ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಪ್ರಕೋಷ್ಠಗಳಿಂದ ಪಕ್ಷಕ್ಕೆ ಬಲ: ಕಿಶೋರ್ ಕುಮಾರ್

Published : 15 ಸೆಪ್ಟೆಂಬರ್ 2024, 2:51 IST
Last Updated : 15 ಸೆಪ್ಟೆಂಬರ್ 2024, 2:51 IST
ಫಾಲೋ ಮಾಡಿ
Comments
ಸಂವಿಧಾನಕ್ಕೆ ಗೌರವ ಕೊಡದ ರಾಹುಲ್‌
ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಪ್ರಜಾಪ್ರಭುತ್ವಕ್ಕೆ, ಸಂವಿಧಾನಕ್ಕೆ ಗೌರವ ಕೊಡುತ್ತಿಲ್ಲ. ವಿದೇಶಿ ನೆಲದಲ್ಲಿ ಭಾರತದ ಗೌರವಕ್ಕೆ ಚ್ಯುತಿ ತರುವ ರೀತಿಯಲ್ಲಿ ನಡೆದು ಕೊಳ್ಳುತ್ತಿದ್ದಾರೆ. ಭಾರತದ ಏಳಿಗೆಯನ್ನು ಸಹಿಸದ ಪಾಶ್ಚತ್ಯ ಶಕ್ತಿಗಳು ರಾಹುಲ್‌ ಅವರನ್ನು ದಾಳವಾಗಿ ಬಳಸುತ್ತಿವೆಯೇ ಎಂಬ ಸಂಶಯ ಕಾಡುತ್ತಿದೆ. ಭಾರತದ ಏಕತೆ, ಅಖಂಡತೆಗೆ ಚ್ಯುತಿ ತರಲು ಯತ್ನಿಸಿದವರ ಜೊತೆಗೆ ರಾಹುಲ್‌ ಅವರು ವೇದಿಕೆ ಹಂಚಿಕೊಂಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಆರೋಪಿಸಿದರು.
‘ಅಶಾಂತಿಯ ಕೊಡುಗೆ’
ಬಹುಮತದಿಂದ ಆಯ್ಕೆಯಾಗಿರುವ ಕಾಂಗ್ರೆಸ್‌ ಸರ್ಕಾರವು ರಾಜ್ಯದ ಜನರಿಗೆ ಅಶಾಂತಿಯ ಕೊಡುಗೆ ನೀಡಿದೆ ಎಂದು ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಸುವ ಸಲುವಾಗಿ ಬಹುಸಂಖ್ಯಾತರನ್ನು ನಿರ್ಲಕ್ಷಿಸಿದೆ. ಗಣಪತಿ ಮೂರ್ತಿ ಮೆರವಣಿಗೆ ನಡೆಸುವವರ ಮೇಲೆ ಅನಾವಶ್ಯಕವಾಗಿ ಪ್ರಕರಣ ದಾಖಲಿಸಿದೆ. ಮಂಡ್ಯದ ನಾಗಮಂಗಲದಲ್ಲಿ ಗಣಪತಿ ಮೂರ್ತಿಯ ಮೆರವಣಿಗೆಯ ವೇಳೆ ಪೊಲೀಸ್‌ ಭದ್ರತೆ ಇರಲಿಲ್ಲ. ಇದರಿಂದಾಗಿ ಗಲಭೆ ನಡೆದಿದೆ. ಅಲ್ಲದೆ ಹಿಂದೂ ಹಬ್ಬಗಳಿಗೆ ಹಲವಾರು ಕಟ್ಟುಪಾಡುಗಳನ್ನು ವಿಧಿಸಲಾಗಿದೆ. ಹಿಂದೂಗಳ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡಲು ಸರ್ಕಾರವು ಪ್ರಯತ್ನಿಸುತ್ತಿದೆ. ನಾಗಮಂಗಲಕ್ಕೆ ಇದುವರೆಗೆ ಗೃಹಸಚಿವರು ಭೇಟಿ ನೀಡಿಲ್ಲ ಎಂದು ಆರೋಪಿಸಿದರು. ಗಣೇಶೋತ್ಸವ ಸಂಘಟಕರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಸರ್ಕಾರ ಕೂಡಲೇ ವಾಪಸ್‌ ಪಡೆಯಬೇಕು. ಗಲಭೆಯ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಹಾಲಿನ ದರ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಹೇಳಿರುವುದು ಹಾಸ್ಯಾಸ್ಪದ. ಸರ್ಕಾರದಿಂದ ರೈತರಿಗೆ ಯಾವುದೇ ನೆರವು ಸಿಗುತ್ತಿಲ್ಲ. ರಾಜ್ಯದ ಹಣಕಾಸಿನ ನಿರ್ವಹಣೆಯಲ್ಲಿ ಸಿದ್ದರಾಮಯ್ಯ ಸಂಪೂರ್ಣ ವಿಫಲರಾಗಿದ್ದಾರೆ. ಇದರಿಂದ ಅಭಿವೃದ್ಧಿ ಶೂನ್ಯವಾಗಿದೆ. ಶಾಸಕರಿಗೆ ಅನುದಾನ ಬಿಡುಗಡೆಯಾಗುತ್ತಿಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT