಬರೂ ಒಂದು ದೀಪವಿದ್ದಂತೆ, ಪರರ ಬಾಳನ್ನು ಅರಳಿಸುವುದೇ ಜೀವನದ ಉದ್ದೇಶವಾಗಬೇಕು. ದುಷ್ಟಶಕ್ತಿಯನ್ನು ನಾಶಪಡಿಸಿ ಒಳ್ಳೆಯತನ ವಿಜಯ ಸಾಧಿಸಿದ ಘಟನೆಗಳನ್ನು ಧ್ಯಾನಿಸುವುದರ ಜತೆಗೆ ಎಲ್ಲರೂ ಸಂತೋಷದಿಂದ ಸಿಹಿ ಹಂಚಿ ಸಂಭ್ರಮಿಸಿ. ಎಲ್ಲರ ಮನೆ ಮನಗಳಲ್ಲೂ ಗೆಳೆತನ, ಆತ್ಮೀಯತೆ, ಸಹೋದರತ್ವ ತುಂಬಿ ತುಳುಕಲಿ. ದೀಪಾವಳಿ ಹಬ್ಬದಲ್ಲಿ ಸ್ವಾತಂತ್ರ್ಯ, ಸಂಭ್ರಮ ಹಾಗೂ ಸಹೋದರತ್ವದ ಅಂಶಗಳು ಅಡಕವಾಗಿವೆ.