<p><strong>ಉಡುಪಿ:</strong> ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರನ್ನು ಮಂಗಳವಾರ ಭೇಟಿಯಾದಉಡುಪಿಯ ಧರ್ಮಾಧ್ಯಕ್ಷ ಜೆರಾಲ್ಡ್ ಲೋಬೊ ಅವರು, ಶ್ರೀಗಳು ಶೀಘ್ರ ಗುಣಮುಖರಾಗುವಂತೆ ಚರ್ಚ್ನಲ್ಲಿ ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದರು.</p>.<p>ಸ್ವಾಮೀಜಿ ಚೇತರಿಕೆಗೆ ಹಲವೆಡೆ ವಿಶೇಷ ಪೂಜೆ, ಪ್ರಾರ್ಥನೆಗಳು ಮುಂದುವರಿದಿವೆ.ಪೂರ್ಣಪ್ರಜ್ಞ ಪೀಠ, ಕೃಷ್ಣಮಠ, ಅನಂತೇಶ್ವರ, ಚಂದ್ರಮೌಳೇಶ್ವರ ದೇವಸ್ಥಾನಗಳಲ್ಲಿ ನಿತ್ಯ ಪೂಜೆಗಳು ನಡೆಯುತ್ತಿವೆ.</p>.<p>ಪೇಜಾವರ ಶ್ರೀಗಳು ಗುಣಮುಖರಾಗಲಿ, ಕೃಷ್ಣಪೂಜೆ ಮಾಡುವಂತಾಗಲಿ ಎಂದು ನಿತ್ಯ ಲಕ್ಷ ತುಳಸಿ ಅರ್ಚನೆಯ ವೇಳೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ ಎಂದು ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಶ್ರೀಗಳು ತಿಳಿಸಿದರು.</p>.<p><strong>ವೈದ್ಯಕೀಯ ನೆರವು:</strong> ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಕೆಎಂಸಿ ವೈದ್ಯರ ಜತೆ ನಿರಂತರ ಸಂಪರ್ಕದಲ್ಲಿದ್ದು, ತುರ್ತು ವೈದ್ಯಕೀಯ ನೆರವು ಅಗತ್ಯಬಿದ್ದರೆ ತಿಳಿಸುವಂತೆ ಸೂಚಿಸಿರುವುದಾಗಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ತಿಳಿಸಿದರು.</p>.<p><strong>ಚಿಕಿತ್ಸೆಗೆ ಸ್ಪಂದನೆ:</strong> ಶ್ರೀಗಳು ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದು ಚಿಕಿತ್ಸೆಗೆ ನಿಧಾನವಾಗಿ ಸ್ಪಂದಿಸುತ್ತಿದ್ದಾರೆ. ಆರೋಗ್ಯ ಸ್ಥಿತಿ ಸುಧಾರಿಸಲು ಹೆಚ್ಚು ಸಮಯ ಬೇಕಾಗಬಹುದು ಎಂದು ಬೆಂಗಳೂರು ಮಣಿಪಾಲ್ ಆಸ್ಪತ್ರೆಯ ಶ್ವಾಸಕೋಶ ವಿಭಾಗದ ತಜ್ಞ ವೈದ್ಯ ಡಾ.ಸತ್ಯನಾರಾಯಣ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರನ್ನು ಮಂಗಳವಾರ ಭೇಟಿಯಾದಉಡುಪಿಯ ಧರ್ಮಾಧ್ಯಕ್ಷ ಜೆರಾಲ್ಡ್ ಲೋಬೊ ಅವರು, ಶ್ರೀಗಳು ಶೀಘ್ರ ಗುಣಮುಖರಾಗುವಂತೆ ಚರ್ಚ್ನಲ್ಲಿ ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದರು.</p>.<p>ಸ್ವಾಮೀಜಿ ಚೇತರಿಕೆಗೆ ಹಲವೆಡೆ ವಿಶೇಷ ಪೂಜೆ, ಪ್ರಾರ್ಥನೆಗಳು ಮುಂದುವರಿದಿವೆ.ಪೂರ್ಣಪ್ರಜ್ಞ ಪೀಠ, ಕೃಷ್ಣಮಠ, ಅನಂತೇಶ್ವರ, ಚಂದ್ರಮೌಳೇಶ್ವರ ದೇವಸ್ಥಾನಗಳಲ್ಲಿ ನಿತ್ಯ ಪೂಜೆಗಳು ನಡೆಯುತ್ತಿವೆ.</p>.<p>ಪೇಜಾವರ ಶ್ರೀಗಳು ಗುಣಮುಖರಾಗಲಿ, ಕೃಷ್ಣಪೂಜೆ ಮಾಡುವಂತಾಗಲಿ ಎಂದು ನಿತ್ಯ ಲಕ್ಷ ತುಳಸಿ ಅರ್ಚನೆಯ ವೇಳೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ ಎಂದು ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಶ್ರೀಗಳು ತಿಳಿಸಿದರು.</p>.<p><strong>ವೈದ್ಯಕೀಯ ನೆರವು:</strong> ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಕೆಎಂಸಿ ವೈದ್ಯರ ಜತೆ ನಿರಂತರ ಸಂಪರ್ಕದಲ್ಲಿದ್ದು, ತುರ್ತು ವೈದ್ಯಕೀಯ ನೆರವು ಅಗತ್ಯಬಿದ್ದರೆ ತಿಳಿಸುವಂತೆ ಸೂಚಿಸಿರುವುದಾಗಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ತಿಳಿಸಿದರು.</p>.<p><strong>ಚಿಕಿತ್ಸೆಗೆ ಸ್ಪಂದನೆ:</strong> ಶ್ರೀಗಳು ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದು ಚಿಕಿತ್ಸೆಗೆ ನಿಧಾನವಾಗಿ ಸ್ಪಂದಿಸುತ್ತಿದ್ದಾರೆ. ಆರೋಗ್ಯ ಸ್ಥಿತಿ ಸುಧಾರಿಸಲು ಹೆಚ್ಚು ಸಮಯ ಬೇಕಾಗಬಹುದು ಎಂದು ಬೆಂಗಳೂರು ಮಣಿಪಾಲ್ ಆಸ್ಪತ್ರೆಯ ಶ್ವಾಸಕೋಶ ವಿಭಾಗದ ತಜ್ಞ ವೈದ್ಯ ಡಾ.ಸತ್ಯನಾರಾಯಣ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>